ಮಧು ಬಂಗಾರಪ್ಪ ಪರ ಗೀತಾ ಪ್ರಚಾರ
Team Udayavani, Apr 10, 2019, 3:00 AM IST
ರಿಪ್ಪನ್ಪೇಟೆ: “ಕಳೆದ ಐದಾರು ತಿಂಗಳ ಹಿಂದೆ ಲೋಕಸಭಾ ಉಪ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಅಣ್ಣ ಮಧು ಬಂಗಾರಪ್ಪನವರಿಗೆ ಸೋಲಾಗಿರಬಹುದು. ಕಾರಣ ಆಗ ಕೇವಲ 10 ದಿನಗಳ ಅವಕಾಶದಲ್ಲಿ ಮತದಾರರನ್ನು ತಲುಪಲು ಸಾಧ್ಯವಾಗಿರಲಿಲ್ಲ.
ಆದರೆ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಸಾಕಷ್ಟು ದಿನಗಳಿಂದ ಪ್ರಚಾರ ಮಾಡಲು ಅವಕಾಶ ಇದೆ’ ಎಂದು ಜೆಡಿಎಸ್ ಮುಖಂಡರಾದ ಗೀತಾ ಶಿವರಾಜ್ಕುಮಾರ್ ತಿಳಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ ತೆರಳಿ, ಕಾಂಗ್ರೆಸ್ ಮತ್ತು ಜೆಡಿಎಸ್ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ಅಚ್ಚೇ ದಿನ್ ಕಣ್ಮರೆಯಾಗಿದೆ. ಬಡವರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ ಮೋದಿ ನಯಾಪೈಸೆ ಖಾತೆಗೆ ಹಾಕದೆ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಉದ್ಯೋಗ ಸೃಷ್ಟಿಯಾಗಿಲ್ಲ. ಈ ಬಗ್ಗೆ ಮತದಾರರು ಯೋಚಿಸಿ ಮತದಾನ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