ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಸಿಸಿಬಿ


Team Udayavani, Apr 9, 2019, 3:00 AM IST

Udayavani Kannada Newspaper

ಬೆಂಗಳೂರು: ಮಹಾರಾಷ್ಟ್ರದ ಅಮರಾವತಿಯಿಂದ ನಾಡಪಿಸ್ತೂಲ್‌ (ಕಂಟ್ರಿಮೆಡ್‌)ಗಳನ್ನು ತಂದು ನಗರದಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಬೃಹತ್‌ ಜಾಲವನ್ನು ಭೇದಿಸಿರುವ ಸಿಸಿಬಿ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.

ಹೆಬ್ಟಾಳದ ಶಕೀಲ್‌ ಅಹಮದ್‌ (24), ರಾಜಸ್ಥಾನದ ಶರ್ವಣ್‌ ಕತ್ರಿ (32), ಮಹಾರಾಷ್ಟ್ರದ ಅಮರಾವತಿಯ ಇಮ್ರಾನ್‌ಖಾನ್‌ (31), ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಲೀಲ್‌ ಉಮರ್‌ (29), ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ರಫಿ ಅಹಮದ್‌ ಖಾನ್‌ (26), ನಾಗವಾರ ಮುಖ್ಯರಸ್ತೆಯ ಗೋವಿಂದಪುರ ನಿವಾಸಿ ಸೈಯದ್‌ ವಸೀಂ (25), ಮಂಬೈನ ಮೊಹಮ್ಮದ್‌ ಹಸನ್‌ ಅನ್ಸಾರಿ (43), ಉತ್ತರಪ್ರದೇಶದ ಮುಜಾಫ‌ರ್‌ನಗರದ ಇಮ್ರಾನ್‌ (23) ಬಂಧಿತರು.

ಆರೋಪಿಗಳಿಂದ ಎರಡು ನಾಡಪಿಸ್ತೂಲ್‌ (ಕಂಟ್ರಿಮೆಡ್‌)ಗಳು, ಎಂಟು ಜೀವಂತ ಗುಂಡುಗಳು, ಒಂದು ಏರ್‌ಗನ್‌, 500 ಎಂ.ಎಲ್‌. ಕ್ಲೋರೋಫಾಮ್‌, 55 ಸಾವಿರ ರೂ. ನಗದು, ಒಂದು ಕಾರು, ಎರಡು ರಾಯಲ್‌ ಎನ್‌ಫಿಲ್ಡ್‌ ಬುಲೆಟ್‌ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಆರೋಪಿಗಳ ಪೈಕಿ ಇಮ್ರಾನ್‌ಖಾನ್‌ ಮತ್ತು ಮೊಹಮ್ಮದ್‌ ಹಸನ್‌ ಅನ್ಸಾರಿ ಮಹಾರಾಷ್ಟ್ರದ ಅಮರಾವತಿಯಿಂದ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ನಗರಕ್ಕೆ ತಂದಿದ್ದು, ಆರ್‌.ಟಿ.ನಗರದ ತರಳಬಾಳು ರಸ್ತೆಯಲ್ಲಿ ಇತರೆ ಆರು ಮಂದಿಗಳಿಗೆ ಮಾರಾಟಕ್ಕೆ ಯತ್ನಿಸಿದ್ದರು. ಈ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ ಎಂದರು.

ಹತ್ತಾರು ವರ್ಷಗಳಿಂದ ಪಿಸ್ತೂಲ್‌ ಮಾರಾಟವನ್ನೇ ವೃತ್ತಿಯನ್ನಾಗಿಸಿಕೊಂಡಿರುವ ಇಮ್ರಾನ್‌ ಖಾನ್‌ ಮತ್ತು ಮೊಹಮ್ಮದ್‌ ಹಸನ್‌ ಅನ್ಸಾರಿ ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಶೇಷಾದ್ರಿಪುರದಲ್ಲಿರುವ ಡ್ಯಾನ್ಸ್‌ ಬಾರ್‌ವೊಂದಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಹೆಬ್ಟಾಳದ ಶಕೀಲ್‌ ಅಹಮದ್‌ ಪರಿಚಯವಾಗಿದೆ. ಬಳಿಕ ಮೂವರು ನಗರದಲ್ಲಿ ಅಕ್ರಮ ಪಸ್ತೂಲ್‌ ಮಾರಾಟ ದಂಧೆ ವಿಸ್ತರಿಸಲು ಸಂಚು ರೂಪಿಸಿದ್ದರು ಎಂದು ಅವರು ಹೇಳಿದರು.

