ಹಸಿರೀಕರಣಕ್ಕೆ ಸಾಮಾಜಿಕ ಅರಣ್ಯ ಇಲಾಖೆ ಪಣ

ನರ್ಸರಿಯಲ್ಲಿ ಬೆಳೆಸುತ್ತಿದೆ 37 ಸಾವಿರ ಸಸಿ „ ಮುಂಗಾರಿನಲ್ಲಿ ನೆಡಲು ಸಿದ್ಧತೆ „ ಕಳೆದ ವರ್ಷ ನೆಟ್ಟ ಗಿಡಗಳ ರಕ್ಷಣೆಗೆ ನೀರು-ಗೊಬ್ಬರ

Team Udayavani, Apr 13, 2019, 11:29 AM IST

13-April-8

ಲಿಂಗಸುಗೂರು: ಪಟ್ಟಣದ ಅರಣ್ಯ ಇಲಾಖೆಯ ನರ್ಸರಿಯಲ್ಲಿ ಬೆಳೆಸಿರುವ ಬೇವಿನ ಸಸಿಗಳು. 

ಲಿಂಗಸುಗೂರು: ತಾಲೂಕಿನ ವಿವಿಧೆಡೆ ಸಸಿಗಳನ್ನು ನೆಟ್ಟು ಹಸಿರೀಕರಣ ಮಾಡಲು ಸಾಮಾಜಿಕ ಅರಣ್ಯ ಇಲಾಖೆ ಪಣ ತೊಟ್ಟಿದೆ. ಇದಕ್ಕಾಗಿ ಮುಂಬರುವ ಮುಂಗಾರು ಹಂಗಾಮಿನಲ್ಲಿ ಸುಮಾರು 37 ಸಾವಿರ ವಿವಿಧ ಸಸಿಗಳನ್ನು ನೆಡಲು ಸಿದ್ಧತೆ ನಡೆಸಿದೆ. ವಿವಿಧ ಜಾತಿಗಳ ಸಸಿಗಳನ್ನು ಪೋಷಿಸಿ ಬೆಳೆಸುತ್ತಿದೆ.

ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಬರುವ ಮುಂಗಾರು ಮಳೆ ಆಧರಿಸಿ ಪಟ್ಟಣ, ಗ್ರಾಮ, ಶಾಲೆ, ರಸ್ತೆ ಅಕ್ಕ-ಪಕ್ಕ ಸೇರಿದಂತೆ ಕಾಯ್ದಿಟ್ಟ ಅರಣ್ಯಭೂಮಿಯಲ್ಲಿ ಅರಣ್ಯೀಕರಣಕ್ಕೆ ಹಾಗೂ ಸಾರ್ವಜನಿಕರಿಗೆ ವಿವಿಧ
ಯೋಜನೆಗಳಲ್ಲಿ ಮಾರಾಟಕ್ಕಾಗಿ ಲಿಂಗಸುಗೂರು ಪಟ್ಟಣ, ತಾಲೂಕಿನ ಕರಡಕಲ್‌ ನರ್ಸರಿಗಳಲ್ಲಿ ಬೇವು, ಹುಣಸೆ, ಮಾವು, ನೇರಳೆ, ಮಹಾಗನಿ, ಹೊಂಗೆ, ಇತರೆ ಸೇರಿಒಟ್ಟು 36,800 ಸಸಿಗಳನ್ನು ಬೆಳೆಸಲಾಗುತ್ತಿದೆ. ಜೂನ್‌ನಿಂದ ಯೋಜನೆ ರೂಪಿಸಿಕೊಂಡು ಗಿಡಗಳನ್ನು ನೆಡಲಾಗುತ್ತಿದೆ. ಅರಣ್ಯ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ರೈತರಿಗೆ ರಿಯಾಯಿತಿ ದರದಲ್ಲಿ ಶ್ರೀಗಂಧ, ಹೆಬ್ಬೇವು, ರಕ್ತಚಂದನ, ಪೇರಲ, ನಿಂಬೆ, ಕರಿಬೇವು, ಮಹಾಗನಿ, ಸಾಗುವಾನಿ ಸೇರಿ ಒಟ್ಟು 25,300 ಗಿಡಗಳನ್ನು ಬೆಳೆಸಲಾಗುತ್ತಿದೆ. ಇವುಗಳನ್ನು ಮೇ ಕೊನೆ ಅಥವಾ ಜೂನ್‌ನಲ್ಲಿ ರೈತರಿಗೆ
ವಿತರಿಸಲು ಕ್ರಮ ವಹಿಸಲಾಗುತ್ತದೆ.

