ಕಂಡ್ಲೂರು: ಮುಚ್ಚುವ ಭೀತಿಯ ಕನ್ನಡ ಶಾಲೆಯ ಅಭ್ಯುದಯ


Team Udayavani, Apr 13, 2019, 6:15 AM IST

1104BAS4AAA

ಕಂಡ್ಲೂರು ಶಾಲೆ.

ವಿಶೇಷ ವರದಿ- ಬಸ್ರೂರು: ಒಂದು ಕಾಲದಲ್ಲಿ 500 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದ ಈ ಕನ್ನಡ ಶಾಲೆಯಲ್ಲೀಗ ಇರುವುದು ಕೇವಲ 22 ಮಕ್ಕಳು, 4 ಶಿಕ್ಷಕರು! ಇದಕ್ಕಾಗಿ ಸರಕಾರಕ್ಕೆ ಹೊಳೆದ ಪರಿಹಾರ ಮುಚ್ಚುಗಡೆ! ಆದರೆ ಊರಮಂದಿಯ ಪ್ರಯತ್ನದ ಫ‌ಲವಾಗಿ ಶಾಲೆಗೆ 40 ಮಕ್ಕಳ ಸೇರ್ಪಡೆಗೆ ಈಗಾಗಲೇ ಪೋಷಕರ ಒಪ್ಪಿಗೆ ಆಗಿದೆ.

ಕಂಡ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಗೆ 134 ವರ್ಷಗಳ ಸುದೀರ್ಘ‌ ಶೈಕ್ಷಣಿಕ ಇತಿಹಾಸವಿದೆ. ಶಾಲೆಯಲ್ಲಿ ಯಾವುದೇ ಮೂಲಭೂತ ಸೌಕರ್ಯದ ಕೊರೆತೆಯಿಲ್ಲದ ಏಕೈಕ ಶಾಲೆ ಇದಾಗಿದೆ ಎನ್ನುವುದು ಗಮನಾರ್ಹ.

ವಿಲೀನ
ಬಹುತೇಕ ಸರಕಾರಿ ಶಾಲೆಗಳು ಮಕ್ಕಳ ಕೊರತೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕಂಡ್ಲೂರು ಕನ್ನಡ ಶಾಲೆಗೂ ಅದೇ ಸಮಸ್ಯೆ ಎದುರಾಗಿದೆ. ಈ ಮಧ್ಯೆ ಈ ಶಾಲೆಯನ್ನು ಬೇರೊಂದು ಸರಕಾರಿ ಶಾಲೆಯ ಜತೆ ವಿಲೀನಗೊಳಿಸಲಾಗುವುದು ಎಂಬ ಸುದ್ದಿಯೂ ಬಂದಾಗ ಈ ಶಾಲೆಯ ಉಳಿವಿಗಾಗಿ ಶಾಲಾ ಅಭ್ಯುದಯ ಸಮಿತಿ , ಶಾಲಾಭಿವೃದ್ಧಿ ಸಮಿತಿ ಮತ್ತಿತರ ಸಮಿತಿಗಳ ರಚನೆಯಾಗಿ ಶಾಲೆಯ ಸರ್ವತೋಮುಖ ಪ್ರಗತಿಗೆ ಸಜ್ಜಾಗಿವೆ.

ಸಮಿತಿ
ಶಾಲಾಭ್ಯುದಯ ಸಮಿತಿಯ ಅಧ್ಯಕ್ಷೆ ಯಾಗಿ ಕಾವ್ರಾಡಿ ಗ್ರಾ.ಪಂ. ಅಧ್ಯಕ್ಷೆಯಾದ ಗೌರಿ ಆರ್‌. ಶ್ರೀಯಾನ್‌ ಹಾಗೂ ಶಾಲಾ ಮೆಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ವಿಜಯ ಪೂಜಾರಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರ ಜತೆ ಊರವರ ಪರಿಶ್ರಮವೂ ಸೇರಿದೆ.

ಸಕಲ ವ್ಯವಸ್ಥೆ
ಈಗಾಗಲೇ ಶಾಲೆಯಲ್ಲಿ ಸುಸಜ್ಜಿತ ಶಾಲಾ ಕಟ್ಟಡ, ತರಗತಿ ಕೊಠಡಿಗಳು, ವಿಶಾಲವಾದ ಬಯಲು ರಂಗ ಮಂದಿರ, ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸುಸಜ್ಜಿತ ಅಡುಗೆ ಕೋಣೆ, ಆಟದ ಮೈದಾನ ಮತ್ತಿತರ ವ್ಯವಸ್ಥೆಗಳು ಈ ಶಾಲೆಯಲ್ಲಿವೆ.

ಶಾಲೆ ಮುಚ್ಚಲು ಬಿಡುವುದಿಲ್ಲ
ಶತಮಾನ ಕಳೆದ ಶಾಲೆಯ ಉಳಿವು ಅಗತ್ಯ. ಅದಕ್ಕಾಗಿ ಮನೆ ಮನೆ ಭೇಟಿ ಮಾಡಿ ದೇಣಿಗೆ ಸಂಗ್ರಹಿಸುವುದಷ್ಟೇ ಅಲ್ಲ ಶಾಲೆಗೆ ಮಕ್ಕಳನ್ನು ಸೇರಿಸಿ ಎಂಬ ಮನವಿ ಮಾಡುತ್ತಿದ್ದೇವೆ. ಇದಕ್ಕೆ ಫ‌ಲ ದೊರೆಯುತ್ತಿದೆ. ಶಾಲೆ ಮುಚ್ಚಲು ಬಿಡುವುದಿಲ್ಲ.
-ಗೌರಿ ಶ್ರೀಯಾನ್‌, ಶಾಲಾಭ್ಯುದಯ ಸಮಿತಿಯ ಅಧ್ಯಕ್ಷೆ

ಭೇಟಿ ನೀಡಿದ್ದೇನೆ
ಶಾಲೆಗೆ ಭೇಟಿ ನೀಡಿದ್ದು ಮುಂದಿನ ವರ್ಷ 6 ಹಾಗೂ 7ರಲ್ಲಿ ಒಬ್ಬೊಬ್ಬ ವಿದ್ಯಾರ್ಥಿ ಮಾತ್ರ ಇರುತ್ತಾರೆ. ಹಾಗಾಗಿ ಕಿರಿಯ ಪ್ರಾಥಮಿಕ ಮಾಡುವ ಕುರಿತು ಅಥವಾ ಸಮೀಪದ ಉರ್ದು ಶಾಲೆಗೆ ವಿಲೀನ ಮಾಡುವ ಪ್ರಸ್ತಾಪ ಇದೆ. ಹೊಸದಾಗಿ ಮಕ್ಕಳ ಸೇರ್ಪಡೆಯಾದರೆ ಮುಚ್ಚುವ ಸಂದರ್ಭ ಬರದು. ಊರವರಿಂದಲೂ ಮನವಿ ಬಂದಿದೆ.
– ಅಶೋಕ್‌ ಕಾಮತ್‌, ಕ್ಷೇತ್ರ ಶಿಕ್ಷಣಾಧಿಕಾರಿ, ಕುಂದಾಪುರ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.