ಸಾಮರಸ್ಯದಿಂದ ಆರೋಗ್ಯಕರ ಸಮಾಜ

ಧಾರ್ಮಿಕ ನಂಬಿಕೆ ಮೇಲೆ ನಿಂತಿದೆ ಭಾರತ ಪಟ್ಟಭದ್ರ ಹಿತಾಸಕ್ತಿಗಳಿಂದ ಸಮಾಜ ಹಾಳು

Team Udayavani, Apr 13, 2019, 5:32 PM IST

Udayavani Kannada Newspaper

ಯಾದಗಿರಿ: ಸಾಮರಸ್ಯದ ಜೀವನದಿಂದ ಆರೋಗ್ಯಕರ ಸಮಾಜ ನಿರ್ಮಾಣ
ಸಾಧ್ಯವಾಗುತ್ತದೆ ಎಂದು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.

ತಾಲೂಕಿನ ವಡ್ನಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹೆಡಗಿಮದ್ರಾ ಸಂಸ್ಥಾನ
ಮಠದ ಶಾಖಾಮಠವಾದ ಸಿದ್ದಲಿಂಗೇಶ್ವರರ ಪ್ರಥಮ ಜಾತ್ರಾ ಮಹೋತ್ಸವ ಧರ್ಮಸಭೆ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಭಾರತ ದೇಶ ಧಾರ್ಮಿಕ ನಂಬಿಕೆ ಮೇಲೆ ನಿಂತಿದೆ. ಆದರೆ ಕೆಲ ಪಟ್ಟಭದ್ರ ಹಿತಾಶಕ್ತಿಗಳು ಸಮಾಜ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ಜನರು ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವ ಮೂಲಕ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ
ಯತ್ನಿಸಬೇಕು ಎಂದು ಹೇಳಿದರು.

ಮಠಮಾನ್ಯಗಳು ಅನಾದಿ ಕಾಲದಿಂದ ನಿಸ್ವಾರ್ಥದಿಂದ ತ್ರಿವಿಧ ದಾಸೋಹಗಳ ಮೂಲಕ ದೇಶದ ಪ್ರಗತಿಗೆ ಪೂರಕವಾಗಿ ಕೆಲಸ ಮಾಡಿಕೊಂಡು ಸಾಗುತ್ತಿವೆ. ಮಹಾತ್ಮರು ಲೋಕಕಲ್ಯಾಣಕ್ಕಾಗಿ ಮಾಡಿಕೊಂಡ ಸಂಕಲ್ಪಗಳಿಗೆ ಅನೇಕ ತೊಂದರೆಗಳು ಎದುರಾದರೂ ಅದು ಕೊನೆಗೆ ದೂರವಾಗಿ ಇಷ್ಟಾರ್ಥ ಈಡೇರುತ್ತದೆ. ಆ ಸಂಕಲ್ಪದಲ್ಲಿ ಮಹಾಶಕ್ತಿ ಇರುತ್ತದೆ. ಅದಕ್ಕೆ ಸಾಕ್ಷಿಯಾಗಿ ಲಿಂ. ಸಿದ್ದಲಿಂಗೇಶ್ವರರ ಸಂಕಲ್ಪ ಭಕ್ತಿ ಸಂಭ್ರದಿಂದ ಕಾಣುತ್ತಿದ್ದೇವೆ ಎಂದು ಹೇಳಿದರು.

ಮಹಾತ್ಮರ ಸ್ವಭಾವ ಸಮಯ ಬಂದಾಗ ವಜ್ರಕ್ಕಿಂತ ಕಠಿಣವಾಗುತ್ತದೆ.
ಕೆಲ ಸಂದರ್ಭದಲ್ಲಿ ಹೂವಿಗಿಂತ ಮೃದು ಸ್ವಭಾವ ಅವರಲ್ಲಿ ಕಾಣುತ್ತೇವೆ. ಎಲ್ಲರು ಧಾರ್ಮಿಕ ಪರಂಪರೆ ಗೌರವಿಸಿ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ತಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು.

