ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿ

ಕುಟುಂಬ-ಸಮುದಾಯ ಪ್ರೀತಿಸುವ ಮನೋಭಾವ ಮೈಗೂಡಿಸಿಕೊಳ್ಳಿ

Team Udayavani, Apr 10, 2019, 4:23 PM IST

10-April-26

ನಾರಾಯಣಪುರ: ಕೊಡೇಕಲ್‌ ಜನಕ ಕಲಾ ಪದವಿ ವಿದ್ಯಾಲಯದಲ್ಲಿ ಹಮ್ಮಿಕೊಂಡ ಬೀಳ್ಕೊಡುಗೆ ಸಮಾರಂಭವನ್ನು ತಿಮ್ಮಮ್ಮ ಶಂಭನಗೌಡ ಉದ್ಘಾಟಿಸಿದರು.

ನಾರಾಯಣಪುರ: ಯುವ ಸಮೂಹ ರಾಷ್ಟ್ರ ಶಕ್ತಿಯಾಗಿದ್ದು, ಯುವ ಸಮುದಾಯ ಜ್ಞಾನ, ಕೌಶಲ್ಯ ಸದ್ಬಳಕೆ ಮಾಡಿಕೊಂಡು ಸದೃಢ ರಾಷ್ಟ್ರ ನಿರ್ಮಿಸುವ ಗುರಿಯತ್ತ ಸಾಗಬೇಕು ಎಂದು ಕೊಡೇಕಲ್‌ ಪೊಲೀಸ್‌ ಠಾಣೆ ಪಿಎಸ್‌ಐ ಪ್ರದೀಪ್‌ ಬಿಸೆ ಹೇಳಿದರು.

ಕೊಡೇಕಲ್‌ ಯುಕೆಪಿ ಕ್ಯಾಂಪ್‌ನಲ್ಲಿನ ಜನಕ ಕಲಾ ಪದವಿ ಮಹಾವಿದ್ಯಾಲಯದ ಬಿ.ಎ. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿ, ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣ ಪಡೆದರೂ ದೇಶದ ಐಕ್ಯತೆ, ಸಮಗ್ರತೆಗೆ ಯುವಕರು ಸದಾ ಮುನ್ನುಗ್ಗುಬೇಕು. ಕುಟುಂಬ ಹಾಗೂ ಸಮುದಾಯ ಪ್ರೀತಿಸುವ ಮನೋಭಾವ ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ತಾಳಿಕೋಟೆ ಖಾಸ್ಗತೇಶ್ವರ ಕಾಲೇಜು ಪ್ರಾಚಾರ್ಯ ರಮೇಶ ಬಂಟನೂರ ಮಾತನಾಡಿ, ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದರು. ಶಿಕ್ಷಣ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಆದಿಶೇಷ ನೀಲಗಾರ ಮಾತನಾಡಿ, ಕೊಡೇಕಲ್‌ನಲ್ಲಿ ಪದವಿ ಕಾಲೇಜು ಆರಂಭಿಸಿದ್ದು ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಅನುಕೂಲವಾಗಿದೆ. ಪಿಯು ನಂತರ ಪದವಿ ಶಿಕ್ಷಣ ಪಡೆಯಲು ದೂರದ ಪಟ್ಟಣಗಳಿಗೆ ತೆರಳಿ ವ್ಯಾಸಂಗ ಮಾಡುವ ಪರಿಪಾಡು ತಪ್ಪಿದೆ ಎಂದರು.

ಇದೇ ವೇಳೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಸವಪೀಠ ಪೀಠಾಧಿ ಪತಿ ವೃಷಬೇಂದ್ರ ಅಪ್ಪ ಸಾನ್ನಿಧ್ಯ ವಹಿಸಿದ್ದರು. ತಿಮ್ಮಮ್ಮ ಶಂಭನಗೌಡ ಕಾರ್ಯಕ್ರಮ ಉದ್ಘಾಟಿಸಿದರು. ರಾಜಾ ಜೀತೇಂದ್ರನಾಯಕ ಜಹಾಗೀರದಾರ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಅಮರೇಶ ಕುಂಬಾರ, ವೀರೇಶ
ಮಠ, ವಿಶ್ವನಾಥ ಸರ್ಗಣಾಚಾರಿ, ರುದ್ರಮ್ಮ ಗುರಿಕಾರ, ಬಸವರಾಜ ಉತ್ನಾಳ, ತಿರುಪತಿ ಕೆಂಭಾವಿ, ಬಸವರಾಜ ಅಂಗಡಿ ಇತರರು ಇದ್ದರು. ಭವಾನಿ ಪ್ರಾರ್ಥಿಸಿದರು. ಬಸವರಾಜ ಉತ್ನಾಳ ಸ್ವಾಗತಿಸಿದರು. ಸೋಮಶೇಖರ ಪಂಜಗಲ್‌ ನಿರೂಪಿಸಿದರು, ಸುಜಾತಾ ಗೊಲ್ಲರ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.