ನಮಗೆ ಅಭಿವೃದ್ಧಿ ಮಂತ್ರ: ನಾಡಗೌಡ


Team Udayavani, Apr 11, 2019, 6:05 AM IST

Venkata-Rao-Nadagouda

ಉಡುಪಿ: ಬಿಜೆಪಿ ಭಾವನಾತ್ಮಕ ವಿಷಯಗಳನ್ನು ನಂಬಿಕೊಂಡು ಚುನಾವಣೆ ಎದುರಿಸುತ್ತಿದೆ. ಆದರೆ ನಾವು ಅಭಿವೃದ್ಧಿ ಮಂತ್ರದಲ್ಲಿ ನಂಬಿಕೆ ಇಟ್ಟಿದ್ದೇವೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಯಾರದಾಗುತ್ತದೆ ಎನ್ನುವುದು ಕಾದು ನೋಡಬೇಕು ಎಂದು ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ಮೋದಿ ಭಾವನಾತ್ಮಕ ವಿಚಾರ ಪ್ರಸ್ತಾವಿಸು ತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಹಿಂದುತ್ವದ ಬಗ್ಗೆ ಮಾತನಾಡಿಲ್ಲ. ಆದರೆ ಈ ಬಾರಿ ಅದನ್ನೂ ಪ್ರಸ್ತಾವಿಸುತ್ತಿದ್ದಾರೆ. ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎನ್ನುತ್ತಾರೆ. ಅದಕ್ಕೆ ಯೋಜನೆ ಪ್ರಕಟಿಸಿಲ್ಲ. ಕಳೆದ ಬಾರಿ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಈಡೇರಿಲ್ಲ ಎಂದರು.

ಪ್ರಜಾಪ್ರಭುತ್ವ ಆತಂಕದಲ್ಲಿ
ಮೋದಿ ನೇತೃತ್ವದ ಬಿಜೆಪಿ ಸರಕಾರದಿಂದ ಆಡಳಿತ ವ್ಯವಸ್ಥೆಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ ಇದೆ. ಸಂವಿಧಾನಕ್ಕೆ ಧಕ್ಕೆಯಾಗುವ ಲಕ್ಷಣ ಎದ್ದು ಕಾಣುತ್ತಿರುವ ಹಿನ್ನಲೆಯಲ್ಲಿ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೇ ದೇಶದಲ್ಲಿ 20ಕ್ಕೂ ಹೆಚ್ಚಿನ ರಾಜಕೀಯ ಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಸಮರ ಸಾರಿವೆ ಎಂದರು.

ಮಲ್ಪೆ 7 ಮಂದಿ ಮೀನುಗಾರರು ನಾಪತ್ತೆಯಾದ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಹುಡುಕಲು ಎಲ್ಲ ಪ್ರಯತ್ನಗಳನ್ನು ಮಾಡಿವೆ. ಆದರೆ ಅವರೇನಾಗಿದ್ದಾರೆ ಯಾವುದೇ ಖಚಿತ ಮಾಹಿತಿ ಲಭಿಸಿಲ್ಲ. ಪ್ರಮೋದ್‌ ಮಧ್ವರಾಜ್‌ ಸ್ಥಳೀಯ ಮಾಹಿತಿ ಆಧಾರದಲ್ಲಿ ಸೇನಾ ಪಡೆಯ ಹಡಗು ಢಿಕ್ಕಿಯಾಗಿದೆ ಎಂದಿರಬಹುದು ಎಂದರು.

ಮೀನುಗಾರರು ನನ್ನ ಮತದಾರರಲ್ಲ
ಸಿಎಂ ಕುಮಾರಸ್ವಾಮಿ ಉಡುಪಿಗೆ ಬಂದಾಗ ಮೀನುಗಾರರ ಕುಟುಂಬವನ್ನು ಭೇಟಿ ಮಾಡಿಲ್ಲ ಎಂಬ ಆರೋಪದ ಬಗ್ಗೆ ಮಾತನಾಡಿ, ಸುವರ್ಣ ತ್ರಿಭುಜದಲ್ಲಿ ಇದ್ದ 7 ಮಂದಿಯಲ್ಲಿ ಉತ್ತರ ಕನ್ನಡದ 5 ಮಂದಿ ಮೀನುಗಾರರು ಸಹ ನಾಪತ್ತೆಯಾಗಿದ್ದಾರೆ. ಆದರೆ ಅಲ್ಲಿನ ಸಂಸದ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಅವರು ಇಂದಿಗೂ ಆ ಕುಟುಂಬವನ್ನು ಭೇಟಿ ಮಾಡಿಲ್ಲ. ಆ ಮೀನುಗಾರರು ಅವರ ಮತದಾರರು ಹೊರತು ನನ್ನ ಮತದಾರರಲ್ಲ. ಮಂತ್ರಿಯಾಗಿ ಎಲ್ಲ ಜವಾಬ್ದಾರಿ ನಿರ್ವಹಿಸಿದ್ದೇನೆ ಎಂದು ಸಚಿವ ನಾಡಗೌಡ ತಿಳಿಸಿದರು.

ಯೋಗೀಶ್‌ ಶೆಟ್ಟಿ, ವಾಸುದೇವ ರಾವ್‌, ಯು.ಆರ್‌. ಸಭಾಪತಿ, ಮಹಾಬಲ ಕುಂದರ್‌, ರಫೀಕ್‌, ರೋಹಿತ್‌ ಕರಂಬಳ್ಳಿ ಉಪಸ್ಥಿತರಿದ್ದರು.

ಕಡ್ಡಾಯ ಎನ್‌ಎಂಆರ್‌
ಸಮುದ್ರದಲ್ಲಿ ಬೋಟ್‌ ಅವಘಡ ಸಂಭವಿಸಿದಾಗ ಮೀನುಗಾರರ ರಕ್ಷಣೆಗಾಗಿ ಇಸ್ರೋ ಸಂಸ್ಥೆ ನೇವಿ ಮೆಸೇಜಿಂಗ್‌ ರಿಸೀವರ್‌ (ಎನ್‌ಎಂಆರ್‌) ಯಂತ್ರವನ್ನು ಆಳ ಸಮುದ್ರ ಬೋಟ್‌ಗಳಿಗೆ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದೆ. ಈ ಯೋಜನೆ ಜಾರಿಗೆ ರಾಜ್ಯ ಸರಕಾರ ಬಜೆಟ್‌ನಲ್ಲಿ 3 ಕೋ. ರೂ. ಮೀಸಲಿಟ್ಟಿದೆ. ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಎಲ್ಲ ಬೋಟ್‌ಗಳಿಗೆ ಅಳವಡಿಸುವಂತೆ ಆದೇಶ ಹೊರಡಿಸಲಾಗುವುದು ಎಂದು ಸಚಿವ ವೆಂಕಟರಾವ್‌ ಹೇಳಿದರು.

ಟಾಪ್ ನ್ಯೂಸ್

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.