ಬೀಚ್‌ನತ್ತ ಜಾನುವಾರುಗಳು; ಕಡಲ ತೀರದಲ್ಲಿ ಪ್ಲಾಸ್ಟಿಕ್‌ಗಿಲ್ಲ ಕಡಿವಾಣ

ಬೀಚ್‌ ತೀರದ‌ಲ್ಲಿ ಸ್ವಚ್ಛತೆಯ ನಿರ್ಲಕ್ಷ್ಯ

Team Udayavani, Apr 12, 2019, 6:00 AM IST

0904mlr28

ಪಣಂಬೂರು ಬೀಚ್‌ನಲ್ಲಿರುವ ದನಗಳು.

ವಿಶೇಷ ವರದಿ- ಮಹಾನಗರ: ನಗರದ ಬೀಚ್‌ ಬದಿಗಳಲ್ಲಿ ಬೀದಿ ನಾಯಿಗಳು, ಬೀಡಾಡಿ, ಸಾಕು ದನಗಳ ಸಂಖ್ಯೆ ಹೆಚ್ಚಾಗುತ್ತಿವೆ. ಸಂಜೆ ಹೊತ್ತಲ್ಲಿ ಬೀಚ್‌ನಲ್ಲಿ ಆಡಿ ಕಾಲ ಕಳೆಯೋಣ ಎಂದರೆ ಅಲ್ಲಿ ಬೀದಿ ನಾಯಿಗಳ ಹಾವಳಿ ಅಧಿಕವಾಗಿದೆ. ಇದರಿಂದ ಪ್ರವಾಸಿಗರಿಗೆ ಕಿರಿ ಕಿರಿ ಉಂಟಾಗುತ್ತಿದೆ. ಕಡಲ ತೀರದಲ್ಲಿ ಪ್ಲಾಸ್ಟಿಕ್‌, ತ್ಯಾಜ್ಯ ಎಸೆದಿದ್ದು ಇವು ಜಾನುವಾರುಗಳಿಗೆ ಆಹಾರವಾಗುತ್ತಿದೆ.

ದಿನನಿತ್ಯ ಸಾವಿರಾರು ಮಂದಿ ಆಗಮಿಸುವ ತಣ್ಣೀರುಬಾವಿ, ಪಣಂಬೂರು ಕಡಲ ತೀರದಲ್ಲಿ ಬೀದಿ ನಾಯಿಗಳು, ಬೀಡಾಡಿ ದನಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಮಕ್ಕಳಿಗೆ ಈಗಾಗಲೇ ಪರೀಕ್ಷೆ ಮುಗಿದು ರಜೆ ಪ್ರಾರಂಭವಾಗಿದ್ದು, ಅವರು ಬೀಚ್‌ನಲ್ಲಿ ಆಟವಾಡುವಾಗ ಬೀದಿನಾಯಿಗಳು ಹತ್ತಿರ ಬರುತ್ತಿದ್ದು, ಇದರಿಂದಾಗಿ ಅವರನ್ನು ಬೀಚ್‌ಗೆ ಕರೆತರಲು ಹೆತ್ತವರು ಆತಂಕಪಡುವಂತಾಗಿದೆ.

ತ್ಯಾಜ್ಯ ವಿಲೇವಾರಿ ಇಲ್ಲ
ಬೀಚ್‌ಗಳಲ್ಲಿ ಪ್ಲಾಸ್ಟಿಕ್‌ ಬಾಟಲ್‌ಗ‌ಳು, ಪ್ಲಾಸ್ಟಿಕ್‌ ಚೀಲಗಳು ಸಹಿತ ತ್ಯಾಜ್ಯಗಳು ಬಿದ್ದಿದ್ದು, ಹೆಚ್ಚಿನ ವಸ್ತುಗಳನ್ನು ಕಸದ ಬುಟ್ಟಿಗೆ ಹಾಕಲಾಗಿದ್ದರೂ ಬುಟ್ಟಿಯಿಂದಲೇ ದನಗಳು ಪ್ಲಾಸ್ಟಿಕ್‌ ವಸ್ತುಗಳನ್ನು ತಿನ್ನುತ್ತಿವೆ. ಬೀಚ್‌ ತೀರದ‌ಲ್ಲಿ ಬಿದ್ದಿರುವ ಪ್ಲಾಸ್ಟಿಕ್‌ ವಸ್ತುಗಳಿಂದಾಗಿ ನಗರದ ಸ್ವತ್ಛತೆಗೂ ಹಾನಿಯಾಗುತ್ತಿದೆ. ಬಳಸಿದ ಪ್ಲಾಸ್ಟಿಕ್‌, ಇತರ ವಸ್ತುಗಳನ್ನು ಸರಿಯಾಗಿ ವಿಲೇವಾರಿ ಮಾಡದೇ ಇರುವುದರಿಂದ ಈ ಸಮಸ್ಯೆ ಎದುರಾಗಿದೆ.

