ಅರುಣಾಚಲದ ಕಣದಲ್ಲಿ 131 ಕೋಟ್ಯಧಿಪತಿಗಳು


Team Udayavani, Apr 9, 2019, 6:00 AM IST

c-13

ಅರುಣಾಚಲ ಪ್ರದೇಶದ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 184 ಅಭ್ಯರ್ಥಿಗಳ ಪೈಕಿ 131 ಮಂದಿ ಕೋಟ್ಯಧಿಪತಿಗಳು! ಹೌದು ಈ ಅಭ್ಯರ್ಥಿಗಳು ಸಲ್ಲಿಸಿರುವ ಅಫಿದವಿತ್‌ಗಳೇ ಇದಕ್ಕೆ ಸಾಕ್ಷಿ. ಈ ಕೋಟ್ಯಧಿಪತಿಗಳ ಪೈಕಿ ಸತತ 3ನೇ ಬಾರಿಗೆ ಮುಕೊ¤à ಅಸೆಂಬ್ಲಿ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು ಅವರೇ ಆಗರ್ಭ ಶ್ರೀಮಂತರು ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಪೆಮಾ ಅವರ ಒಟ್ಟು ಆಸ್ತಿ ಮೌಲ್ಯ 163 ಕೋಟಿ ರೂ.ಗಳು. ಇಲ್ಲಿನ ಅಭ್ಯರ್ಥಿಗಳಲ್ಲಿ 67 ಮಂದಿ 5 ಕೋಟಿಗಿಂತಲೂ ಹೆಚ್ಚಿನ ಮೌಲ್ಯದ ಆಸ್ತಿಪಾಸ್ತಿ ಹೊಂದಿದ್ದರೆ, 44 ಅಭ್ಯರ್ಥಿಗಳು 2 ರಿಂದ 5 ಕೋಟಿ ರೂ.ಗಳವರೆಗಿವ ಆಸ್ತಿ ಹೊಂದಿದ್ದಾರೆ.

ಮೋದಿ ಸಿನೆಮಾಗೆ ತಡೆ ಆದೇಶ ನೀಡಲಾಗದು
ಪ್ರಧಾನಿ ಮೋದಿ ಜೀವನಚರಿತ್ರೆ ಆಧಾರಿತ “ಪಿಎಂ ನರೇಂದ್ರ ಮೋದಿ’ ಸಿನೆಮಾ ಬಿಡುಗಡೆಗೆ ಸದ್ಯಕ್ಕೆ ತಡೆ ತರಲಾಗದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಸಿನೆಮಾಗೆ ಇನ್ನೂ ಸಿಬಿಎಫ್ಸಿ ಪ್ರಮಾಣಪತ್ರ ನೀಡಿಲ್ಲ. ಹೀಗಾಗಿ ಈಗಲೇ ಚಿತ್ರಕ್ಕೆ ತಡೆ ತಂದು ಆದೇಶ ಹೊರಡಿಸಲಿಕ್ಕಾಗು ವುದಿಲ್ಲ. ಮಂಗಳವಾರದ ವಿಚಾರಣೆ ವೇಳೆ, ಸಿನೆಮಾದಲ್ಲಿನ ಆಕ್ಷೇಪಾರ್ಹ ಅಂಶಗಳ ಬಗ್ಗೆ ಅರ್ಜಿದಾರರು ನಮ್ಮ ಗಮನಕ್ಕೆ ತಂದರೆ ಆಗ ಆದೇಶ ಹೊರಡಿಸುವ ಕುರಿತು ಚಿಂತನೆ ನಡೆ ಸುತ್ತೇವೆ ಎಂದು ಸಿಜೆಐ ರಂಜನ್‌ ಗೊಗೋಯ್‌ ಹೇಳಿದ್ದಾರೆ. ಇದೇ ವೇಳೆ, ಸಿನೆಮಾದ ಪ್ರತಿಯನ್ನು ನೀಡಬೇಕೆಂಬ ಅರ್ಜಿದಾರರ ಕೋರಿಕೆಯನ್ನೂ ಕೋರ್ಟ್‌ ತಿರಸ್ಕರಿಸಿತು.

ಐಟಿ ದಾಳಿ: 14.6 ಕೋಟಿ ರೂ. ವಶ
ಮಧ್ಯಪ್ರದೇಶ ಸಿಎಂ ಕಮಲ್‌ನಾಥ್‌ ಆಪ್ತರ ಮನೆ, ನಿವಾಸಗಳ ಮೇಲಿನ ಐಟಿ ದಾಳಿ ಸೋಮವಾರವೂ ಮುಂದುವರಿದಿದೆ. ಚುನಾವಣೆ ಸಮಯ ದಲ್ಲಿ ತೆರಿಗೆ ತಪ್ಪಿಸುವಿಕೆ ಹಾಗೂ ಹವಾಲಾ ವ್ಯವಹಾರಗಳ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಲೆಕ್ಕ ಸಿಗದ 14.6 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಟಿ ಇಲಾಖೆ ಹೇಳಿದೆ. ಇದೇ ವೇಳೆ, ದಾಳಿ ಕುರಿತು ನಮಗೆ ಐಟಿ ಇಲಾಖೆಯಿಂದ ಯಾವುದೇ ಮಾಹಿತಿ ಬಂದಿರಲಿಲ್ಲ ಎಂದು ಮಧ್ಯಪ್ರದೇಶ ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ, ಈ ಕುರಿತು ಚುನಾ ವಣಾ ಆಯೋಗದ ಗಮನಕ್ಕೆ ತಂದಿದ್ದೇನೆ ಎಂದೂ ಅವರು ಹೇಳಿದ್ದಾರೆ.

ಕುದುರೆ ಏರಿ ಬಂದ ಮದುಮಗನ ನಾಮಪತ್ರ!
ಆತ ಶೆರ್ವಾನಿ ಧರಿಸಿಕೊಂಡು, ತಲೆಗೊಂದು ಟರ್ಬನ್‌ ಸುತ್ತಿಕೊಂಡು, ಕುದುರೆ ಏರಿ ಬಂದಿದ್ದ. ಅವನ ಸುತ್ತಲೂ ನೂರಾರು ಜನರು ಬಾಲಿವುಡ್‌ ಹಾಡಿಗೆ ಹೆಜ್ಜೆ ಹಾಕುತ್ತಾ ಕುಣಿದು ಕುಪ್ಪಳಿಸುತ್ತಿದ್ದರು. ಈ “ಮದುಮಗ’ ಮೆರವಣಿಗೆ ಮೂಲಕ ತೆರಳಿದ್ದು ಕಲ್ಯಾಣ ಮಂಟಪಕ್ಕಲ್ಲ, ಬದಲಿಗೆ ನಾಮಪತ್ರ ಸಲ್ಲಿಕೆಗೆ! ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ ಸಂಯುಕ್‌¤ ವಿಕಾಸ್‌ ಪಕ್ಷದಿಂದ ಕಣಕ್ಕಿಳಿದಿರುವ ಅಭ್ಯರ್ಥಿ ವೈಧ್‌ ರಾಜ್‌ಕಿಶನ್‌ ವಿಶಿಷ್ಟ ರೀತಿಯಲ್ಲಿ ಬಂದು ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ, “ಇವತ್ತು ನನ್ನ ವಿವಾಹ ವಾರ್ಷಿಕೋತ್ಸವ. ಹಾಗಾಗಿ “ನಾನು ರಾಜನೀತಿಯ ಅಳಿಯ’ನೆಂದು ಪರಿಗಣಿಸಿಕೊಂಡು ಮದುಮಗನ ವೇಷ ಧರಿಸಿಕೊಂಡು ಬಂದು ನಾಮಪತ್ರ ಸಲ್ಲಿಸಿದೆ’ ಎಂದಿದ್ದಾರೆ.

2 ಚಾನೆಲ್‌ಗ‌ಳ ನಿಷೇಧಕ್ಕೆ ಕಾಂಗ್ರೆಸ್‌ ಬೇಡಿಕೆ
ಕೇಂದ್ರ ಸರಕಾರದ ಯೋಜನೆಗಳು ಮತ್ತು ಆಡಳಿತ ಪಕ್ಷದ ನಾಯಕರನ್ನು ಹೊಗಳುವ ಮೂಲಕ ನೀತಿ ಸಂಹಿತೆಯನ್ನು ಎರಡು ಖಾಸಗಿ ಸುದ್ದಿ ವಾಹಿನಿಗಳು ಉಲ್ಲಂ ಸುತ್ತಿವೆ ಎಂದು ಆರೋಪಿಸಿರುವ ಕಾಂಗ್ರೆಸ್‌, ಈ ಚಾನೆಲ್‌ಗ‌ಳನ್ನು ನಿಷೇಧಿಸಬೇಕು ಎಂದು ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಹಾರಾಷ್ಟ್ರ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸಚಿನ್‌ ಸಾವಂತ್‌ ನೇತೃತ್ವದ ನಿಯೋಗ ಈ ಸಂಬಂಧ ದೂರು ನೀಡಿದೆ. ಅಲ್ಲದೆ, ಟಿವಿ ಸೀರಿಯಲ್‌ಗ‌ಳನ್ನು ಬಳಸಿಕೊಂಡು ಬಿಜೆಪಿ ನಾಯಕರ ಪ್ರಚಾರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಆರೋಪಕ್ಕೆ ಸಂಬಂಧಿಸಿದಂತೆ ಎರಡು ಧಾರಾವಾಹಿಗಳ ದೃಶ್ಯದ ತುಣುಕುಗಳನ್ನೂ ಅವರು ನೀಡಿದ್ದಾರೆ.

