ದೇವೇಗೌಡರು ಕಣ್ಣೀರು ಕಹಾನಿ ಬಿಡಲಿ: ಈಶ್ವರಪ್ಪ
Team Udayavani, Apr 10, 2019, 3:00 AM IST
ಬಾಗಲಕೋಟೆ: “ದೇವೇಗೌಡರ ಕುಟುಂಬದವರು ಪ್ರತಿ ಬಾರಿ ಕಣ್ಣೀರು ಕಹಾನಿ ಸೃಷ್ಟಿ ಮಾಡುತ್ತಾರೆ. ಇದು ಏಕೆ ಎಂಬುದು ಹೇಳಲಿ. ದೇಶದ ಸೈನಿಕರ ಸಾವು ಸಂಭವಿಸಿದಾಗ, ರೈತ ಆತ್ಮಹತ್ಯೆ ಮಾಡಿಕೊಂಡಾಗ ಕಣ್ಣೀರು ಹಾಕಲಿಲ್ಲ. ಐಟಿ ದಾಳಿ ಆಯಿತು ಎಂದು ಕಣ್ಣೀರು ಹಾಕ್ತಿದ್ದಾರೆಯೇ’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, “ದೇವೇಗೌಡ, ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ಕಣ್ಣೀರು ಹಾಕುತ್ತಾರೆ. ಪುಲ್ವಾಮಾದಲ್ಲಿ ಸೈನಿಕರ ಹತ್ಯೆಯಾದಾಗ ಕಣ್ಣೀರು ಹಾಕಲಿಲ್ಲ. ಬರದಿಂದ ಕಂಗಾಲಾಗಿ ರೈತ ಆತ್ಮಹತ್ಯೆ ಮಾಡಿಕೊಂಡಾಗಲೂ ಕಣ್ಣೀರು ಬರಲಿಲ್ಲ.
ಐಟಿ ದಾಳಿಯಲ್ಲಿ ಸಿಕ್ಕಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಯಾವ ವಿಷಯಕ್ಕೆ ಕಣ್ಣೀರು ಹಾಕುತ್ತಿದ್ದಾರೆ ಎಂಬುದು ದೇವೇಗೌಡರ ಕುಟುಂಬದವರೇ ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು. ನಮ್ಮದು ಕುಟುಂಬ ರಾಜಕಾರಣ ಅಲ್ಲ ಎಂದು ದೇವೇಗೌಡರು ಹೇಳುತ್ತಿದ್ದಾರೆ.
ಹಾಗಾದರೆ, ಕುಟುಂಬ ರಾಜಕಾರಣ ಅಂದ್ರೆ ಏನೆಂದು ಅವರೇ ಹೇಳಲಿ. ದೇವೇಗೌಡರು, ಇಬ್ಬರು ಮೊಮ್ಮಕ್ಕಳು ಚುನಾವಣೆಗೆ ನಿಂತಿದ್ದಾರೆ. ಒಬ್ಬ ಪುತ್ರ ಸಿಎಂ ಆಗಿದ್ದಾರೆ. ಮತ್ತೂಬ್ಬ ಪುತ್ರ ಸಚಿವರಿದ್ದಾರೆ. ಸೊಸೆ ಶಾಸಕಿಯಾಗಿದ್ದಾರೆ. ತಮ್ಮ ಕುಟುಂಬದ ಇನ್ನೂ ಎಷ್ಟು ಜನರನ್ನು, ಏನು ಮಾಡಬೇಕೆಂದಿದ್ದಾರೋ ಗೊತ್ತಿಲ್ಲ. ಇದು ಕುಟುಂಬ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್