ಕಾವೇರಿ ಹೋರಾಟಗಾರರ ಕೇಸ್‌ ವಾಪಸ್‌: ಸಿಎಂ

ಮಂಡ್ಯದಲ್ಲಿ ಮುಂದುವರಿದ ಪ್ರಚಾರದ ಅಬ್ಬರ

Team Udayavani, Apr 12, 2019, 6:00 AM IST

190411kpn95

ಮಂಡ್ಯದ ಹೊರವಲಯದಲ್ಲಿ ನಿಖೀಲ್‌ ಪ್ರಚಾರ.

ಮಂಡ್ಯ: ಸೊಳ್ಳೇಪುರ, ರಾಂಪುರ, ವಳಗೆರೆಹಳ್ಳಿ, ಗೆಜ್ಜಲಗೆರೆ ಸೇರಿದಂತೆ ಮದ್ದೂರು ತಾಲೂಕಿನ ವಿವಿಧೆಡೆ ಸಚಿವ ಡಿ.ಸಿ.ತಮ್ಮಣ್ಣ ಜೊತೆಗೂಡಿ ರೋಡ್‌ ಶೋ ನಡೆಸಿದ
ಕುಮಾರಸ್ವಾಮಿ, ಸುಮಲತಾ ಪರ ಟೀಕಾಪ್ರಹಾರ ನಡೆಸಿದರು.

ತಾಲೂಕಿನ ಗೆಜ್ಜಲಗೆರೆ ಬಂದ ಸಿಎಂ, 1983ರ ಗೆಜ್ಜಲಗೆರೆ ಗೋಲಿಬಾರ್‌ ಪ್ರಕರಣದಲ್ಲಿ ವೀರ ಮರಣವನ್ನಪ್ಪಿದ ನಾಥಪ್ಪ ಹಾಗೂ ಸಿದ್ದಪ್ಪ ಅವರ ಸಮಾಧಿಗೆ ನಮನ ಸಲ್ಲಿಸಿದರು. ಕಾವೇರಿಗಾಗಿ ಹೋರಾಡಿದ 1,350 ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಿರುವುದಾಗಿ ಪ್ರಕಟಿಸಿದರು.

ಜೆಡಿಎಸ್‌ನ್ನು ಮುಗಿಸುವುದರ ಜತೆಗೆ ನಿಖೀಲ್‌ನನ್ನು ಸೋಲಿಸಲು ಎಲ್ಲಾಪಕ್ಷಗಳು ಟೊಂಕಕಟ್ಟಿ ನಿಂತಿದ್ದಾರೆ. ಇಂತಹ ಎಲ್ಲಾ ಪ್ರಯತ್ನಗಳಿಗೆ ತಾವು ತಕ್ಕ ಉತ್ತರ ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ಮಂಡ್ಯದ ಹರಿಪ್ರಿಯ ಹೋಟೆಲ್‌ನ ಚಾಣಕ್ಯ ಸಭಾಂಗಣದಲ್ಲಿ ಗ್ರಾಮೀಣ ವಿದ್ಯುತ್‌ ಪ್ರತಿನಿಧಿಗಳು ಸನ್ಮಾನಕಾರ್ಯಕ್ರಮಕ್ಕೆ ಆಹ್ವಾನಿಸಿದಾಗ, ಇಂತಹ ಸಣ್ಣಪುಟ್ಟ ಕಾರ್ಯಕ್ರಮಕ್ಕೆಲ್ಲಾ ಬರೋಕೆ ಆಗೋಲ್ಲ ಎಂದು “ಕೈ’ನಾಯಕರ ವಿರುದ್ಧ ಕಿಡಿಕಾರಿ, ಸನ್ಮಾನ ಸ್ವೀಕರಿಸದೆ ಹೊರ ನಡೆದರು.

ಚುನಾವಣೆಗೆ ಎರಡು ದಿನವಿರುವಾಗ ಪ್ರಚಾರದ ಸಮಯದಲ್ಲಿ ತಮ್ಮ ಬೆಂಬಲಿಗರಿಂದಲೇ ಕಲ್ಲು ತೂರಾಟ ನಡೆಸಿಕೊಂಡು ಆಸ್ಪತ್ರೆ ಸೇರಿಕೊಳ್ಳುವ ಚಿತಾವಣೆಯನ್ನು ಪಕ್ಷೇತರ ಅಭ್ಯರ್ಥಿ ನಡೆಸಿದ್ದಾರೆ. ಆ ಮೂಲಕ ಮತ್ತೂಂದು ರೀತಿಯಲ್ಲಿ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಸುಮಲತಾ ಹೆಸರೇಳದೆ ಆರೋಪಿಸಿದರು.

ಸಿಎಂಗೆ ತರಾಟೆ: ಈ ಮಧ್ಯೆ, ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ರೈತರ ಸಾಲಮನ್ನಾ ವಿಚಾರವಾಗಿ ಮಾತು ಆರಂಭಿಸಿದಾಗ, ಗ್ರಾಮಸ್ಥರು ಅವರ ಭಾಷಣಕ್ಕೆ
ಅಡ್ಡಿಪಡಿಸಿದರು. ಇದರಿಂದ ಆಕ್ರೋಶಗೊಂಡ ಸಿಎಂ, ನಿಮಗೆ ಬೇಕಾದವರಿಗೆ ಓಟು ಹಾಕಿಕೊಳ್ಳಿ. ನಿಮ್ಮ ಕಷ್ಟ-ಸುಖಕ್ಕೆ ಯಾರು ಸ್ಪಂದಿಸುತ್ತಾರೋ ನಾನೂ ನೋಡುತ್ತೇನೆ ಎಂದು ಸವಾಲು ಹಾಕಿ, ಮುನ್ನಡೆದರು.

ಕಾರಿಗೆ ಬೆಂಕಿ: ಈ ಮಧ್ಯೆ, ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕುಮಾರಸ್ವಾಮಿಯವರ ರೇಂಜ್‌ ರೋವರ್‌ ಕಾರಿನಲ್ಲಿ ತುಂಬಾ ಬಿಸಿಯಾಗಿ, ಹೊಗೆ ಕಾಣಿಸಿಕೊಂಡು ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು. ಬಳಿಕ, ಸಚಿವ ಡಿ.ಸಿ.ತಮ್ಮಣ್ಣ ಅವರ ಕಾರಿನಲ್ಲಿ ಪ್ರಚಾರ ಮುಂದುವರಿಸಿದರು. ಗುರುವಾರ ಕಾರನ್ನು ರಿಪೇರಿ ಮಾಡಲಾಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.