ಗಿಡಗಳ ರಕ್ಷಣೆಗೆ ಶ್ರಮ: 2018-19ನೇ ಸಾಲಿನಲ್ಲಿ ಸಾಮಾಜಿಕ ಅರಣ್ಯ ಇಲಾಖೆ ತಾಲೂಕಿನಲ್ಲಿ ಕಳೆದ ವರ್ಷದ ಜೂನ್‌ ತಿಂಗಳಲ್ಲಿ 10,500 ಸಸಿಗಳನ್ನು ನೆಟ್ಟಿದ್ದಾರೆ. ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ 5,600, ಮುದಗಲ್‌ ವ್ಯಾಪ್ತಿಯಲ್ಲಿ 1,600, ಮಸ್ಕಿ ವ್ಯಾಪ್ತಿಯಲ್ಲಿ 900, ಅಮರೇಶ್ವರ ಕ್ರಾಸ್‌ದಿಂದ ಪೈದೊಡ್ಡಿವರೆಗಿನ ಒಟ್ಟು 6 ಕಿ.ಮೀ.ವರೆಗೆ 2,400 ಸಸಿಗಳನ್ನು ನೆಡಲಾಗಿದೆ.
ಹೊಂಗೆ, ಮಾವು, ಮಹಾದಾನಿ, ಜಂಬುನೇರಳೆ, ಹೊನ್ನಿ, ಬಗಂ, ಅರಳಿ, ಬದಾಮಿ ಸೇರಿ ಇನ್ನಿತರ ಜಾತಿ ಗಿಡಗಳನ್ನು ಹಾಕಲಾಗಿದೆ. ಆದರೆ ಮಳೆ ಕೊರತೆಯಿಂದಾಗಿ ಮತ್ತು ಬಿಸಿಲಿನ ಪ್ರಖರತೆಗೆ ಗಿಡಗಳು ಒಣಗುವ ಆತಂಕ
ಎದುರಾಗಿತ್ತು. ಜೊತೆಗೆ ಕೀಟ ಬಾಧೆ ಕೂಡ ಕಾಡಲಾರಂಭಿಸಿವೆ.

ಇದರಿಂದ ಎಚ್ಚೆತ್ತ ಅರಣ್ಯ ಅಧಿಕಾರಿಗಳು ಗಿಡಗಳನ್ನು ಹೇಗಾದರೂ ಸಂರಕ್ಷಣೆ ಮಾಡುವ ಉದ್ದೇಶದಿಂದ ಗಿಡಗಳಿಗೆ ಗೊಬ್ಬರ ಹಾಕಿ, ಟ್ಯಾಂಕರ್‌ ಮೂಲಕ ನೀರುಣಿಸುವ ಕೆಲಸ ಮಾಡುತ್ತಿದ್ದಾರೆ. ಲಿಂಗಸುಗೂರು ಪಟ್ಟಣದ ಪ್ರಮುಖ ರಸ್ತೆ, ಶಾಲಾ-ಕಾಲೇಜು, ವಿವಿಧ ಲೇಔಟ್‌ಗಳಲ್ಲಿ ಮತ್ತು ಮಸ್ಕಿ, ಮುದಗಲ್ಲ ನಗರಗಳಲ್ಲಿ ಸಸಿಗಳನ್ನು ಬೆಳೆಸುವ ಗುರಿ ಹೊಂದಲಾಗಿದೆ. ವಿವಿಧೆಡೆ ಸಸಿ ನೆಡೆಲು ಗುಂಡಿಗಳನ್ನು ತೋಡಲಾಗಿದೆ.

ತಾಲೂಕಿನಲ್ಲಿ ಅರಣ್ಯ ಇಲಾಖೆಯ 12,343 ಹೇೆಕ್ಟೆರ್‌ ಅರಣ್ಯ ಭೂ  ದೇಶವಿದೆ. ಈ ಪೈಕಿ 8,467.18 ಎಕರೆ ಪ್ರದೇಶ ಅರಣ್ಯೀಕರಣಕ್ಕಾಗಿ ಕಾಯ್ದಿರಿಸಲಾಗಿದೆ. 2,154.05 ಎಕರೆ ರಕ್ಷಿತ ಅರಣ್ಯ ಪ್ರದೇಶವಾಗಿದೆ. 19,395.33 ಎಕರೆ ಅವರ್ಗಿಯ ಅರಣ್ಯ ಪ್ರದೇಶವಾಗಿದೆ.

ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ಕೆಲವೆಡೆಗಳಲ್ಲಿ ನೆಡಲಾದ ಸಸಿಗಳಿಗೆ ಟ್ಯಾಂಕರ್‌ ಮೂಲಕ ನೀರು ಹಾಕಲಾಗುತ್ತದೆ. ಬರುವ ಮುಂಗಾರು ಹಂಗಾಮಿನಲ್ಲಿ ಮಳೆ ನಿರೀಕ್ಷೆಯೊಂದಿಗೆ ಅರಣ್ಯೀಕರಣ ಕಾರ್ಯ ಚುರುಕುಗೊಳಿಸಲಾಗುತ್ತಿದೆ.
.ರಾಜೇಶ,ಅಧ್ಯಕ್ಷರು,
ಸಾಮಾಜಿಕ ವಲಯ ಅರಣ್ಯಾಧಿಕಾರಿ

ಶಿವರಾಜ ಕೆಂಬಾವಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.