ಪರೀಕ್ಷಾ ಶುಲ್ಕ ರದ್ದು: ರಾಹುಲ್‌
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದರೆ, ಸರಕಾರಿ ಹುದ್ದೆಗಳಿಗೆ ನಡೆಯುವ ಪರೀಕ್ಷಾ ಶುಲ್ಕ ರದ್ದು ಮಾಡಲಾಗುವುದು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಆಶ್ವಾಸನೆ ನೀಡಿದ್ದಾರೆ. ಜತೆಗೆ, ಕಾಂಗ್ರೆಸ್‌ ಸರಕಾರವು ಆರೋಗ್ಯಸೇವೆ ಹಕ್ಕು ಕಾಯ್ದೆ ಜಾರಿ ಮಾಡುವ ಮೂಲಕ, ಪ್ರತಿ ಯೊಬ್ಬ ನಾಗರಿಕನಿಗೂ ಆರೋಗ್ಯಸೇವೆಯನ್ನು ಕಡ್ಡಾಯವಾಗಿ ಒದಗಿಸಲಾ ಗುವುದು. ಆರೋಗ್ಯಸೇವೆಗೆ ಮಾಡಲಾಗುವ ವೆಚ್ಚವನ್ನು ಜಿಡಿಪಿಯ ಶೇ.3ಕ್ಕೇರಿಸ ಲಾಗುವುದು ಎಂದೂ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ರಾಹುಲ್‌ ಹೇಳಿದ್ದಾರೆ.

ನಾಮಪತ್ರ ವಾಪಸ್‌: ಪಾಟಿದಾರ್‌ ಅನಾಮತ್‌ ಆಂದೋಲನ್‌ ಸಮಿತಿ ನಾಯಕ ದಿಲೀಪ್‌ ಸಬಾ ಅವರು ಹೈಪ್ರೊಫೈಲ್‌ ಗಾಂಧಿನಗರ ಕ್ಷೇತ್ರದಲ್ಲಿ ಸಲ್ಲಿಸಿದ್ದ ನಾಮಪತ್ರವನ್ನು ಸೋಮವಾರ ವಾಪಸ್‌ ಪಡೆದಿದ್ದಾರೆ. ಬಿಜೆಪಿ ಹಿರಿಯ ನಾಯಕ ಆಡ್ವಾಣಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿ ಈ ಬಾರಿ ಅಮಿತ್‌ ಶಾ ಕಣಕ್ಕಿಳಿದಿದ್ದಾರೆ. ಬಿಜೆಪಿ ವಿರೋಧಿ ಮತಗಳನ್ನು ವಿಭಜನೆ ಮಾಡಿದೆ ಎಂಬ ಆರೋಪ ನನ್ನ ಮೇಲೆ ಬರುವುದು ಬೇಡ ಎಂಬ ಕಾರಣಕ್ಕೆ ನಾಮಪತ್ರ ವಾಪಸ್‌ ಪಡೆದಿದ್ದಾಗಿ ಸಬಾ ಹೇಳಿದ್ದಾರೆ. ಇಲ್ಲಿ ಕಾಂಗ್ರೆಸ್‌ನಿಂದ ಶಾಸಕ ಸಿ.ಜೆ. ಚಾವಡಾ ಸ್ಪರ್ಧಿಸುತ್ತಿದ್ದಾರೆ.

ಮೋದಿ ಡಕಾಯಿತ ಎಂದ ಮಮತಾ
ಚುನಾವಣಾ ಕ್ಯಾಂಪೇನ್‌ ದಿನದಿಂದ ದಿನಕ್ಕೆ ತುರುಸುಗೊಳ್ಳುತ್ತಿದ್ದಂತೆಯೇ, ಆರೋಪ ಗಳ ಸುರಿಮಳೆಯೂ ಆಗುತ್ತಿದೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಭಾರೀ ವಾಗ್ಧಾಳಿ ನಡೆಸಿದ್ದು, ಫ್ಯಾಸಿಸ್ಟ್‌, ಸುಳ್ಳುಗಾರ ಹಾಗೂ ಡಕಾಯಿತ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪಶ್ಚಿಮ ಬಂಗಾಲ ಮಹತ್ವದ ಪಾತ್ರ ವಹಿಸಲಿದೆ ಎಂದಿದ್ದಾರೆ. ಅಲ್ಲದೆ, ಅಧಿಕಾರ ಹಾಗೂ ರಾಜಕೀಯ ದಿಂದ ಅವರನ್ನು ಒಧ್ದೋಡಿಸಬೇಕು. ಸುಳ್ಳು ಹೇಳದಂತೆ ಅವರ ಬಾಯಿಗೆ ಟೇಪ್‌ ಹಚ್ಚಬೇಕು ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ, ಇದು ಮಮತಾ ಅವರ ಹತಾಶೆಯನ್ನು ಪ್ರದರ್ಶಿಸುತ್ತಿದೆ. ಜನರು ಚುನಾವಣೆಯಲ್ಲಿ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಲಿದ್ದಾರೆ ಎಂದಿದೆ.

ಟಾಪ್ ನ್ಯೂಸ್

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.