ತಮ್ಮಲ್ಲರ ಆಶಯದಂತೆ ಶ್ರೀಮಠಕ್ಕೆ ಉತ್ಸಾಹಿ ಯುವ ಸ್ವಾಮೀಜಿಗಳಾದ
ಹೆಡಗಿಮದ್ರಾದ ಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯರು ನೇತೃತ್ವ ವಹಿಸಿಕೊಂಡಿದ್ದಾರೆ. ಅವರು ಕಡಿಮೆ ಸಮಯದಲ್ಲಿ ಸಮಾಜ ಮೆಚುÌವಂತಹ ಕೆಲಸ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಕೈಗೊಳ್ಳುವ ಧಾರ್ಮಿಕ ಕಾರ್ಯಕ್ರಮಗಳಿಗೆ ಅಗತ್ಯ ಸಹಕಾರ ನೀಡಿದಲ್ಲಿ ಇದೊಂದು ಪ್ರಸಿದ್ಧ ಕ್ಷೇತ್ರವಾಗಿ ಬದಲಾಗುತ್ತದೆ ಎಂದು ಹೇಳಿದರು.

ಸಮ್ಮುಖ ವಹಿಸಿದ್ದ ಪಾಳದ ಡಾ| ಗುರುಮೂರ್ತಿ ಶಿವಾಚಾರ್ಯರು
ಹಾಗೂ ದೇವಾಪುರದ ಶಿವಮೂರ್ತಿ ಶಿವಾಚಾರ್ಯರು ಮಾತನಾಡಿ, ಈ
ನಾಡಿನಲ್ಲಿ ಅನೇಕ ಶರಣರು ತಮ್ಮ ಆಧ್ಯಾತ್ಮಿಕ ತಪಸ್ಸಿನಿಂದ ಕಾಲಕಾಲಕ್ಕೆ ಪವಾಡ ಮಾಡುವ ಮೂಲಕ ಭಕ್ತರ ಸಂಕಷ್ಟಗಳನ್ನು ದೂರಮಾಡಿ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಗ್ರಾಮೀಣ ಭಾಗದಲ್ಲಿರುವ ಮಠಮಾನ್ಯಗಳಿಗೆ ಅಲ್ಲಿನ ಭಕ್ತರೆ ಆಸ್ತಿಯಾಗಿದ್ದಾರೆ. ಗುರುವಿನ ಮಾರ್ಗದರ್ಶನದಲ್ಲಿ ಆದರ್ಶ ಬದುಕು ಸಾಗಿಸಬೇಕು ಎಂದು ಹೇಳಿದರು.

ನೇತೃತ್ವ ವಹಿಸಿದ್ದ ವಡ್ನಳ್ಳಿ, ಹೆಡಗಿಮದ್ರಾ ಮಠಗಳ ಪೀಠಾಧಿ ಪತಿ
ಶಾಂತತಮಲ್ಲಿಕಾರ್ಜುನ ಪಂಡಿತರಾಧ್ಯ ಶಿವಾಚಾರ್ಯರು ಮಾತನಾಡಿ, ಈಗ
ಕ್ಷೇತ್ರದಲ್ಲಿ ಬರದ ಛಾಯೆ ಆವರಿಸಿದೆ. ಶ್ರೀಶೈಲ ಜಗದ್ಗುರುಗಳ ಆಗಮನ ಹಾಗೂ
ಆಶೀರ್ವಾದಿಂದ ಅದು ದೂರವಾಗಿ ರೈತರ ಮುಖದಲ್ಲಿ ಸಂತಸ ಮೂಡಲಿ ಎಂದು ಹೇಳಿದರು.

ಆಲಮೇಲದ ಚಂದ್ರಶೇಖರ ಶಿವಾಚಾರ್ಯರು, ಶಾಂತಯ್ಯ ಸ್ವಾಮಿ
ವಡ್ನಳ್ಳಿ, ಬಸಯ್ಯ ಸ್ವಾಮಿ ಬೊಮ್ಮಶೆಟ್ಟಹಳ್ಳಿ, ಮಹಾಂತಯ್ಯ ಸ್ವಾಮಿ ಹೆಡಗಿಮದ್ರಾ, ರಾಮರಡ್ಡಿಗೌಡ ಕ್ಯಾಸಪನಳ್ಳಿ, ಕಿಶನರಾವ ಹೆಡಗಿಮದ್ರಾ, ವಿನಾಯಕರಡ್ಡಿ ಇದ್ದರು. ಮಡಿವಾಳಯ್ಯ ಶಾಸ್ತ್ರೀಗಳು ಜೇರಟಗಿ ಸ್ವಾಗತಿಸಿದರು. ಇದಕ್ಕೂ ಮೊದಲು ಶ್ರೀಶೈಲ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಅದ್ಧೂರಿಯಾಗಿ ನಡೆಯಿತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.