ಕಾವೂರು: ಬಿಜೆಪಿ ಕಾರ್ಯಕರ್ತರ ಸಭೆ
Team Udayavani, Apr 12, 2019, 6:17 AM IST
ಕಾವೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎ. 13ರಂದು ಮಂಗಳೂರು ಕೇಂದ್ರ ಮೈದಾನದಲ್ಲಿ ಚುನಾವಣೆ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಹಿನ್ನೆಲೆಯಲ್ಲಿ ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ಸಮಾಲೋಚನ ಸಭೆಯು ನಡೆಯಿತು.
ಶಾಸಕ ಹಾಗೂ ಬಿಜೆಪಿಯ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ದ.ಕ. ಜಿಲ್ಲಾ ಚುನಾವಣಾ ಪ್ರಭಾರ ಸುನಿಲ್ ಕುಮಾರ್ ಇವರು ಸಮಾಲೋಚನ ಸಭೆಯಲ್ಲಿ ಮಾರ್ಗದರ್ಶನ ನೀಡಿದರು. ಮೋದಿಜಿಯವರ ಸಾಧನೆಗಳು ಹಾಗೂ ಅವರ ಕಾರ್ಯ ಶೈಲಿಯಿಂದ ದೇಶಕ್ಕೆ ದೊರಕಿದ ಗೌರವದ ಸ್ಥಾನಮಾನದ ವಿಷಯ ಹಾಗೂ ಮುಂದಿನ ದಿನಗಳಲ್ಲಿ ಭಾರತದ ಬೆಳವಣಿಗೆಗೆ ಪಕ್ಷದ ಯೋಚನೆ ಯೋಜನೆಗಳನ್ನು ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ತಲುಪಿಸುವ ಹಿನ್ನೆಲೆಯಲ್ಲಿ ಚುನಾವಣೆ ಪ್ರಚಾರ ರ್ಯಾಲಿ ಅಗತ್ಯವಾಗಿದ್ದು, ಅದರ ಯಶಸ್ಸಿಗೆ ಕಾರ್ಯಕರ್ತರು ವ್ಯವಸ್ಥಿತ ಕಾರ್ಯತಂತ್ರ ರೂಪಿಸಬೇಕು ಎಂದು ಅವರು ತಿಳಿಸಿದರು.
ಮಂಗಳೂರು ವಿಭಾಗ ಸಹ ಪ್ರಭಾರ ಪ್ರತಾಪಸಿಂಹ ಇವರು ಸಂದಭೋìಚಿತವಾಗಿ ಮಾತನಾಡಿದರು. ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಳ್ತಂಗಡಿ, ಪ್ರಮುಖರಾದ ಗೋಪಾಲಕೃಷ್ಣ ಹೇರಳೆ, ನಿತಿನ್ ಕುಮಾರ್, ಪೂಜಾ ಪೈ, ರಣದೀಪ್ ಕಾಂಚನ್ ಉಪಸ್ಥಿತರಿದ್ದರು.
ಶಾಸಕ ಡಾ| ವೈ.ಭರತ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ನಗರ ಉತ್ತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೃಷ್ಣಾಪುರ ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು. ಸುಧಾಕರ್ ಆಚಾ ರ್ಯ ಅಡ್ಯಾರ್, ಗಣೇಶ್ ಹೊಸಬೆಟ್ಟು, ತಿಲಕ್ರಾಜ್ ಕೃಷ್ಣಾಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.