ದುರ್ಬಲ ಮತದಾರರಿಗೆ ಚುನಾವಣಾ ಆಯೋಗದ ಬಲ
ಮತ ಮಾಹಿತಿ
Team Udayavani, Apr 11, 2019, 3:00 AM IST
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ನಿರ್ಣಾಯಕ ಪಾತ್ರ ನಿರ್ವಹಿಸುತ್ತದೆ. ಮತದಾನ ದೇಶದ ನಾಗರಿಕರಿಗೆ ಸಂವಿಧಾನ ಕೊಟ್ಟಿರುವ ಪ್ರಬಲ ಅಸ್ತ್ರ. ಮತ ಚಲಾಯಿಸುವುದು ಪ್ರತಿಯೊಬ್ಬ ಅರ್ಹ ಮತದಾರನ ಸಾಂವಿಧಾನಿಕ ಕರ್ತವ್ಯ ಹಾಗೂ ಜವಾಬ್ದಾರಿ.
ಅದೇ ರೀತಿ ಓಟಿನ ಗೌಪ್ಯತೆ ಮತ್ತು ಪಾವಿತ್ರತೆ ಕಾಪಾಡುವುದು ಮತದಾರನ ನೈತಿಕ ಹಾಗೂ ಕಾನೂನಾತ್ಮಕ ಜವಾಬ್ದಾರಿ. ಓಟು ಹಾಕುವ ವಿಚಾರದಲ್ಲಿ ಯಾರೊಬ್ಬರೂ ಯಾರನ್ನೂ ಆಮಿಷಕ್ಕೊಳಪಡಿಸುವಂತಿಲ್ಲ. ಬೆದರಿಕೆ, ಒತ್ತಡ ಹೇರುವಂತಿಲ್ಲ. ಹಾಗೇನಾದರೂ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ.
ವಿಶೇಷವಾಗಿ ದುರ್ಬಲರು, ಅಸಹಾಯಕರು, ಅಮಾಯಕರು, ಮುಗ್ಧರು, ಎಸ್ಸಿ-ಎಸ್ಟಿ ವರ್ಗದ ಜನರು, ಆದಿವಾಸಿ, ಬುಡಕಟ್ಟು ಜನಾಂಗದವರನ್ನು ಮತ ಹಾಕುವ ವಿಚಾರದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಅವರ ಪ್ರತಿನಿಧಿಗಳು, ಬಲಾಡ್ಯರು, ಮಧ್ಯವರ್ತಿಗಳು ಇದೇ ಪಕ್ಷದ ಇಂತಹದ್ದೇ ಅಭ್ಯರ್ಥಿಗೆ ಮತ ಹಾಕಬೇಕು,
ಇಲ್ಲವೇ ಮತದಾನದಿಂದ ದೂರ ಉಳಿಯಬೇಕು ಅಥವಾ ಕಾನೂನು ಉಲ್ಲಂ ಸಿ ಮತ ಚಲಾಯಿಸಬೇಕು ಎಂದು ಒತ್ತಡ ತಂದರೆ, ಅದು ಶಿಕ್ಷಾರ್ಹ ಅಪರಾಧ. ಇಂತಹ ಕೃತ್ಯದಲ್ಲಿ ಭಾಗಿಯಾದವರಿಗೆ 6 ತಿಂಗಳಿಂದ 5 ವರ್ಷ ವಿಸ್ತರಿಸಬಹುದಾದ ದಂಡ ಸಹಿತ ಕಠಿಣ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ಹಾಗಾಗಿ, ಯಾವುದೇ ಅಮಿಷ, ಒತ್ತಡಗಳಿಗೆ ಒಳಗಾಗದೇ ನಿರ್ಭೀತವಾಗಿ ಮತ ಚಲಾಯಿಸಲು ಚುನಾವಣಾ ಆಯೋಗ ಎಲ್ಲ ರೀತಿಯ ಕಾನೂನು ಹಾಗೂ ರಕ್ಷಣೆಯ ನೆರವು ನೀಡುತ್ತದೆ. ಅದಕ್ಕಾಗಿ ಇಂತಹ ವರ್ಗದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇಡಲಾಗುತ್ತದೆ. ಅಂತಹ ಕಡೆ ವಿಶೇಷ ವಿಚಕ್ಷಣಾ ತಂಡಗಳನ್ನು ನೇಮಕ ಮಾಡಲಾಗುತ್ತದೆ. ಅವರಲ್ಲಿ ವಿಶ್ವಾಸ ತುಂಬಲು ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಮತದಾನದ ದಿನ ದುರ್ಬಲರು, ದಲಿತ ಮತದಾರರು ಹೆಚ್ಚಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ವಿಶೇಷ ತಂಡಗಳನ್ನು ರಚಿಸಿ ಅವರನ್ನು ಮತಗಟ್ಟೆಗೆ ಕರೆ ತರಲು ಆಯೋಗವೇ ವ್ಯವಸ್ಥೆ ಮಾಡುತ್ತದೆ. ಅಲ್ಲದೇ ಅಂತಹ ಕಡೆ ಹೆಚ್ಚುವರಿ ಭದ್ರತಾ ತುಕುಡಿಗಳನ್ನು ನಿಯೋಜಿಸಲಾಗುತ್ತದೆ. ಪ್ರತಿಯೊಬ್ಬರು ಮುಕ್ತ ವಾತಾವರಣದಲ್ಲಿ ಸ್ವಂತ ವಿವೇಕದಿಂದ ಮತ ಚಲಾಯಿಸಬೇಕು ಅನ್ನುವುದೇ “ಉದಯವಾಣಿ’ ಕಾಳಜಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