ರೈಸ್‌ಪುಲ್ಲಿಂಗ್‌, ನಿಧಿ ಹೆಸರಿನಲ್ಲಿ ವಂಚನೆ: ಆರೋಪಿಗಳು ಅಕ್ರಮ ಪಿಸ್ತೂಲ್‌ ಮಾರಾಟ ದಂಧೆ ಮಾತ್ರವಲ್ಲದೆ, ರೈಸ್‌ಪುಲ್ಲಿಂಗ್‌ ಹಾಗೂ ನಿಧಿ ಹುಡುಕಾಟ ಹೆಸರಿನಲ್ಲಿ ಹತ್ತಾರು ಮಂದಿಗೆ ಲಕ್ಷಾಂತರ ರೂ. ವಂಚನೆ ಮಾಡಿರುವುದು ತಿಳಿದು ಬಂದಿದೆ.

ಜತೆಗೆ ತಮ್ಮ ಬಳಿಯಿರುವ ಕಟ್ಟರ್‌ಗಳಿಂದ ಮನೆಗಳ ಬೀಗ ಮುರಿದು ಮನೆಗಳ್ಳತನ, ಸುಲಿಗೆ ಹಾಗೂ ಕೆಲವಡೆ ದರೋಡೆ ಕೂಡ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಚೆನ್ನೈನ ಕೆಲ ಠಾಣೆಗಳಲ್ಲಿಯೂ ವಂಚನೆ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿಯಿದ್ದು, ಹೆಚ್ಚಿನ ವಿಚಾರಣೆಗಾಗಿ ಎಲ್ಲ ಆರೋಪಿಗಳನ್ನು ಎಂಟು ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ಬಳಿ ಕ್ಲೋರೋಫಾಮ್‌ ಪತ್ತೆಯಾಗಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಆರೋಪಿಗಳು ಕೃತ್ಯಕ್ಕೂ ಮೊದಲು ಕ್ಲೋರೋಫಾಮ ಸೇವಿಸಿ ಅದರ ಅಮಲಿನಲ್ಲಿ ಕಳ್ಳತನ ಮತ್ತಿತರ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದರು ಎಂದು ಹೇಳಿದರು.

ಕಪ್ಪು ಅರಿಶಿನಪುಡಿ ಬಳಕೆ: ತಮ್ಮ ಬಳಿಯಿರುವ “ಕಪ್ಪು ಅರಿಶಿನಪುಡಿ’ಯಿಂದ ಮನೆ ಹಾಗೂ ಅಂಗಡಿಗಳ ಕೀಗಳನ್ನು ಸುಲಭವಾಗಿ ಕತ್ತರಿಸಬಹುದು ಎಂದು ನಂಬಿಸುತ್ತಿದ್ದ ಆರೋಪಿಗಳು, ಪ್ರತಿ ಕೆ.ಜಿ.ಗೆ 10 ಕೋಟಿ ರೂ. ನಿಗದಿ ಮಾಡಿದ್ದರು. ಇದನ್ನು ನಂಬಿ ಖರೀದಿ ಮಾಡಲು ಬರುತ್ತಿದ್ದ ವ್ಯಕ್ತಿಗಳಿಗೆ ಪಿಸ್ತೂಲ್‌ ತೋರಿಸಿ ಸುಲಿಗೆ ಮಾಡುತ್ತಿದ್ದರು. ಆದರೆ, ಇದುವರೆಗೂ ಈ ಸಂಬಂಧ ಯಾರು ದೂರು ನೀಡಿಲ್ಲ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.