ತಾವೇ ಗೆಲ್ಲಲಾಗದವರು ನನ್ನ ಸೋಲಿಸ್ತಾರಾ?

ಮೋದಿ ಹೆಸರಲ್ಲಿ ಭಿಕ್ಷೆ ಬೇಡುವ ಬಿಜೆಪಿಗೆ ನೈತಿಕತೆಯಿಲ್ಲ

Team Udayavani, Apr 10, 2019, 1:43 PM IST

10-April-18

ಚಿತ್ತಾಪುರ: ದಂಡೋತಿ ಗ್ರಾಮದಲ್ಲಿ ಕಲಬುರಗಿ ಲೋಕಸಭೆ ಚುನಾವಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು

ಚಿತ್ತಾಪುರ: ಜನರಿಗೆ ಸುಳ್ಳು ಹೇಳುತ್ತಾ ಬಿಜೆಪಿ ಮತ್ತು ನರೇಂದ್ರ ಮೋದಿ ತಂಡ ಜಾತಿ, ಧರ್ಮದ ಹೆಸರಲ್ಲಿ ಕೋಮುವಾದ ಸೃಷ್ಟಿಸಿ ದೇಶ, ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಹಾಲಿ ಸಂಸದ, ಕಲಬುರಗಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ತಾಲೂಕಿನ ತೆಂಗಳಿ ಜಿಪಂ ವ್ಯಾಪ್ತಿಯ ದಂಡೋತಿ ಗ್ರಾಮದಲ್ಲಿ ಕಲಬುರಗಿ ಲೋಕಸಭೆ ಚುನಾವಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣೆಯಲ್ಲಿ ಜನರಿಂದ ತಿರಸ್ಕಾರಗೊಂಡು ಸೋತ ಕೂಡಲೇ ಸುಳ್ಳಿನ ಹಾಗೂ ಕೋಮುವಾದಿ ಬಿಜೆಪಿಗೆ ಸೇರಿ ನನ್ನನ್ನು ಸೋಲಿಸಲು ಸಾಧ್ಯವೇ? ಸೋತವರ ಸಂಘ ಕಟ್ಟಿಕೊಂಡು ಕೆಲವರು ಖರ್ಗೆ ಅದು ಮಾಡಿಲ್ಲ, ಇದು ಮಾಡಿಲ್ಲ ಎಂದು ನನ್ನ ವಿರುದ್ಧ ಪ್ರಚಾರ ಮಾಡುತ್ತಾ ತಿರುಗಾಡುತ್ತಿದ್ದಾರೆ. ಆದರೆ ನೀವು ಕಾಂಗ್ರೆಸ್‌ ಪಕ್ಷದಲ್ಲಿದ್ದುಕೊಂಡು ನಿವೇನ್‌ ಜನರಿಗೆ ಉಪಕಾರ
ಮಾಡಿದ್ದೀರಿ ಹೇಳಿ? ಅದನ್ನು ಬಿಟ್ಟು ಕಾಂಗ್ರೆಸ್‌ ಪಕ್ಷದಿಂದ ಗೆದ್ದು ಅ ಧಿಕಾರ, ಸಚಿವ ಸ್ಥಾನ ಪಡೆದು, ಖರ್ಗೆ ನಮ್ಮ ಪಾಲಿಗೆ ದೇವರು ಎಂದು ಹೇಳಿ, ಸೋತ ಕೂಡಲೇ ಖರ್ಗೆ ಅವರು ಕಲಬುರಗಿಗೆ ಏನು ಮಾಡಿದ್ದಾರೆ? ಎಂದು ಕೇಳುತ್ತಿರಲ್ಲ ಎಂದು ಕಾಂಗ್ರೆಸ್‌ ತೊರೆದವರ ವಿರುದ್ಧ ವಾಗ್ಧಾಳಿ ನಡೆಸಿದರು.

ಕಲಬುರಗಿ ಜನತೆಗೆ ಗೊತ್ತು ನಾನು ಏನೇನು ಮಾಡಿದ್ದೇನೆ ಎನ್ನುವುದು. ಕಲಬರುಗಿ ಜನರ ಆಶೀರ್ವಾದ ಸದಾ ನನ್ನ ಮೇಲಿದೆ. ಅವರ ಆಶಿರ್ವಾದದಿಂದಲೇ ನಾನು ಅಧಿಕಾರದಲ್ಲಿದ್ದೇನೆ. ಕಲಬುರಗಿ ಜನರ ಆಶಿರ್ವಾದ ಇರುವವರೆಗೂ ನನ್ನನ್ನು ಸೋಲಿಸಲು ಯಾರಿಂದಲೂ ಆಗುವುದಿಲ್ಲ ಎಂದು ಹೇಳಿದರು.
ನನ್ನ ರಾಜಕೀಯ ಹಣೆಬರಹ ಬರೆಯುವವರು
ಮತದಾರರು. ನನಗೆ ಅಧಿಕಾರ ನೀಡುವವರು ಮತದಾರರು. ನನಗೆ ಸೋಲಿಸುವ ತಾಕತ್ತು ಸೋತವರಿಗೆ ಎಲ್ಲಿದೆ. ದ್ರೋಹದ ಕೆಲಸ ಮಾಡುವವರನ್ನು ಜನರು ಕ್ಷಮಿಸುವುದಿಲ್ಲ. ಸುಮ್ನೆ ಬಿಡುವುದೂ ಇಲ್ಲ. ಮೋದಿ ಹೆಸರಲ್ಲಿ ಮತಭಿಕ್ಷೆ ಬೇಡುವ ನಿಮಗೆ ಅದೇನು ನೈತಿಕತೆ ಇದೆ. ವ್ಯಕ್ತಿ ಹೆಸರು ಬಿಟ್ಟು ಕೆಲಸದ ಆಧಾರದಲ್ಲಿ ಮತ ಕೇಳಿ ಎಂದು ತರಾಟೆಗೆ ತೆಗೆದುಕೊಂಡರು.

