ಪ್ರಸಾದ್‌ ಪರ ಪುತ್ರಿ, ಅಳಿಯ ಮತಯಾಚನೆ


Team Udayavani, Apr 13, 2019, 3:00 AM IST

prasad

ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್‌ ಪರ ಅವರ ಅಳಿಯ, ನಂಜನಗೂಡು ಶಾಸಕ ಹರ್ಷವರ್ಧನ ಹಾಗೂ ಅವರ ಹಿರಿಯ ಪುತ್ರಿ ಪ್ರತಿಮಾ ಕ್ಷೇತ್ರದಲ್ಲಿ ಪ್ರತ್ಯೇಕವಾಗಿ ಮತಯಾಚಿಸಿದರು.

ಹರ್ಷವರ್ಧನ ಪ್ರಚಾರ: ವರುಣಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ತಾಂಡವಪುರ, ಹದಿನಾರು , ಬಿಳಗೆರೆ ,ಸುತ್ತೂರು, ಹೊಸಕೋಟೆ ಸೇರಿದಂತೆ ವಿವಿಧ ಗ್ರಾಮಗಳಿಗೆ ಹರ್ಷವರ್ಧನ ತೆರಳಿ, ತಮ್ಮ ಮಾವ ಶ್ರೀನಿವಾಸ ಪ್ರಸಾದ್‌ಗೆ ಮತ ನೀಡುವಂತೆ ಮನವಿ ಮಾಡಿದರು.

ಕ್ಷೇತ್ರದಲ್ಲಿ ಐದು ಬಾರಿ ಸಂಸದರಾಗಿ, ಶಾಸಕರಾಗಿ, ಕೇಂದ್ರ ಹಾಗೂ ರಾಜ್ಯದಲ್ಲಿ ಮಂತ್ರಿಯಾಗಿದ್ದಾರೆ. ಕ್ಷೇತ್ರದಾದ್ಯಂತ ಚಿರ ಪರಿಚಿರತರಾಗಿರುವ ಪ್ರಸಾದರ ಪ್ರಾಮಾಣಿಕತೆ ಬೇರೆಯವರಿಗೆ ಮಾದರಿಯಾಗಿದೆ. ಅವರ ರಾಜಕೀಯ ಹಿರಿತನಕ್ಕೆ ಪ್ರಾಮಾಣಿಕತೆಗೆ ನೀವೆಲ್ಲ ಮತ ನೀಡಿ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಕಾಂಗ್ರೆಸ್‌ನಿಂದ ದಲಿತರಿಗೆ ಅನ್ಯಾಯವಾಗಿದೆ. ಮೊದಲು ಅಂಬೇಡ್ಕರ್‌ ನಂತರ ಬಸವಲಿಂಗಪ್ಪ, ಕೊನೆಗೆ ಶ್ರೀನಿವಾಸ ಪ್ರಸಾದ್‌ ಸೇರಿದಂತೆ ಎಲ್ಲಾ ದಲಿತರಿಗೂ ಕಾಂಗ್ರೆಸ್‌ ಅನ್ಯಾಯ ಹಾಗೂ ಅವಮಾನ ಮಾಡಿದೆ ಎಂದು ದೂರಿದರು.

ಆರ್‌.ಧ್ರುವನಾರಾಯಣ ಸ್ವಾರ್ಥ ಹಾಗೂ ಅವಕಾಶವಾದಿ ರಾಜಕಾರಣಿಯಾಗಿದ್ದಾರೆ. ಒಬ್ಬರ ಮೇಲೆ ಮತ್ತೂಬ್ಬರನ್ನು ಎತ್ತಿ ಕಟ್ಟುತ್ತಿದ್ದಾರೆ. ಅವರು ಎಂದಿಗೂ ದಲಿತರ ಪರ ನಿಂತಿಲ್ಲ, ನಿಲ್ಲುವುದೂ ಇಲ್ಲ. ಈ ಬಾರಿ ಮತದಾರರು ಅವರನ್ನು ಸೋಲಿಸಿ ಪ್ರಪ್ರಥಮ ಬಾರಿ ಕ್ಷೇತ್ರದಲ್ಲಿ ಕಮಲ ಅರಳಿಸಬೇಕು ಎಂದು ಕೋರಿದರು.

