ಕೆಎಸ್‌ಆರ್‌ಪಿ ಮಹಿಳಾ ಸೈಕ್ಲಿಂಗ್‌ ಪಡೆಯಿಂದ ಸಾಮಾಜಿಕ ಕಾಳಜಿ


Team Udayavani, Apr 10, 2019, 3:00 AM IST

ksrp-cy

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಪರಿಸ್ಥಿತಿ ಕೈ ಮೀರದಂತೆ ನಿಭಾಯಿಸುವ ಕಾರ್ಯನಿರ್ವಹಿಸುವಲ್ಲಿ ಯಶಸ್ವಿಯಾಗಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ (ಕೆಎಸ್‌ಆರ್‌ಪಿ) ಮಹಿಳಾ ಪಡೆ, ಸೈಕ್ಲಿಂಗ್‌ ಜಾಥಾ ಮೂಲಕ ಸಾಮಾಜಿಕ ಕಳಕಳಿಯ ಸಂದೇಶ ಸಾರುತ್ತಲೇ ಮತ್ತಷ್ಟು ಬಲಗೊಳ್ಳುತ್ತಿದೆ.

ಕೆಎಸ್‌ಆರ್‌ಪಿ ನಾಲ್ಕನೇ ಬೆಟಾಲಿಯನ್‌ನಲ್ಲಿರುವ ಮಹಿಳಾ ಪಡೆಯಲ್ಲಿ ಸೈಕ್ಲಿಂಗ್‌ ತಂಡ ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಹಿಳಾ ಸಬಲೀಕರಣ ಜಾಗೃತಿ ಸಲುವಾಗಿ ಬೆಳಗಾವಿಯಿಂದ ಬೆಂಗಳೂರಿನವರೆಗೆ ಬರೋಬ್ಬರಿ ಐದು ದಿನಗಳ ಕಾಲ ಸೈಕ್ಲಿಂಗ್‌ ನಡೆಸಿದ ಹೆಗ್ಗಳಿಕೆ ಹೊಂದಿದೆ.

ನಾಲ್ಕನೇ ಬೆಟಾಲಿಯನ್‌ಲ್ಲಿರುವ 55 ಮಹಿಳಾ ಸಿಬ್ಬಂದಿ ಪೈಕಿ ಬಹುತೇಕರು ಸೈಕ್ಲಿಂಗ್‌ನಲ್ಲಿ ಪರಿಣಿತಿ ಹೊಂದಿದ್ದಾರೆ. ಪೊಲೀಸ್‌ ಸೇವೆಯ ಜತೆ ಜತೆಗೆ ದೈಹಿಕ ಸದೃಢತೆ ಹಾಗೂ ಕೆಲಸದಲ್ಲಿ ಮತ್ತಷ್ಟು ಚೈತನ್ಯ ತುಂಬುವಲ್ಲಿ ಸೈಕ್ಲಿಂಗ್‌ ಚಟುವಟಿಕೆ ಸಹಕಾರಿಯಾಗಬಲ್ಲದು ಎಂಬ ಅಭಿಪ್ರಾಯವನ್ನು ಹಿರಿಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಚುನಾವಣೆ, ರ್ಯಾಲಿಗಳು, ಪ್ರಮುಖ ಕಾರ್ಯಕ್ರಮಗಳಲ್ಲಿ ಪರಿಸ್ಥಿತಿ ನಿಭಾಯಿಸುವುದು ಸೇರಿದಂತೆ ಹಲವು ತುರ್ತು ಸಂದರ್ಭಗಳಲ್ಲಿ ಕೆಎಸ್‌ಆರ್‌ಪಿ ಸೇವೆ ಸಲ್ಲಿಸಲಿದೆ. ಇಂತಹ ಪರಿಸ್ಥಿತಿಗಳಲ್ಲಿ ಮಹಿಳಾ ಪಡೆಗಳೂ ಕೂಡ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತವೆ. ಮಹಿಳಾ ಸಬಲೀಕರಣ, ಹೆಣ್ಣುಮಕ್ಕಳ ರಕ್ಷಣೆ, ಹಕ್ಕುಗಳ ಬಗ್ಗೆ ಸೈಕಲ್‌ ರ್ಯಾಲಿಯ ಮೂಲಕ ಜಾಗೃತಿ ಅಭಿಯಾನ ನಡೆಸುವ ಬಗ್ಗೆ ಯೋಜನೆ ರೂಪಿಸಲಾಯಿತು.

ಇದಕ್ಕಾಗಿ ಬೆಳಗಾವಿಯಲ್ಲಿರುವ 2ನೇ ಬೆಟಾಲಿಯನ್‌ ಹಾಗೂ ಬೆಂಗಳೂರಿನಲ್ಲಿರುವ ನಾಲ್ಕನೇ ಬೆಟಾಲಿಯನ್‌ನಲ್ಲಿರುವ ಮಹಿಳಾ ಪಡೆಗಳ ಮುಂದೆ ಈ ಪ್ರಸ್ತಾವನೆ ಇಟ್ಟಾಗ, ಸಿಬ್ಬಂದಿ ಕೂಡ ಇದರಲ್ಲಿ ಭಾಗಿಯಾಗಲು ಆಸಕ್ತಿ ತೋರಿಸಿದರು. ಜತೆಗೆ, ನುರಿತ ಸೈಕ್ಲಿಸ್ಟ್‌ಗಳಿಂದ ಕೆಲದಿನಗಳ ಮಟ್ಟಿಗೆ ತರಬೇತಿ ಕೊಡಿಸಲಾಯಿತು. ಎರಡು ಮಹಿಳಾ ಸೈಕ್ಲಿಸ್ಟ್‌ ತಂಡಗಳು ರೂಪುಗೊಂಡವು.

ಇದೇ ತಂಡಗಳು ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಳಗಾವಿಯಿಂದ ಬೆಂಗಳೂರಿನವರೆಗೆ ಐದು ದಿನಗಳ ಕಾಲ ನಡೆದ ಮಹಿಳಾ ಸಬಲೀಕರಣ ಜಾಗೃತಿ ಜಾಥಾದಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡು ಜಾಥಾ ಸಂಪೂರ್ಣ ಯಶಸ್ವಿಯಾಯಿತು ಎಂದು ಅಧಿಕಾರಿ ಸೈಕ್ಲಿಸ್ಟ್‌ ತಂಡಗಳ ಬಗ್ಗೆ ಮೆಚ್ಚುಗೆ ಶ್ಲಾಘನೆ ವ್ಯಕ್ತಪಡಿಸಿದರು.

ಸಾಮಾಜಿಕ ಕಳಕಳಿಯ ಉದ್ದೇಶಕ್ಕೆ ಮಹಿಳಾ ಸೈಕ್ಲಿಸ್ಟ್‌ ತಂಡ ಅಧಿಕಾರಿಗಳ ಸೂಚನೆ ಮೇರೆಗೆ ಇದುವರೆಗೂ ಎರಡು ಜಾಥಾಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದೆ. ನಮ್ಮ ತಂಡಕ್ಕೂ ಇದರ ಬಗ್ಗೆ ಹೆಮ್ಮೆಯಿದೆ ಎಂದು ನಾಲ್ಕನೇ ಬೆಟಾಲಿಯನ್‌ನ ಮಹಿಳಾ ಸೈಕ್ಲಿಸ್ಟ್‌ ತಂಡದ ನೇತೃತ್ವ ವಹಿಸಿರುವ ಪಿಎಸ್‌ಐ ಜಯಶ್ರೀ ಅಭಿಪ್ರಾಯವ್ಯಕ್ತಪಡಿಸುತ್ತಾರೆ.

ಉದಯವಾಣಿ-ಕೆಎಸ್‌ಆರ್‌ಪಿ ಮತಜಾಗೃತಿ ಸೈಕಲ್‌ ಜಾಥಾ” ಲೋಕಸಭಾ ಮತದಾನ ಜಾಗೃತಿ ಸಲುವಾಗಿ ಉದಯವಾಣಿ ಹಾಗೂ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ (ಕೆಎಸ್‌ಆರ್‌ಪಿ) ಸಹಯೋಗದಲ್ಲಿ ಬುಧವಾರ ಮತದಾನ ಜಾಗೃತಿಗಾಗಿ ಸೈಕಲ್‌ ಜಾಥಾ ನಡೆಯಲಿದೆ.

ಮಡಿವಾಳದ ಕೆಎಸ್‌ಆರ್‌ಪಿ ಮೈದಾನದಲ್ಲಿ ಏ.10ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸೈಕಲ್‌ ರ್ಯಾಲಿಗೆ ಕೆಎಸ್‌ಆರ್‌ಪಿ ಎಡಿಜಿಪಿ ಭಾಸ್ಕರ್‌ರಾವ್‌, ಡಿಐಜಿ ಸತೀಶ್‌ ಕುಮಾರ್‌ ಚಾಲನೆ ನೀಡಲಿದ್ದಾರೆ. ಕೆಎಸ್‌ಆರ್‌ಪಿ ಮಹಿಳಾ ಸೈಕ್ಲಿಸ್ಟ್‌ ತಂಡ ಹಾಗೂ ಉದಯವಾಣಿ ಸಿಬ್ಬಂದಿ ಸೈಕಲ್‌ ಜಾಥಾದಲ್ಲಿ ಭಾಗವಹಿಸಲಿದ್ದು, ಸೈಕಲ್‌ ಜಾಥಾ ಕೆಎಸ್‌ಆರ್‌ಪಿ 3 ನೇ ಹಾಗೂ 4ನೇ ಬೆಟಾಲಿಯನ್‌ ವಸತಿ ಪ್ರದೇಶ, ಎಚ್‌ಎಸ್‌ಆರ್‌ ಲೇಔಟ್‌, ಮಡಿವಾಳ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆಯಲಿದೆ.

* ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.