ಕ್ರಿಕೆಟ್ ಬೆಟ್ಟಿಂಗ್: ಎಂಟು ಮಂದಿ ಬಂಧನ
Team Udayavani, Apr 9, 2019, 3:00 AM IST
ಬೆಂಗಳೂರು: ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು ಇದುವರೆಗೂ ಎಂಟು ಮಂದಿಯನ್ನು ಬಂಧಿಸಿದ್ದು, ಲಕ್ಷಾಂತರ ರೂ. ವಶಪಡಿಸಿಕೊಂಡಿದ್ದಾರೆ.
ನೆಲಮಂಗಲದ ನಟರಾಜ, ಹೇಮಂತ್ ಜೈನ್, ಮುಕೇಶ್ ಕುಮಾರ್, ಪ್ರವೀಣ್ ಕುಮಾರ್, ಮಧು, ಶೇಖ್ ಶಫಿ, ವಿಶ್ವನಾಥ್, ಎಚ್.ವಿ.ಚೌಡೇಗೌಡ ಬಂಧಿತರು. ಪ್ರಕರಣದ ಪ್ರಮುಖ ಆರೋಪಿ ಬಸವರಾಜು ಎಂಬಾತನ ಪತ್ತೆಗಾಗಿ ಪ್ರತ್ಯೇಕ ತಂಡ ರಚಿಸಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದರು.
ತಲೆಮರೆಸಿಕೊಂಡಿರುವ ಬಸವರಾಜು ಹತ್ತಾರು ವರ್ಷಗಳಿಂದ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದು, ಕೋಟ್ಯಂತರ ರೂ. ಆಸ್ತಿ ಹಾಗೂ ದುಬಾರಿ ಬೆಲೆಯ ಜಾಗ್ವಾರ್ ಕಾರು ಖರೀದಿ ಮಾಡಿದ್ದಾನೆ. ಆ್ಯಪ್ ಮೂಲಕ ಟಿ-20, ಏಕದಿನ ಕ್ರಿಕೆಟ್ ಸೇರಿ ಎಲ್ಲ ರೀತಿಯ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಎಂದು ಅಲೋಕ್ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !