ಸೋಲುವ ಭೀತಿ ನನಗಿಲ್ಲ ; ಪ್ರಮೋದ್‌ ಹತಾಶೆಗೆ ಅವರ ಹೇಳಿಕೆಗಳೇ ಸಾಕ್ಷಿ

ಶೋಭಾ ಕರಂದ್ಲಾಜೆ

Team Udayavani, Apr 13, 2019, 6:00 AM IST

shobha-karandlaje-545-D

ಉಡುಪಿ: ನಾಮಪತ್ರ ಸಲ್ಲಿಕೆಯಾದಂದಿನಿಂದ ನಾನು ವ್ಯಾಪಕ ಪ್ರಚಾರದಲ್ಲಿ ತೊಡಗಿದ್ದೇನೆ. ನಾಯಕರು, ಕಾರ್ಯಕರ್ತರು “ಮತ್ತೂಮ್ಮೆ ಮೋದಿ ಪ್ರಧಾನಿ’ ಎಂಬ ಘೋಷಣೆಯೊಂದಿಗೆ ಹಗಲು ರಾತ್ರಿ ಶ್ರಮಿಸುತ್ತಿದ್ದು, ಬಿಜೆಪಿ ಗೆಲುವು ನಿಶ್ಚಿತವಾಗಿದೆ.

ಸೋಲುವ ಭೀತಿ ಇರುವುದು ಮೈತ್ರಿ ಪಕ್ಷದ ಅಭ್ಯರ್ಥಿಗೆ. ಅವರು ಹತಾಶರಾಗಿರುವುದಕ್ಕೆ ಅವರ ಹೇಳಿಕೆಗಳೇ ಸಾಕ್ಷಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಕಾಪು ಕ್ಷೇತ್ರದ ಹಿರಿಯಡಕದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.ಕ್ಷೇತ್ರದ 7 ಮಂದಿ ಶಾಸಕರು ಮತ್ತು 2 ಜಿಲ್ಲೆಗಳ ಅಧ್ಯಕ್ಷರು, ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಪ್ರಚಾರದಲ್ಲಿ ನಿರತರಾಗಿದ್ದು, ಈ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಗೆಲ್ಲುವುದಲ್ಲಿ ಸಂಶಯವೇ ಇಲ್ಲ ಎಂದರು.

ಕಾಂಗ್ರೆಸ್‌ನವರು 60 ವರ್ಷಗಳಿಂದ ಇಂದಿರಾ ಗಾಂಧಿ ಹೆಸರನ್ನು ಹೇಳುತ್ತಾ ಅವರ ಮತ್ತು ರಾಜೀವ್‌ ಗಾಂಧಿ ಅಂತ್ಯಸಂಸ್ಕಾರದ ವೀಡಿಯೊ ತುಣುಕುಗಳನ್ನು ತೋರಿಸಿ ಮತ ಕೇಳಬಹುದಾದರೆ ಬಿಜೆಪಿ ಕಾರ್ಯಕರ್ತರು ಈ ದೇಶಕ್ಕೆ ಗೌರವ ತಂದ, ಐದೇ ವರ್ಷಗಳಲ್ಲಿ ಅದ್ಭುತ ಸಾಧನೆ ಮಾಡಿದ, ಜಗತ್ತಿಗೆ ಬಲಿಷ್ಠ ಭಾರತವನ್ನು ಪರಿಚಯಿಸಿದ ಹೆಮ್ಮೆಯ ಪ್ರಧಾನಿಯ ಹೆಸರನ್ನು ಏಕೆ ಬಳಸಬಾರದು? ಮೈತ್ರಿ ಪಕ್ಷದವರಿಗೆ ಇದನ್ನು ಕೇಳಲು ನೈತಿಕತೆ ಇದೆಯೇ ಎಂದು ಶೋಭಾ ಪ್ರಶ್ನಿಸಿದರು.

ಈ ಬಾರಿ ಚುನಾವಣೆಯಲ್ಲಿ ಕನಿಷ್ಠ ಚಿಹ್ನೆಯನ್ನು ಉಳಿಸಿ ಕೊಳ್ಳಲು ಸಾಧ್ಯವಾಗದ ಕಾಂಗ್ರೆಸಿಗರು ಹತಾಶರಾಗಿ ಪಕ್ಷ ಬಿಟ್ಟ ಪ್ರಮೋದ್‌ ಅವರಿಂದ ಏನೇನೋ ಹೇಳಿಕೆ ನೀಡಿಸುತ್ತಿರುವುದು ಹಾಸ್ಯಾಸ್ಪದ ಎಂದರು.