ರಾಜಕೀಯವಾಗಿ ನಮ್ಮನ್ನು ಮಣ್ಣಲ್ಲಿ ಹೂತುಹಾಕುವ ದುಸ್ಸಾಹಸ ಮಾಡುತ್ತಿದ್ದಾರೆ. ಅವರಿಗೇನ್‌ ಗೋತ್ತು ನಾನು ಬೀಜ ಎನ್ನುವುದು. ನೀವು ಮಣ್ಣಲ್ಲಿ ಹೂತುಹಾಕುವ ಪ್ರಯತ್ನ ಮಾಡಿದರೂ ಮತ್ತೆ ಮೇಲೆ ಬರುವುದೇ ಬೀಜದ ಗುಣ ಎಂಬ ಸತ್ಯವನ್ನು ಮರೆಯಬೇಡಿ. ನಾನು ಕಲ್ಲಬಂಡೆ ಮೇಲೆ ನಿಂತಿದ್ದೇನೆ. ಕಲಬುರಗಿ ಜನತೆ ಮುಂದೆ ಮೋದಿಯ ಸುಳ್ಳಿನ ಆಟ ನಡೆಯುವುದಿಲ್ಲ ಎಂದರು.

ಮಾಜಿ ಸಚಿವ ಬಾಬುರಾವ ಚವ್ಹಾಣ ಮಾತನಾಡಿ, ಡಾ| ಉಮೇಶ ಜಾಧವ ಅವರಿಗೆ ಕಾಂಗ್ರೆಸ್‌ ಪಕ್ಷ ಉಪಕಾರ ಮಾಡಿತ್ತು. ಆದರೆ ಅವರು ಉಪಕಾರ ಮಾಡಿದ ಪಕ್ಷ ಬಿಟ್ಟು ದ್ರೋಹ ಮಾಡಿದ್ದಾರೆ. ಇವರಿಗೆ ಕಲಬುರಗಿ ಜನರೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ. ಇಡೀ ಬಂಜಾರ ಸಮಾಜ ಅವರ ಹಿಂದೆ ಇಲ್ಲ.
ಚುನಾವಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಬಂಜಾರ ಜನರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ತಿಪ್ಪಣಪ್ಪ ಕಮಕನೂರ, ಮುಕ್ತಾರ ಪಟೇಲ್‌, ಡಾ| ದಾವುದ್‌ ಪಟೇಲ್‌, ಬ್ಲಾಕ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ತಾಲೂಕು ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ ಸದಸ್ಯೆ ಶಶಿಕಲಾ ತಿಮ್ಮನಾಯಕ, ಶಿವರುದ್ರ ಭೀಣಿ, ಶಿವಾನಂದ ಪಾಟೀಲ, ತಾಪಂ ಸದಸ್ಯ ಮುನಿಯಪ್ಪ ಕೊಳ್ಳಿ, ಆಲಂ ಖಾನ್‌, ವೀರಣ್ಣಗೌಡ
ಪರಸರೆಡ್ಡಿ, ರಾಜಗೋಪಾಲರೆಡ್ಡಿ, ಅಜೀಜ ಸೇs…, ಶ್ರೀನಿವಾಸ ಸಗರ, ಎಂ.ಎ. ರಶೀದ್‌, ವಿರೂಪಾಕ್ಷಪ್ಪ ಗಡ್ಡದ್‌, ಶಂಭುಲಿಂಗ ಗುಂಡಗುರ್ತಿ, ಮಹ್ಮದ್‌ ಇಸಾಕ್‌ ಸೌದಾಗರ್‌, ರಶೀದ್‌ ಪಠಾಣ, ಭೀಮರಾವ ತೋಟದ್‌, ಸೈಯದ್‌ ಅಹ್ಮದ್‌ ಪಠಾಣ, ಸಾಬಣ್ಣ ಕೊಳ್ಳಿ ಮತ್ತಿತರರು ಇದ್ದರು.

ರಾಜಶೇಖರ ತಿಮ್ಮನಾಯಕ ಸ್ವಾಗತಿಸಿದರು, ರೇವಣಸಿದ್ದಪ್ಪ ಕೊಂಚೂರ ನಿರೂಪಿಸಿ, ವಂದಿಸಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೋಲಿ ಸಮಾಜವನ್ನು ಎಸ್‌.ಟಿ ಪಟ್ಟಿಗೆ ಸೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿತ್ತು. ಎರಡು ಸಲ ಮೋದಿ ಸರ್ಕಾರ ಪ್ರಸ್ತಾವ ವಾಪಸು ಕಳುಹಿಸಿದೆ. ಈಗ ಕೆಲವರು ಎಸ್‌.ಟಿಗೆ ಸೇರಿಸಲು ಬಿಜೆಪಿಗೆ ಹೋಗಿರುವುದಾಗಿ ಹೇಳುತ್ತಾ ತಿರುಗುತ್ತಿದ್ದಾರೆ.
ಇದೆಂತಹ ನಾಚಿಕೆಗೇಡು ಕೆಲಸ.
ಆರ್‌.ಬಿ. ತಿಮ್ಮಾಪುರ, ಸಚಿವ

ಟಾಪ್ ನ್ಯೂಸ್

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.