ಕರಿಮೆಣಸು ಸೊರಗದಂತೆ ತಡೆಯಿರಿ

ಮಳೆಗಾಲದ ಆರಂಭದಲ್ಲೇ ಸುರಕ್ಷಾ ಕ್ರಮ ಅನುಸರಿಸಿ

Team Udayavani, Apr 14, 2019, 6:00 AM IST

j-23

ಮಲೆನಾಡು ಪ್ರದೇಶದಲ್ಲಿ ಮಿಶ್ರ ಬೆಳೆಯಾಗಿ ಕರಿಮೆಣಸು ಕೂಡ ಬೆಳೆಗಾರರ ತೋಟದ ಮಧ್ಯೆ ವಿಸ್ತರಣೆಯನ್ನು ಕಂಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ರೋಗ ಸೇರಿದಂತೆ ವಿವಿಧ ಕಾರಣಗಳಿಂದ ಕರಿಮೆಣಸು ಬಳ್ಳಿಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಳೆಗಾಲದ ಆರಂಭದಲ್ಲಿ ಒಂದಷ್ಟು ಸುರಕ್ಷ ಕ್ರಮಗಳನ್ನು ಕೈಗೊಂಡರಷ್ಟೇ ಕರಿಮೆಣಸು ಕೈಹಿಡಿಯುತ್ತದೆ.

ಕರಿಮೆಣಸಿನಂತಹ ವಾಣಿಜ್ಯ ಬೆಳೆಯಲ್ಲಿ ಒಂದು ವರ್ಷ ಕಡಿಮೆಯಾದರೂ ಮತ್ತೂಂದು ವರ್ಷ ಇಳುವರಿ ಸಿಗುತ್ತದೆ. ಇದರ ನಡುವೆ ಫಸಲು ಬರುವ ಬಳ್ಳಿಗಳು ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತಿರುವುದು ಕೆಲವು ತೋಟಗಳಲ್ಲಿ ಕಂಡು ಬರುತ್ತಿವೆ. ಇನ್ನು ಕೆಲವೆಡೆ ಬಳ್ಳಿ ಒಣಗಿ ಫಸಲು ಉದುರುತ್ತಿದೆ. ಕರಿಮೆಣಸಿಗೆ ತಗುಲುವ ಸೊರಗು ರೋಗ ಇಳುವರಿ ಅಧಿಕ ಕಂಡುಬಂದ ಸಮಯದಲ್ಲಿ ಈ ಸೊರಗು ರೋಗ ಬೆಳೆಗಾರರನ್ನು ಕಾಡುತ್ತಿದೆ.

ಶೀಘ್ರ ಹರಡುವ ರೋಗ
ಕೇರಳ ರಾಜ್ಯದ ವಯನಾಡು ಭಾಗದಲ್ಲಿ 1920ರ ಅವಧಿಯಲ್ಲಿ ಕಾಣಿಸಿಕೊಂಡ ಈ ರೋಗ 1990ರ ಕಾಲದಲ್ಲಿ ಕರ್ನಾಟಕ ರಾಜ್ಯದಲ್ಲೂ ಕಾಣಿಸಿಕೊಂಡಿತ್ತು. ಆ ಬಳಿಕ ಇಲ್ಲಿ ತೀವ್ರವಾಗಿ ಹರಡಿದ್ದರೂ, ಇಲ್ಲಿಯವರೆಗೂ ಇದನ್ನು ಸಮರ್ಪಕವಾಗಿ ತಡೆಗಟ್ಟಲು ಸಾಧ್ಯವಾಗಿಲ್ಲ. ಹಾಗಾಗಿ ಬೆಳೆಗಾರರನ್ನು ಈ ರೋಗ ನಿರಂತರವಾಗಿ ಕಾಡುವುದು, ನಷ್ಟ ಅನುಭವಿಸುವುದು ನಿರಂತರವಾಗಿದೆ. ಈ ರೋಗ ಶೀಘ್ರವಾಗಿ ಹರಡುತ್ತದೆ. ಬಳ್ಳಿಯನ್ನು ನೆಟ್ಟು ಗೊಬ್ಬರ ಹಾಕಿ ಫಸಲು ಬರುವ ವೇಳೆಗೆ ಅಥವಾ ಫಸಲು ಬಂದ ಬಳಿಕ ರೋಗಕ್ಕೆ ತುತ್ತಾಗಿ ನಾಶವಾಗಿಬಿಡುತ್ತದೆ.

