ಮಹಿಳೆಯರು ಮತದಾನದ ಮಹತ್ವ ಅರಿತುಕೊಳಿ


Team Udayavani, Apr 10, 2019, 2:43 PM IST

women

ತಿಪಟೂರು: ಮಹಿಳೆಯರಿಗೆ ಮತದಾನದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಮಹಿಳೆಯರು ಮತದಾನದ ಮಹತ್ವ ಅರಿತು ಇತರರಿಗೂ ಜಾಗೃತಿ ಮೂಡಿಸಿ ಶೇ.100ರಷ್ಟು ಮತದಾನ ಮಾಡ
ಬೇಕೆಂದು ಉಪವಿಭಾಗಾಧಿಕಾರಿ ಎಸ್‌. ಪೂವಿತಾ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಲೋಕಸಭಾ ಚುನಾವಣಾ ಮತದಾನ ಜಾಗೃತಿ ಅಂಗವಾಗಿ ಸ್ವೀಪ್‌ ಸಮಿತಿ ತುಮಕೂರು ಮತ್ತು
ತಿಪಟೂರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ವಿಶೇಷಚೇತನರಿಂದ ಬೈಕ್‌ ರ್ಯಾಲಿ ಹಾಗೂ ವಿವಿಧ ಇಲಾಖಾ ಮಹಿಳೆಯರಿಂದ ರಂಗೋಲಿ ಸ್ಪರ್ಧೆ ಮೂಲಕ ಮತಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಡ್ಡಾಯ ಮತದಾನ: ಉತ್ತಮ ಪ್ರಜಾಭುತ್ವ ವ್ಯವಸ್ಥೆಗೆ ಮತದಾನದ ಅವಶ್ಯಕತೆ ಇದ್ದು, ಅದಕ್ಕಾಗಿ ತಾಲೂಕಿ ನಾದ್ಯಂತ ಮತದಾನದ ಬಗ್ಗೆ ಜಾಗೃತಿ ಮೂಡಿಸ ಲಾಗುತ್ತಿದೆ. ಮಹಿಳೆಯರು ಮತದಾನದ ಮಹತ್ವ ತಿಳಿದುಕೊಂಡು ತಮ್ಮ ಸುತ್ತಮುತ್ತಲಿನ ಜನರಿಗೆ ಅರಿವನ್ನು ಮೂಡಿಸುವುದರಿಂದ ಕಡ್ಡಾಯ ಮತದಾನ ಮಾಡಲು ಅನುಕೂಲವಾಗುತ್ತದೆ ಎಂದರು.

ಮತದಾನ ಮಾಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜು ಮಾತನಾಡಿ, ಯಾವುದೇ ಮತದಾರರು ಮತದಾನದಿಂದ ಹೊರಗುಳಿಯಬಾರದು. ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಮಹಿಳೆಯರು ರಂಗೋಲಿ ಬಿಡಿಸುವ ಮೂಲಕ ಮತದಾನದ ಅರಿವು ಮೂಡಿಸಿ ರುವುದು ಶ್ಲಾಘನೀಯ. ಮಹಿಳೆಯರು, ವಿಕಲಚೇತನರು ಹಾಗೂ ಅಲ್ಪ ಸಂಖ್ಯಾತರು ಮತದಾನ ಮಾಡಬೇಕು. ಮತದಾನದ ಅರಿವು ಮೂಡಿಸುವಾಗ ಯಾವುದೇ ಪಕ್ಷ, ಅಭ್ಯರ್ಥಿ
ಬಿಂಬಿಸಬಾರದು. ಕಡ್ಡಾಯವಾಗಿ ಮಹಿಳಾ ಮತದಾರರು ಮತಗಟ್ಟೆಗೆ ಬಂದು ಮತದಾನ ಮಾಡುವಂತೆ ತಿಳಿಸಬೇಕು ಎಂದರು.

ಸಖೀ ಬೂತ್‌ ಮತಗಟ್ಟೆ: ನಗರಸಭಾ ಪೌರಾಯುಕ್ತೆ ಡಾ.ಮಧು ಮಾತನಾಡಿ, ಮಹಿಳೆಯರಿಗಾಗಿ ಪಿಂಕ್‌ ಸಖೀ ಬೂತ್‌ ಮತಗಟ್ಟೆಯನ್ನು ಕಳೆದ ಬಾರಿ ಜಾರಿ ಮಾಡಲಾಗಿತ್ತು. ಎಲ್ಲಾ ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ರ್‍ಯಾಂಪ್‌ ವ್ಯವಸ್ಥೆ, ವೀಲ್‌ಚೇರ್‌, 31 ವಾರ್ಡ್‌ಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ. ಮತದಾನದ ಜಾಗೃತಿಗಾಗಿ ವಾರ್ಡ್‌ಗಳಲ್ಲಿ ಸ್ವಯಂ ಸೇವಕರನ್ನು ನೇಮಿಸಲಾಗಿದ್ದು, ಅವರ ಮೂಲಕ ಮಾಹಿತಿ ಪಡೆಯಬಹುದು ಎಂದರು.

ತುರ್ತು ಚಿಕಿತ್ಸೆಗೆ ಸೌಲಭ್ಯ: ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌ ಮಾತನಾಡಿ, ಚುನಾವಣೆ ದಿನದಂದು ಆರೋಗ್ಯ ಇಲಾಖೆಯಿಂದ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಜನರಿಗೆ ಸೇವೆ ನೀಡಲಾಗುತ್ತಿದ್ದು, ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲಾ ಬೂತ್‌ಗಳಲ್ಲಿ ತುರ್ತು ಚಿಕಿತ್ಸೆಗೆ ಅನುಕೂಲ ವಾಗುವಂಥ ಸೌಲಭ್ಯ ನೀಡಲಾಗುತ್ತದೆ ಎಂದರು.

ಬಹುಮಾನ: ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಬಿಳಿಗೆರೆ ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ದ್ವಿತೀಯ ಎಸ್‌.ಆರ್‌.ಡಿ ಪಾಳ್ಯದ ವೀಣಾ ತಂಡ, ತೃತೀಯ ವಿಶೇಷಚೇತನರಿಗೆ ನೀಡಲಾಯಿತು. ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನ ನೀಡಲಾಯಿತು. ಈ ಸಂದರ್ಭದಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ನಗರದ ಸಿಂಗ್ರಿನಂಜಪ್ಪ ವೃತ್ತದಿಂದ ಪ್ರವಾಸಿ ಮಂದಿರದವರೆಗೆ ಜಾಥಾ ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಚೇತನ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ರಮೇಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಗೌರಮ್ಮ, ಸಿಡಿಪಿಓ ಓಂಕಾರಪ್ಪ, ಮೇಲ್ವಿಚಾರಕಿ ಪ್ರೇಮಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.