ರಾಜ್ಯದಲ್ಲಿ 4ರಿಂದ 5 ಮೈಕ್ರಾನ್‌ ಪ್ಲಾಸ್ಟಿಕ್‌ ಚೀಲಗಳ ಮಾರಾಟ ನಿಷೇಧವಿದೆ. ಈ ಪ್ರಮಾಣದ ಪ್ಲಾಸ್ಟಿಕ್‌ಗಳನ್ನು ಯಾವುದೇ ಅಂಗಡಿಗಳಲ್ಲಿ ಮಾರಾಟ ಮಾಡಬಾರದು. ಒಂದು ವೇಳೆ, ಮಾರಾಟ ಮಾಡಿದರೆ ಅಂಗಡಿ ಮಾಲಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂಬ ನಿಯಮ 2015- 16ರಲ್ಲಿ ಜಾರಿಗೆ ಬಂದಿದೆ. ಅಲ್ಲದೆ, ಅಂಡಿಗಳಿಗೆ ಪರವಾನಿಗೆ ನೀಡುವ ವೇಳೆ ಪ್ಲಾಸ್ಟಿಕ್‌ ಬಳಸಬಾರದು ಎಂಬ ಸ್ಪಷ್ಟ ನಿಯಮ, ಎಚ್ಚರಿಕೆಯನ್ನೂ ಪಾಲಿಕೆ ನೀಡುತ್ತದೆ. ಆದರೆ ನಗರದ ಹೆಚ್ಚಿನ ಅಂಗಡಿಯವರು ಈ ನಿಯಮಗಳಿಗೆ ಕ್ಯಾರೇ ಅನ್ನುತ್ತಿಲ್ಲ. ಇಂತಹ ಪ್ಲಾಸ್ಟಿಕ್‌ ಅನ್ನು ಗ್ರಾಹಕರು ರಸ್ತೆ ಬದಿಗಳಲ್ಲಿ, ಬೀಚ್‌ಗಳಲ್ಲಿ ಬಿಸಾಡುತ್ತಾರೆ.

ಗೂಳಿಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್‌!
ಕೆಲವು ತಿಂಗಳ ಹಿಂದೆಯಷ್ಟೇ ಬೈಕಂಪಾಡಿ, ಪಣಂಬೂರು ಪರಿಸರದಲ್ಲಿ ಸುತ್ತಾಡುತ್ತಿದ್ದ ಗೂಳಿ ಕೊಂಬು ಕ್ಯಾನ್ಸರ್‌ನಿಂದ ಸಾವನ್ನಪ್ಪಿತ್ತು. ಇದರ ಪೋಸ್ಟ್‌ಮಾರ್ಟಂ ಮಾಡಿದಾಗ ಹೊಟ್ಟೆಯಲ್ಲಿ 20 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್‌, ಲೋಹದ ವಸ್ತುಗಳಿದ್ದವು. ಬೈಕಂಪಾಡಿಯ ಗೂಳಿಯ ಕೊಂಬಿನಲ್ಲಿ ಕಾಣಿಸಿಕೊಂಡ ಕ್ಯಾನ್ಸರ್‌ಗೆ ಅದು ತಿಂದ ಪ್ಲಾಸ್ಟಿಕ್‌ ತ್ಯಾಜ್ಯ ಮತ್ತು ರಾಸಾಯನಿಕ ಮಿಶ್ರಿತ ವಸ್ತುಗಳು ಕಾರಣವಾಗಿತ್ತು.

 ಪ್ರಾಣಿಗಳನ್ನು ಬಿಡಬಾರದು
ಬೀಚ್‌ಗಳಿಗೆ ಬರುವ ಪ್ರವಾಸಿಗರು ನಾಯಿಗಳಿಗೆ ಆಹಾರ ನೀಡುತ್ತಾರೆ. ಇದೇ ಕಾರಣಕ್ಕೆ ನಾಯಿಗಳು ಅಲ್ಲೇ ಇರುತ್ತವೆ. ದನಗಳನ್ನು ಅಥವಾ ನಾಯಿಗಳನ್ನು ಸಾಕುವ ಮಂದಿ ಅವುಗಳನ್ನು ಹೊರಗಡೆ ಬಿಡಬಾರದು. ರಾತ್ರಿ ಸಮಯದಲ್ಲಿ ಬೀಚ್‌ಗೆ ಆಗಮಿಸುವ ಪ್ರವಾಸಿಗರಿಗೆ ಹೆಚ್ಚಾಗಿ ನಾಯಿಗಳ ಕಾಟ ಇರುತ್ತದೆ.
– ಯತೀಶ್‌ ಬೈಕಂಪಾಡಿ,
ಪಣಂಬೂರು ಬೀಚ್‌ ಅಭಿವೃದ್ಧಿ ನಿಗಮದ ಸಿಇಒ

ಸ್ವಚ್ಛತೆಯ ಅರಿವು
ಬಿಚ್‌ ಸಹಿತ ಸಾರ್ವಜನಿಕ ಪ್ರದೇಶಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಈಗಾಗಲೇ ಅರಿವು ಮೂಡಿಸಲಾಗುತ್ತಿದೆ. ಸಂಘ ಸಂಸ್ಥೆಗಳ ಜತೆ ಸೇರಿ ಬೀಚ್‌ ಸ್ವಚ್ಛತೆ ಕೂಡ ನಡೆಸಲಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆ ಮಾಡಬಾರದು, ಎಲ್ಲೆಂದರಲ್ಲಿ ಬಿಸಾಡಬಾರದು ಎಂದು ಸಾರ್ವಜನಿಕರಿಗೆ ಅರಿವಾಗಬೇಕು.
 - ಜಯಪ್ರಕಾಶ್‌ ನಾಯಕ್‌,
ಮಾಲಿನ್ಯ ನಿಯಂತ್ರಣ ಮಂಡಳಿ, ಹಿರಿಯ ವೈಜ್ಞಾನಿಕ ಅಧಿಕಾರಿ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.