ಪ್ರಧಾನಿ ಮೋದಿ ಆಡಳಿತದಿಂದ ದೇಶದಲ್ಲಿ ಶೈಕ್ಷಣಿಕ ಕ್ರಾಂತಿ


Team Udayavani, Apr 13, 2019, 2:45 PM IST

gad-1
ಗದಗ: ಸರ್ವ ಶಿಕ್ಷಣ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನಗಳ ಮೂಲಕ ದೇಶದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಕೇಂದ್ರ ಸರಕಾರ ತನ್ನ ಬಜೆಟ್‌ನಲ್ಲಿ 93,848 ಕೋಟಿ ರೂ. ತೆಗೆದಿರಿಸಿದೆ. ಶಿಕ್ಷಣಕ್ಕೆ ಒತ್ತು ನೀಡುವ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಮನವಿ ಮಾಡಿದರು.
ನಗರದ ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯ, ಅಂಜುಮನ್‌ ಪಾಲಿಟೆಕ್ನಿಕ್‌, ಜಗದ್ಗುರು ಪಂಚಾಚಾರ್ಯ ಶಿಕ್ಷಣ
ಮಹಾವಿದ್ಯಾಲಯ, ಪಂಡಿತ ಪುಟ್ಟರಾಜ ಶಿಕ್ಷಣ ಮಹಾವಿದ್ಯಾಲಯ ಮತ್ತಿತರೆ ಕಾಲೇಜುಗಳಿಗೆ ಭೇಟಿ ನೀಡಿ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಅವರ ಪರ ಮತಯಾಚಿಸಿದರು.
ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಕಳೆದ ಐದು ವರ್ಷಗಳಲ್ಲಿ 7 ಐಐಟಿ, 7 ಐಐಎಂ, ಎನ್‌ಐಟಿ ಹಾಗೂ 14 ಐಐಐಟಿ, 106 ಕೇಂದ್ರೀಯ ವಿದ್ಯಾಲಯಗಳನ್ನು ಹೊಸದಾಗಿ ಪ್ರಾರಂಭಿಸಿದೆ. ವಿಶೇಷವಾಗಿ ತಾಂತ್ರಿಕ ಶಿಕ್ಷಣ ಮತ್ತು ವ್ಯವಹಾರ ಅಧ್ಯಯನ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದು, ದೇಶದ ಶೈಕ್ಷಣಿಕ ಕ್ಷೇತ್ರವನ್ನು ಉನ್ನತೀಕರಿಸಿದ ಕೀರ್ತಿ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಶಹರ ಘಟಕದ ಅಧ್ಯಕ್ಷ ಜಗನ್ನಾಥಸಾ ಭಾಂಡಗೆ, ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ರೀಕಾಂತ ಖಟವಟೆ, ಎಂ.ಎಂ. ಹಿರೇಮಠ ಇದ್ದರು.
ಇಟಲಿ ಹುಡುಗ ಬೇಡ: ಗದಗ ತಾಲೂಕಿನ ನೀಲಗುಂದ, ಚಿಂಚಲಿ, ಕಲ್ಲೂರ ಮತ್ತು ಮುಳಗುಂದ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಯುವ ಮುಖಂಡ ಅನಿಲ ಮೆಣಸಿನಕಾಯಿ ಚುನಾವಣಾ ಪ್ರಚಾರ ನಡೆಸಿದರು. ಬಳಿಕ ಮಾತನಾಡಿದ ಅವರು, ಈ ಹಿಂದೆ ಯುಪಿಎ ಆಡಳಿತದ 10 ವರ್ಷಗಳ ಕಾಲ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಮೋದಿ ನೇತೃತ್ವದ ಎನ್‌ಡಿಎ ಸರಕಾರ ಮಾಡಿರುವ ಅಭಿವೃದ್ಧಿ ಮತ್ತು ಸುಧಾರಣೆ ಕ್ರಮಗಳಿಂದ ಭಾರತ ಪ್ರಗತಿಯತ್ತ ಸಾಗುತ್ತಿದೆ. ಆದರೆ, ಅಧಿಕಾರವಿಲ್ಲದೇ, ವಿಲವಿಲನೇ ಒದ್ದಾಡುತ್ತಿರುವ ವಿಪಕ್ಷಗಳು ಕೇವಲ ಮೋದಿಯನ್ನು ದೂರವಿಡಲು ಮಹಾಮೈತ್ರಿ ಮಾಡಿಕೊಂಡಿವೆ. ವಿರೋಧಿ  ಪಕ್ಷಗಳಿಗೆ ದೇಶದ ಅಭಿವೃದ್ಧಿ ಕುರಿತು ಕಿಂಚಿತ್ತೂ ಕಾಳಜಿಯಿಲ್ಲ. ತಮ್ಮ ಅಕ್ರಮ ಸಂಪದಾನೆಗೆ ಅನುವಾಗಲೆಂದು ಇಟಲಿ ಹುಡುಗ ರಾಹುಲ್‌ ಗಾಂಧಿಯನ್ನು ಪ್ರಧಾನಿಯನ್ನಾಗಿಸುವ ಕನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಎರಡು ಅವಧಿಗೆ ಹಾವೇರಿ ಕ್ಷೇತ್ರವನ್ನು ಪ್ರತಿನಿಧಿರುವ ಶಿವಕುಮಾರ ಉದಾಸಿ, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಮೋದಿ ಅವರು ಐದು ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಆಡಳಿತ ನಡೆಸಿದ್ದಾರೆ. ಮತ್ತೂಮ್ಮೆ ಬಿಜೆಪಿಗೆ ಮತ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಪಕ್ಷದ ಪ್ರಮುಖರಾದ ರಾಜು ಕುರಡಗಿ, ಶ್ರೀಕಾಂತ ಖಟವಟೆ, ಅಶೋಕ ಸಂಕಣ್ಣವರ, ಸಿದ್ದು ಪಲ್ಲೇದ, ಭದ್ರೇಶ ಕೂಸಲಾಪೂರ, ಮಹಾಂತೇಶ ಬೆನಕಣ್ಣವರ, ಉಮೇಶ ನೀಲಗುಂದ, ರವಿ ವಗ್ಗನವರ, ಈರಪ್ಪಾ ಶಿಗ್ಗಾಂವಿ, ರಾಜು ಕುಲಕರ್ಣಿ, ಬಸನಗೌಡ, ಬೂದಪ್ಪ ಹಳ್ಳಿ, ಬಸವಣ್ಣೆಯ್ಯ ಹಿರೇಮಠ, ವೈ.ಟಿ.ಅಟ್ನೂರು, ಪ್ರಕಾಶ ಕುಲಕರ್ಣಿ, ಪ್ರಕಾಶ ನೀಲಗುಂದ ಇದ್ದರು.
ರೇವಣ್ಣ ರಾಜಕೀಯ ನಿವೃತ್ತಿ ಖಚಿತ
ಮೋದಿ ಅವರು ಮತ್ತೆ ಅಧಿಕಾರಕ್ಕೆ ಬಂದರೆ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದಾರೆ. ಮೋದಿ ಅವರ ಸಾಧನೆಗಳು ಇಡೀ ದೇಶಕ್ಕೆ ಗೊತ್ತಿದೆ. ಕಿಸಾನ್‌ ಸಮ್ಮಾನ ಯೋಜನೆಯಡಿ ಈಗಾಗಲೇ ಮೊದಲ ಕಂತಿನ 2 ಸಾವಿರ ರೂ. ರೈತರ ಖಾತೆಗೆ ಜಮಾ ಆಗಿದೆ. ಮೋದಿ ಅವರ ಅಭಿವೃದ್ಧಿ ಕಾರ್ಯಗಳಿಂದಾಗಿ ದೇಶದ ಪ್ರತಿಯೊಬ್ಬರೂ ಬಿಜೆಪಿಗೆ ಮತ ನೀಡಲಿದ್ದು, ಮತ್ತೆ ಮೋದಿ ಪ್ರಧಾನಿಯಾಗುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ. ಹೀಗಾಗಿ ತಕ್ಷಣದಿಂದಲೇ ಎಚ್‌.ಡಿ.ರೇವಣ್ಣ ರಾಜಕೀಯ ನಿವೃತ್ತಿಗೆ ಸಿದ್ಧತೆ ಮಾಡಿಕೊಳ್ಳಲಿ.
ಅನಿಲ ಮೆಣಸಿನಕಾಯಿ, ಬಿಜೆಪಿ ಮುಖಂಡ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.