ಕಸ ಸಂಗ್ರಹಿಸುವ ವಾಹನದಲ್ಲಿಯೂ ಮತದಾನ ಜಾಗೃತಿ!

ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ ಸಮಿತಿಯಿಂದ ವಿಶಿಷ್ಟ ಪ್ರಯೋಗ

Team Udayavani, Apr 13, 2019, 6:05 AM IST

1204mlr10

ಕೋಟೆಕಾರ್‌ ಪಟ್ಟಣ ಪಂಚಾಯತ್‌ನ ಕಸ ಸಂಗ್ರಹಿಸಿ ಸಾಗಿಸುವ ವಾಹನ.

ಮಹಾನಗರ: ಅಣ್ಣ, ತಮ್ಮ, ಅಕ್ಕ, ತಂಗಿ… ಮತವ ಹಾಕೋಣ; ಪುಣ್ಯ ಕಾರ್ಯವು ಮತದಾನ, ಹಕ್ಕನ್ನು ಪೋಲಾಗಿಸ ಬೇಡ… ಚಲಾಯಿಸ ಬೇಕು…ಸಮಾಜ ಬದಲು ಆಗುವುದು ನೋಡು… ಮತವ ಹಾಕೋಣ… ದೇಶವ ಕಟ್ಟೋಣ…

ಇದು ಯಾವುದೇ ಸಿನೆಮಾ ಹಾಡಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬ ಎಂದೇ ಪರಿಗಣಿಸಲಾಗಿರುವ ಚುನಾವಣ ಪ್ರಕ್ರಿಯೆಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ ಸಮಿತಿಯು ರಚನೆ ಮಾಡಿರುವ ಹಾಡು. ಇಂತಹ ಹಲವು ಹಾಡುಗಳನ್ನು ತಯಾರಿಸಲಾಗಿದ್ದು, ಮತದಾನ ಜಾಗೃತಿಗೆ ಅವಕಾಶ ಇರುವ ಎಲ್ಲ ಕಡೆಗಳಲ್ಲಿ ಬಳಸಲಾಗುತ್ತಿದೆ.

ಮನೆ ಮನೆ ಕಸ ಸಂಗ್ರಹಿಸಿ ಸಾಗಿಸುವ ವಾಹನಗಳಲ್ಲಿ ಕೂಡ ಈ ಹಾಡುಗಳನ್ನು ಬಳಸಿಕೊಳ್ಳುತ್ತಿರುವುದು ವಿಶೇಷ.ಪುರಸಭೆ, ಪಟ್ಟಣ ಪಂಚಾಯತ್‌, ಗ್ರಾ.ಪಂ.ಗಳ ಮನೆ ಮನೆ ಕಸ ಸಂಗ್ರಹಿಸಿ ಸಾಗಿಸುವ ವಾಹನಗಳಲ್ಲಿ ಸಾಮಾನ್ಯವಾಗಿ ಸ್ವತ್ಛತೆಯ ಬಗೆಗಿನ ಸ್ಲೋಗನ್‌ ಅಥವಾ ಹಾಡುಗಳು ಕೇಳಿ ಬರುತ್ತಿದ್ದವು; ಈಗ ಅದೇ ಜಾಗದಲ್ಲಿ ಮತದಾನ ಜಾಗೃತಿಗೆ ಸಂಬಂಧಿಸಿದ ಹಾಡುಗಳು ಕೇಳಿ ಬರುತ್ತಿವೆ.

ಸ್ವೀಪ್‌ ಸಮಿತಿಯು ಸ್ಥಳೀಯ ಕಲಾವಿದರನ್ನು ಬಳಸಿಕೊಂಡು ಹಾಡು ಗಳನ್ನು ರಚಿಸಿ, ರಾಗ, ಸಂಗೀತ ಸಂಯೋಜನೆ ಮಾಡಿದೆ. ಡಿವಿಡಿ, ಪೆನ್‌ಡ್ರೈವ್‌, ಮೆಮೊರಿ ಕಾರ್ಡ್‌ ರೂಪದಲ್ಲಿ ಅವುಗಳನ್ನು ಅವಕಾಶ ಇರುವಲ್ಲೆಲ್ಲ ಬಳಸಲು ಒದಗಿಸಲಾಗಿದೆ. ನಗರಾಡಳಿತ ಸಂಸ್ಥೆಗಳಲ್ಲಿ ಮತ್ತು ಗ್ರಾ.ಪಂ.ಗಳಲ್ಲಿ ಕಸ ಸಾಗಿಸುವ ವಾಹನಗಳು ಗಲ್ಲಿ ಗಲ್ಲಿಗೆ ತೆರಳಿ ಜನ ಸಂಪರ್ಕ ಸಾಧಿಸುವ‌ಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ ಈ ಹಾಡುಗಳನ್ನು ಅವುಗಳಲ್ಲಿ ಬಳಕೆ ಮಾಡಲು ಸ್ವೀಪ್‌ ಸಮಿತಿ ಸೂಚಿಸಿದೆ.

ಸಂಗೀತಕ್ಕೂ ಪ್ರಾತಿನಿಧ್ಯ
ಯಾವುದೇ ವಿಷಯದಲ್ಲಿ ಜಾಗೃತಿ ಮೂಡಿಸುವಲ್ಲಿ ಸಂಗೀತ ಪ್ರಮುಖ ಪಾತ್ರ ವಹಿಸುತ್ತದೆ. ಹಬ್ಬಗಳ ಸಂದರ್ಭಗಳ‌ಲ್ಲಿಯೂ ಸಂಗೀತಕ್ಕೆ ಮಹತ್ವವಿದೆ. ಚುನಾವಣೆಯು ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ಹಬ್ಬ. ಹಾಗಾಗಿ ಇಲ್ಲಿ ಸಂಗೀತಕ್ಕೂ ಪ್ರಾತಿನಿಧ್ಯ ನೀಡಲಾಗಿದೆ.
– ಡಾ| ಆರ್‌. ಸೆಲ್ವಮಣಿ,
ಜಿ.ಪಂ. ಸಿಇಒ ಮತ್ತು ಸ್ವೀಪ್‌ ಸಮಿತಿ ಅಧ್ಯಕ್ಷರು

ಜಾಗೃತಿ ಮೂಡಿಸಲು ಸಹಕಾರಿ
ಸ್ವಚ್ಛತೆ ಬಗೆಗಿನ ಹಾಡುಗಳ ಬದಲು ಮತದಾನ ಸಂಬಂಧಿತ ಹಾಡುಗಳನ್ನು ಹಾಕಿರುವುದು ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಸಹಕಾರಿ ಆಗಲಿದೆ ಎನ್ನುವುದು ನಮ್ಮ ಭಾವನೆ. ಜಿಲ್ಲಾ ಸ್ವೀಪ್‌ ಸಮಿತಿಯ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಮತದಾನ ನಡೆಯುವ ತನಕ (ಎ. 18) ಈ ಹಾಡುಗಳು ಕೇಳಿ ಬರಲಿವೆ.
– ಪೂರ್ಣಕಲಾ, ಕಾರ್ಯ ನಿರ್ವಹಣಾ ಅಧಿಕಾರಿ,
ಕೋಟೆಕಾರ್‌ ಪಟ್ಟಣ ಪಂಚಾಯತ್‌

– ಹಿಲರಿ ಕ್ರಾಸ್ತಾ 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.