ಗಾಳಿಪಟ ಹಾರಿಸಿ, ಸಂಭ್ರಮಿಸಿದ ಚಿಣ್ಣರು
Team Udayavani, Apr 13, 2019, 6:02 AM IST
ಗಂಗೊಳ್ಳಿ: ಪರೀಕ್ಷೆ ಮುಗಿಸಿದ ಖುಷಿಯಲ್ಲಿದ್ದ ಕೊಂಚಾಡಿ ರಾಧಾಶೆಣೈ ಸರಕಾರಿ ಹಿ. ಪ್ರಾ. ಶಾಲೆ ಖಾರ್ವಿಕೇರಿಯ ಮಕ್ಕಳು ಖಾರ್ವಿಕೇರಿಯ ಕಡಲ ಕಿನಾರೆಯಲ್ಲಿ ತಾವೇ ಸ್ವತಃ ತಯಾರಿಸಿದ ಬಣ್ಣ – ಬಣ್ಣದ ತರಹೇವಾರಿ ಗಾಳಿಪಟಗಳನ್ನು ಮುಗಿಲೆತ್ತರಕ್ಕೆ ಹಾರಿಸಿ ಸಂಭ್ರಮಿಸಿದರು.
ಶಿಕ್ಷಣವೆಂದರೆ ಪಠ್ಯ ಮಾತ್ರವಲ್ಲ, ಅದರ ಹೊರತಾಗಿಯೂ ಭಿನ್ನ ಚಟುವಟಿಕೆಗಳ ಮೂಲಕ ಕಲಿಯುವುದು ಸಾಕಷ್ಟಿದೆ ಎನ್ನುವುದರ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಖಾರ್ವಿಕೇರಿಯ ಕೊಂಚಾಡಿ ರಾಧಾಶೆಣೈ ಶಾಲೆಯಲ್ಲಿ ಚಿಣ್ಣರಿಗೆ ಎ. 8 ರಂದು ಗಾಳಿಪಟ ಉತ್ಸವವನ್ನು ಏರ್ಪಡಿಸಲಾಗಿತ್ತು.ಖಾರ್ವಿಕೇರಿಯ ಕಡಲ ಕಿನಾರೆಯಲ್ಲಿ ನಡೆದ ಈ ಗಾಳಿಪಟ ಉತ್ಸವದಲ್ಲಿ 200 ಕ್ಕೂ ಅಧಿಕ ಮಂದಿ ಮಕ್ಕಳು ಶಿಕ್ಷಕರ ಮಾರ್ಗದರ್ಶನದಲ್ಲಿ ತಾವೇ ತಯಾರಿಸಿದ ಗಾಳಿಪಟಗಳನ್ನು ಹಾರಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಹಾಗೂ ಶಿಕ್ಷಕ ವೃಂದ, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು, ಊರವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