“ಮೋದಿ ಸಮಾವೇಶಕ್ಕಾಗಿ ಒಂದು ದಿನ ಮೀಸಲಿಡೋಣ’
Team Udayavani, Apr 12, 2019, 6:30 AM IST
ಕಾಪು: ಪ್ರಧಾನಿಯವರು ಎ. 13ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ನಾವು ನಮ್ಮ ಒಂದು ದಿನವನ್ನು ಅವರಿಗಾಗಿ ಮೀಸಲಿಟ್ಟು ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಹೇಳಿದರು.
ಕಳತ್ತೂರು ಗುರ್ಮೆಯಲ್ಲಿ ಜರಗಿದ ಎಲ್ಲೂರು ಜಿ. ಪಂ. ವ್ಯಾಪ್ತಿಯ ಮಹಾ ಶಕ್ತಿ ಕೇಂದ್ರದ ಜನಪ್ರತಿನಿಧಿಗಳು ಮತ್ತು ಸ್ಥಾನೀಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ಲೂರು ಕ್ಷೇತ್ರದ ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ತಾ.ಪಂ. ಸದಸ್ಯೆ ಶಶಿಪ್ರಭಾ ಶೆಟ್ಟಿ, ಕಾಪು ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ಪೈ, ಉಪಾಧ್ಯಕ್ಷ ಸುರೇಂದ್ರ ಪಣಿಯೂರು, ಪಕ್ಷದ ಪ್ರಮುಖ್ ಗಂಗಾಧರ ಸುವರ್ಣ, ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್, ಕುತ್ಯಾರು ಗ್ರಾ.ಪಂ. ಅಧ್ಯಕ್ಷ ಧೀರಜ್ ಶೆಟ್ಟಿ, ಮಜೂರು ಗ್ರಾ.ಪಂ. ಅಧ್ಯಕ್ಷ ಸಂದೀಪ್ ರಾವ್, ಬಡಾ ಗ್ರಾ.ಪಂ. ಉಪಾಧ್ಯಕ್ಷೆ ಇಂದಿರಾ ಶೆಟ್ಟಿ, ಮಜೂರು ಗ್ರಾ.ಪಂ. ಉಪಾಧ್ಯಕ್ಷೆ ಸಹನಾ ತಂತ್ರಿ, ವಿವಿಧ ಸ್ಥಾನೀಯ ಸಮಿತಿಯ ಅಧ್ಯಕ್ಷರಾದ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಆಲ್ವಿನ್ ಸುಕುಮಾರ್, ಉದಯ್ ಕುಮಾರ್, ಪ್ರಮುಖರಾದ ಚಂದ್ರಶೇಖರ್ ಶೆಟ್ಟಿ, ಶಿವರಾಮ ಭಂಡಾರಿ, ಗಂಗಾಧರ್ ಶೆಟ್ಟಿ, ಹರಿಣಾಕ್ಷ ಶೆಟ್ಟಿ, ಗಂಗಾಧರ ಆಚಾರ್ಯ, ಲತಾ ಆಚಾರ್ಯ, ಗಣೇಶ್ ಶೆಟ್ಟಿ ಪೈಯ್ನಾರು, ಸುರೇಶ್ ದೇವಾಡಿಗ ಬೆಳಪು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