ಉತ್ತರಿಸುವ ಅಗತ್ಯವಿಲ್ಲ
ಉಸ್ತುವಾರಿ ಸಚಿವರಾಗಿದ್ದ ಪ್ರಮೋದ್‌ ಅವರು ಉಡುಪಿ ವಿಧಾನಸಭಾ ಕ್ಷೇತ್ರದಲ್ಲೇ ತಿರಸ್ಕರಿಸಲ್ಪಟ್ಟು, ಅಸ್ತಿತ್ವ ಕಳೆದುಕೊಂಡ ದುರ್ಬಲ ಅಭ್ಯರ್ಥಿಯಾಗಿದ್ದಾರೆ. ತನ್ನ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಗೆಲ್ಲಲಾಗದೆ, ಸಂಪೂರ್ಣ ಹತಾಶರಾಗಿ ನಿರಂತರವಾಗಿ ಬೇರೆ ಪಕ್ಷಗಳ ಬಾಗಿಲು ಬಡಿಯುತ್ತಿರುವ ದುರ್ಬಲ ವ್ಯಕ್ತಿಯ ಹೇಳಿಕೆಗಳಿಗೆ ಉತ್ತರಿಸುವ ಅಗತ್ಯ ಬಿಜೆಪಿಗರಿಗಿಲ್ಲ ಎಂದು ಶೋಭಾ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ “ಆಯುಷ್ಮಾನ್‌ ಭಾರತ’ ಯೋಜನೆ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೈದ್ಯಕೀಯ ವೆಚ್ಚ ಭರಿಸುವ ಅದ್ಭುತ ಯೋಜನೆ ಯಾಗಿದ್ದು, ಕೋಟ್ಯಂತರ ಜನರು ಇದರ ಫ‌ಲಾನು ಭವಿಗಳಾಗಿದ್ದಾರೆ. ಜನೌಷಧ ಮಳಿಗೆ ತೆರೆದು ಅಗ್ಗದ ದರದಲ್ಲಿ ಔಷಧ ನೀಡಿದ್ದಾರೆ. ಉಜ್ವಲ ಯೋಜನೆ ಜಾರಿಗೆ ತಂದು ಕೋಟ್ಯಂತರ ಮಹಿಳೆಯರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ. ದೀನದಯಾಳು ಗ್ರಾಮೀಣ ವಿದ್ಯುದೀಕರಣ ಮೂಲಕ ಬಡವರ ಮನೆ ಬೆಳಗಿದ್ದಾರೆ. ಸ್ವತ್ಛ ಭಾರತದ ನಿರ್ಮಾತೃ, ಲಕ್ಷಾಂತರ ಉದ್ಯೋಗ ಸೃಷ್ಟಿಸಿ ಯುವಕರ ಬಾಳಿಗೆ ಭದ್ರತೆಯನ್ನು ನೀಡಿದ್ದು, ವಿವಿಧ ವಿಮಾ ಯೊಜನೆಗಳ ಮೂಲಕ ಅಶಕ್ತರ ಬಾಳಿನಲ್ಲಿ ಶಕ್ತಿ ತುಂಬಿದ್ದಾರೆ ಎಂದರು.

ಶತ್ರು ರಾಷ್ಟ್ರಗಳಿಂದ, ಉಗ್ರರಿಂದ ದೇಶವನ್ನು ಮುಕ್ತ ಗೊಳಿಸಿದ ಪ್ರಧಾನಿಯನ್ನು ಜನ ಮರೆಯುವರೇ? ಸಂಕಲ್ಪಿತ ಭಾರತ, ಸಶಕ್ತ ಭಾರತಕ್ಕಾಗಿ ಮೋದಿಯೊಂದಿಗೆ ಕೈ ಜೋಡಿಸಿ ಎಂದು ಶೋಭಾ ವಿನಂತಿಸಿದರು.

ಕುಯಿಲಾಡಿ ಸುರೇಶ್‌ ನಾಯಕ್‌, ಗುರ್ಮೆ ಸುರೇಶ್‌ ಶೆಟ್ಟಿ, ಲಾಲಾಜಿ ಆರ್‌. ಮೆಂಡನ್‌, ಕುತ್ಯಾರು ನವೀನ್‌ ಶೆಟ್ಟಿ, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಉಮೇಶ್‌ ಶೆಟ್ಟಿ, ಹರೀಶ್‌, ಪ್ರವೀಣ್‌ ಪೂಜಾರಿ, ಸಂಧ್ಯಾ ಕಾಮತ್‌, ಜಿಯಾನಂದ ಹೆಗ್ಡೆ, ಸುರೇಶ್‌ ಶೆರ್ವೆಗಾರ್‌, ಸತ್ಯಾನಂದ ನಾಯಕ್‌, ಅಶೋಕ್‌ ಜೋಗಿ, ಸವಿತಾ ನಾಯಕ್‌ ಉಪಸ್ಥಿತರಿದ್ದರು.


ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.