ಪುತ್ರಿ ಪ್ರತಿಮಾ ಪ್ರಚಾರ: ತಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಅವರ ಹಿರಿಯ ಪುತ್ರಿ ಪ್ರತಿಮಾ ಚುನಾವಣಾ ಪ್ರಚಾರ ನಡೆಸಿದರು. ಪ್ರತಿ ಮನೆ ಮನೆಗೂ ತೆರಳಿ ಮತಯಾಚಿಸಿದರು.

ಈ ವೇಳೆ ಮಾತನಾಡಿದ ಅವರು, 20 ವರ್ಷಗಳ ಬಳಿಕ ಲೋಕಸಭೆಗೆ ಸ್ಪರ್ಧಿಸಿರುವ ತಮ್ಮ ತಂದೆಯನ್ನು ಈ ಬಾರಿ ಸಂಸತ್‌ಗೆ ಕಳುಹಿಸಬೇಕು. ದೇಶಕ್ಕೆ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕಿದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಬಿಜೆಪಿ ಬೆಂಬಲಿಸಬೇಕು ಎಂದು ಕೋರಿದರು.

ಈ ವೇಳೆ ಮುಖಂಡರಾದ ಕಾಪು ಸಿದ್ಧಲಿಂಗಸ್ವಾಮಿ, ಜಿಪಂ ಸದಸ್ಯ ಗುರುಸ್ವಾಮಿ, ಸದಾನಂದ, ತಾಪಂ ಅಧ್ಯಕ್ಷ ಬಿ ಮಹದೇವಪ್ಪ, ವರುಣಾ ಕ್ಷೇತ್ರದ ಅಧ್ಯಕ್ಷ ಶಿವಯ್ಯ, ಮುಖಂಡರಾದ ಮಾಂಬಳ್ಳಿ ಮೂರ್ತಿ, ತಾಂಡವಪುರ ಸಂದೀಪ್‌, ಸುತ್ತೂರು ಚಿಕ್ಕಮಾದಪ್ಪ, ತಾಪಂ ಸದಸ್ಯ ಸತೀಶ್‌ ಇತರರಿದ್ದರು.

ಪ್ರಸಾದ್‌ ಕುಟುಂಬದಿಂದ ಮತಬೇಟೆ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್‌ ಪ್ರಸಾದ್‌ ಅವರ ನಾಲ್ಕು ದಶಕಗಳ ರಾಜಕೀಯವ ಜೀವನದಲ್ಲಿ ಎಂದಿಗೂ ಅವರ ಪುತ್ರಿಯರು ಹಾಗೂ ಸಂಬಂಧಿಕರು ಭಾಗಿಯಾಗಿರಲಿಲ್ಲ.

ಆದರೆ, ಈ ಬಾರಿ ಅವರ ಮೂವರು ಪುತ್ರಿಯರು, ಅಳಿಯಂದರು ಹಾಗೂ ಹತ್ತಿರದ ಸಂಬಂಧಿಕರು ಉರಿ ಬಿಸಿಲನ್ನು ಲೆಕ್ಕಿಸದೇ ಹಳ್ಳಿಗಳನ್ನು ಸುತ್ತುತ್ತಾ ಮತಬೇಟಿಗೆ ಇಳಿದಿದ್ದಾರೆ. ಪ್ರಸಾದ್‌ ಅಳಿಯ, ನಂಜನಗೂಡು ಶಾಸಕ ಹರ್ಷವರ್ಧನ್‌, ಮತ್ತೂಬ್ಬ ಅಳಿಯ ಡಾ|ಮೋಹನ್‌, ಹಿರಿಯ ಪುತ್ರಿ ಪ್ರತಿಮಾ ಸೇರಿದಂತೆ ಸಂಬಂಧಿಕರು ಕ್ಷೇತ್ರ ವ್ಯಾಪ್ತಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.