ಲೂಟಿಯಲ್ಲಿ ಚೌಕಿದಾರರ ಪಾಲೆಷ್ಟು: ಖುಷ್ಬು
Team Udayavani, Apr 11, 2019, 6:43 AM IST
ಬೆಂಗಳೂರು: ದೇಶದಲ್ಲಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗುತ್ತಿದೆ. ಆದರೆ, ಚೌಕಿದಾರ್ ಯಾವುದೇ ತನಿಖೆ ಕೈಗೊಳ್ಳುತ್ತಿಲ್ಲ. ಆ ಲೂಟಿಯಲ್ಲಿ ಚೌಕಿದಾರರ ಪಾಲು ಎಷ್ಟು ಎಂದು ಕೇಳಬೇಕಾಗುತ್ತದೆ ಎಂದು ಎಐಸಿಸಿ ವಕ್ತಾರೆ ಖುಷ್ಬು ಸುಂದರ್ ಪ್ರಶ್ನಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮಾತೆತ್ತಿದರೆ ಚೌಕಿದಾರ್ ಎಂದು ಹೇಳುತ್ತಿದ್ದಾರೆ.ಆದರೆ, ಅವರ ಕಣ್ಣೆದುರೇ ಮಲ್ಯ, ನೀರವ್ ಮೋದಿಯಂತ ಉದ್ಯಮಿಗಳು ಸಾವಿರಾರು ಕೋಟಿ ರೂ. ಲೂಟಿ ಮಾಡಿಕೊಂಡು ಹೋಗಿದ್ದಾರೆ. ಅವರ ವಿರುದ್ಧ ತನಿಖೆ ನಡೆಸದೇ ಮೌನ ವಹಿಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಯಾರೂ ಪ್ರಶ್ನಿಸದಂತೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಕಳೆದ ಐದು ವರ್ಷದಲ್ಲಿ ಬಿಜೆಪಿ ಗೇಮ್ ಚೇಂಜರ್ ಆಗಿ ಕೆಲಸ ಮಾಡಿಲ್ಲ. ಬರಿ ನೇಮ್ ಚೇಂಜರ್ ಆಗಿದೆ. ಐದು ವರ್ಷದಲ್ಲಿ ತನ್ನದೇ ಆದ ಒಂದೇ ಒಂದು ಯೋಜನೆಯನ್ನು ಜಾರಿ ಮಾಡಲಿಲ್ಲ.
ಬಿಜೆಪಿಯ ಹೊಸ ಪ್ರಣಾಳಿಕೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಕಾಂಗ್ರೆಸ್ ಘೋಷಿಸಿರುವ ನ್ಯಾಯ್ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಿಂದೆ ಯುಪಿಎ ಅವಧಿಯಲ್ಲಿ ನರೇಗಾ ಯೋಜನೆ ಜಾರಿಗೊಳಿಸಿದಾಗಲೂ ನರೇಂದ್ರ ಮೋದಿ ವಿರೋಧಿಸಿದ್ದರು.
ಆದರೆ, ಕಾಂಗ್ರೆಸ್ ಅದನ್ನು ಯಶಸ್ವಿಗೊಳಿಸಿತು. ಈಗಲೂ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ. ಮಹಿಳಾ ಮೀಸಲಾತಿ, ಉದ್ಯೋಗ ಸೃಷ್ಟಿ, ಬಡವರಿಗೆ ಕನಿಷ್ಠ ಆದಾಯ, ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ಯೋಜನೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ತರುತ್ತದೆ ಎಂದು ಹೇಳಿದರು.
ಮೋದಿ ಸರ್ಕಾರ ಸ್ಟಾರ್ಟ್ಅಪ್, ಸ್ಟಾಂಡ್ಅಪ್, ಅವೈಜ್ಞಾನಿಕ ಜಿಎಸ್ಟಿ ಜಾರಿ, ನೋಟು ಅಮಾನ್ಯದಂತಹ ಯೋಜನೆಗಳನ್ನು ಜಾರಿಗೊಳಿಸಿ ಸಾಮಾನ್ಯ ಜನರು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದರು. ಕಳೆದ ಅವಧಿಯಲ್ಲಿ ಜನರು ಬಿಜೆಪಿಯನ್ನು ಅಧಿಕಾರಕ್ಕೆ ತಂದು ತಪ್ಪು ಮಾಡಿದ್ದರು. ಮತ್ತೂಮ್ಮೆ ಬಿಜೆಪಿಯನ್ನು ಜನರು ಅಧಿಕಾರಕ್ಕೆ ತರಲು ಬಯಸುವುದಿಲ್ಲ ಎಂದು ಹೇಳಿದರು.
ರಫೇಲ್ ಡೀಲ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸ್ವಾಗತಿಸುವುದಾಗಿ ಹೇಳಿದ ಅವರು, ದೇಶವನ್ನು ರಕ್ಷಣೆ ಮಾಡುತ್ತೇನೆ ಎಂದು ಹೇಳುತ್ತಿರುವ ಮೋದಿ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