ಮುಖ್ಯಮಂತ್ರಿಗಳಿಗೆ ನೈತಿಕತೆ ಇದೆಯೇ: ಬಿಎಸ್ವೈ ಪ್ರಶ್ನೆ
Team Udayavani, Apr 10, 2019, 6:30 AM IST
ಕೊಲ್ಲೂರು: ರಾಜ್ಯದಲ್ಲಿ 22 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ. ಈ ಬಾರಿಯ ಚುನಾವಣೆ ಯಲ್ಲಿ ದೇವೇಗೌಡ ಸಹಿತ ಕೋಲಾರ, ಕಲಬುರಗಿಯಲ್ಲಿಯೂ ಮೈತ್ರಿ ಅಭ್ಯರ್ಥಿ ಗಳು ಸೋಲನುಭವಿಸಲಿದ್ದಾರೆ.
ಕರಾವಳಿ ಯವರನ್ನು ಬುದ್ಧಿವಂತರಲ್ಲವೆಂದು ಗೇಲಿ ಮಾಡಿರುವ ಮುಖ್ಯಮಂತ್ರಿಯವರಿಗೆ ಯಾವ ನೈತಿಕತೆಯಿದೆಯೆಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಪ್ರಶ್ನಿಸಿದರು.
ಅವರು ರವಿವಾರ ನೆಂಪುವಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಮತ ಯಾಚಿಸಿ, ಮಾತನಾಡಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರಕಾರದ ಆಡಳಿತವು ಸಂಪೂರ್ಣ ವಿಫಲವಾಗಿದೆ.
ಕೇವಲ ಭರವಸೆಮಾತ್ರ ನೀಡುತ್ತಿರುವ ಕುಮಾರ ಸ್ವಾಮಿ ಅವರು ಅಡಕತ್ತರಿಯಲ್ಲಿ ಸಿಲುಕಿ ದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದವರು ಭವಿಷ್ಯ ನುಡಿದರು.
ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಸುನಿಲ್ ಕುಮಾರ್, ಶಾಸಕ ಆರಗ ಜ್ಞಾನೆಂದ್ರ, ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನ ಕುದ್ರು, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಾಬು ಶೆಟ್ಟಿ, ಕರ್ನಾಟಕ ಯುವ ಮೋರ್ಚಾ ಅಧ್ಯಕ್ಷ ವಿಜಯೇಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಸಂಧ್ಯಾ ರಮೇಶ್, ದತ್ತಾತ್ರೇಯ, ಬಾಲಚಂದ್ರ ಭಟ್ ಉಪಸ್ಥಿತರಿದ್ದರು. ದೀಪಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.