ರಾಜಕೀಯದಲ್ಲಿ ರಂಗೀಲಾ


Team Udayavani, Apr 12, 2019, 6:00 AM IST

h-18

1990ರ ದಶಕದಲ್ಲಿ ತೆರೆಕಂಡ ರಂಗೀಲಾ ಚಿತ್ರದಲ್ಲಿ ಬಾಲಿವುಡ್‌ನ‌ಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದ ಬೋಲ್ಡ್‌ ಆ್ಯಂಡ್‌ ಬ್ಯೂಟಿಫ‌ುಲ್‌ ನಟಿ ಊರ್ಮಿಳಾ ಮಾತೋಂಡ್ಕರ್‌ ಮತ್ತೆ ಸುದ್ದಿಯಲ್ಲಿದ್ದಾರೆ. ಅಂದ ಹಾಗೆ, ಈ ಬಾರಿ ಊರ್ಮಿಳಾ ಸಿನಿಮಾದ ಮೂಲಕ ಸುದ್ದಿಯಾಗುತ್ತಿಲ್ಲ. ಬದಲಾಗಿ ರಾಜಕೀಯದ ಮೂಲಕ ಸುದ್ದಿಯಲ್ಲಿದ್ದಾರೆ. ಹೌದು, ಒಂದು ಕಾಲದಲ್ಲಿ ಬಾಲಿವುಡ್‌ನ‌ಲ್ಲಿ ತನ್ನದೇ ಆದ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದ, ತದನಂತರ ಕೆಲಕಾಲ ತೆರೆಯಿಂದ ದೂರವುಳಿದಿದ್ದ ನಟಿ ಊರ್ಮಿಳಾ ಮಾತೋಂಡ್ಕರ್‌ ಈಗ ರಾಜಕೀಯ ಅಂಗಳಕ್ಕೆ ಧುಮುಕಿದ್ದಾರೆ.

ಸದ್ಯ ಲೋಕಸಭಾ ಚುನಾವಣೆಯ ಕಾವು ದೇಶದಾದ್ಯಂತ ಜೋರಾಗುತ್ತಿ ರುವಂತೆ ಸಕ್ರಿಯ ರಾಜಕಾರಣದತ್ತ ಮುಖ ಮಾಡಿರುವ ಊರ್ಮಿಳಾ, ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇನ್ನು ಊರ್ಮಿಳಾ ಮಾತೋಂಡ್ಕರ್‌ ಎಂಬ ಹಾಟ್‌ ಚೆಲುವೆಯನ್ನು ಅದ್ದೂರಿಯಾಗಿ ಸ್ವಾಗತಿಸಿರುವ ಕಾಂಗ್ರೆಸ್‌ ಕೂಡ ಊರ್ಮಿಳಾಗೆ ಪಕ್ಷದ ಪ್ರಾಥಮಿಕ ಸದಸ್ಯತ್ವ ನೀಡಿ, ಮುಂಬೈ ಉತ್ತರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ನೀಡಿದೆ.

ಇನ್ನು ರಾಜಕಾರಣದಲ್ಲಿ ಸೆಕೆಂಡ್‌ ಇನ್ನಿಂಗ್ಸ್‌ ಶುರು ಮಾಡಿರುವ ಊರ್ಮಿಳಾ, “ನಾನು ಸಕ್ರಿಯ ರಾಜಕಾರಣಕ್ಕೆ ಮೊದಲ ಹೆಜ್ಜೆ ಇರಿಸಿದ್ದೇನೆ. ಸರ್ದಾರ್‌ ವಲ್ಲಭಬಾಯಿ ಪಟೇಲ…, ಮಹಾತ್ಮ ಗಾಂಧಿ, ನೆಹರು ಐಡಿಯಾಲಜಿಗಳನ್ನು ನಮ್ಮ ಕುಟುಂಬ ಪಾಲಿಸುತ್ತ ಬಂದಿದೆ. ನನ್ನನ್ನೂ ಹಾಗೆ ಬೆಳೆಸುತ್ತ ಬಂದಿದೆ. ನನ್ನ ರಾಜಕೀಯ ದೃಷ್ಟಿಕೋನವೂ ಹಾಗೆಯೇ ಬೆಳೆದಿದೆ. ನನಗೆ ಚಿಕ್ಕಂದಿನಿಂದಲೂ ಸಾಮಾಜಿಕ ಕಳಕಳಿ ಇತ್ತು. ಆಕಸ್ಮಿಕವಾಗಿ ಸಿನಿಮಾ ಕ್ಷೇತ್ರಕ್ಕೆ ಬಂದೆ. ಇಲ್ಲದಿದ್ದರೆ ಇಷ್ಟೊತ್ತಿಗಾಗಲೇ ರಾಜಕೀಯದಲ್ಲಿರುತ್ತಿದ್ದೆ. ಅಂತೂ ಅಂತಿಮವಾಗಿ ಕಾಂಗ್ರೆಸ್‌ ಮೂಲಕ ರಾಜಕೀಯ ಬದುಕು ಆರಂಭಿಸಿದ್ದೇನೆ. ಸಿನಿಮಾದಂತೆ, ಇಲ್ಲೂ ಜನರ ಪ್ರೀತಿ ಆಶೀರ್ವಾದ ಸಿಗಲಿದೆ’ ಎಂಬ ಭರವಸೆಯ ಮಾತುಗಳನ್ನಾಡುತ್ತಾರೆ.

ಇನ್ನು ಮುಂಬೈ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಊರ್ಮಿಳಾ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಗೋಪಾಲ್‌ ಶೆಟ್ಟಿಯವರನ್ನು ಎದುರಿಸುತ್ತಿದ್ದು, ಊರ್ಮಿಳಾಗೆ ವಿಜಯಲಕ್ಷ್ಮೀ ಒಲಿಯಲಿದ್ದಾಳಾ? ಅನ್ನೋದು ಚುನಾವಣಾ ಫ‌ಲಿತಾಂಶ ಬಂದ ಬಳಿಕವಷ್ಟೇ ಗೊತ್ತಾಗಲಿದೆ.

ಅದೇನೇ ಇರಲಿ, ಚಿತ್ರರಂಗದಲ್ಲಿ ಬೇಡಿಕೆ ಕಡಿಮೆಯಾಗುತ್ತಿದ್ದಂತೆ ತಾರೆಯರ ಚಿತ್ತ ರಾಜಕೀಯದತ್ತ ಹೊರಳುತ್ತದೆ ಎಂಬ ಮಾತಿಗೆ ಈಗ ಊರ್ಮಿಳಾ ರಾಜಕೀಯ ಸೇರ್ಪಡೆ ಇನ್ನಷ್ಟು ಇಂಬು ನೀಡುತ್ತಿದ್ದು, ಊರ್ಮಿಳಾ ಸೆಕೆಂಡ್‌ ಇನ್ನಿಂಗ್ಸ್‌ ಹೇಗಿರಲಿದೆ ಅನ್ನೋದನ್ನ ಅನೇಕರು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.