ರೋಗ ಗುರುತಿಸಬೇಕು
·  ಕರಿಮೆಣಸು ಬಳ್ಳಿಗೆ ಸೊರಗು ರೋಗ ಬಂದರೆ ಬಳ್ಳಿಗಳು ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತವೆ.
·  ಬಳ್ಳಿ ಒಣಗಿ ಫಸಲು ಉದುರುತ್ತದೆ.
·  ಬಳ್ಳಿಯ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಬಳ್ಳಿ ಬೋರಲಾಗಿ ಸತ್ತು ಹೋಗುತ್ತದೆ.
·  ಮರವೊಂದರ ಬುಡಕ್ಕೆ ಬಳ್ಳಿನೆಟ್ಟು ಗೊಬ್ಬರ ಹಾಕಿದರೂ ಪ್ರಯೋಜನವಾಗುವುದಿಲ್ಲ.
ಹೀಗೆ ಹರಡುತ್ತದೆ
·  ಈ ರೋಗ ಪೈಟೋಫೋರಾ ಕ್ಯಾಪ್ಸಿಸಿ ಎಂಬ ಶಿಲೀಂಧ್ರದಿಂದ ಬರುತ್ತದೆ. ಈ ಶಿಲೀಂಧ್ರ ಮೊದಲು ಬಳ್ಳಿಯ ಬೇರಿಗೆ ಆಕ್ರಮಣ ಮಾಡುತ್ತದೆ. ಇದರಿಂದ ನೀರು, ಆಹಾರಗಳ ಚಲನೆಗೆ ಅಡ್ಡಿಯಾಗಿ ಬೇರು ಸಾಯುತ್ತದೆ. ಅನಂತರ ಬಳ್ಳಿ, ಎಲೆಯನ್ನು ಆಕ್ರಮಿಸುತ್ತದೆ. ಮಳೆಗಾಲದಲ್ಲಿ ಮಳೆ ಹನಿ ಬಿದ್ದು ಚಿಮ್ಮುವಾಗ ಬಳ್ಳಿ ಹಾಗೂ ಎಲೆಗಳಲ್ಲಿರುವ ಶಿಲೀಂಧ್ರದ ಬೀಜಾಣುಗಳು ಸುಲಭವಾಗಿ ಒಂದು ಗಿಡದಿಂದ ಮತ್ತೂಂದು ಗಿಡಕ್ಕೆ ಹರಡುತ್ತದೆ. ಮೆಲೋಯೆಯೋಗೈನ್‌ ಇಂಕಾಗ್ನಿಟ ಜಂತು ಹುಳದಿಂದಲೂ ಸೊರಗು ರೋಗ ಹರಡುತ್ತದೆ.
·  ಈ ಕುರಿತ ಸಂಶೋಧನೆಯ ಪ್ರಕಾರ ರೋಗವನ್ನು ಸಂಪೂರ್ಣ ತಡೆಗಟ್ಟಲು ಸಾಧ್ಯವಿಲ್ಲವಾದರೂ ಕೆಲವು ಕ್ರಮಗಳನ್ನು ಅನುಸರಿಸುವುದರಿಂದ ರೋಗವನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು ಎಂಬುದನ್ನು ತೋರಿಸಿಕೊಟ್ಟಿದೆ.

ತಡೆಗಟ್ಟುವ ವಿಧಾನ
·  ತೋಟದೊಳಗೆ ಮಣ್ಣಿನ ತೇವಾಂಶ ಕಡಿಮೆಗೊಳಿಸಿಬೇಕು
·  ಕೊಳೆತ ಎಳೆ, ಹುಲ್ಲಿನ ಕಡ್ಡಿಯ ಪದರವಿರುವಂತೆ ಮಾಡಬೇಕು
·  ಬಳ್ಳಿಯ ಬುಡದಿಂದ ಚಿಗುರಿ ನೆಲದಲ್ಲಿ ಹರಡುವ ಮರಿ ಬಳ್ಳಿಗಳನ್ನು ಕತ್ತರಿಸಿ ಅಥವಾ ಮೇಲೆ ಹಬ್ಬುವಂತೆ ಮಾಡುವುದರಿಂದ ಬಳ್ಳಿಯಿಂದ ಬಳ್ಳಿಗೆ ಹರಡುವ ರೋಗವನ್ನು ತಡೆಗಟ್ಟಬಹುದು.
·  ತೋಟದಲ್ಲಿ ಬಿಸಿಲು ಹಾಯಲು ಸೂಕ್ತವಾಗುವಂತೆ ಮರದ ನೆರಳನ್ನು ತೆಗೆಯಬೇಕು.
·  ರೋಗರಹಿತ ಪಾತಿಯಿಂದಲೇ ಆಯ್ದ ಆರೋಗ್ಯವಂತ ಬಳ್ಳಿಯ ತುಂಡುಗಳನ್ನು ಸಸ್ಯಾಭಿವೃದ್ಧಿಗೆ ಉಪಯೋಗಿಸಬೇಕು
·  ತೋಟದಲ್ಲಿ ರೋಗವಿದೆ ಎಂದಾದಲ್ಲಿ ನೆಡುವ ಜಾಗವನ್ನು ಮೆಟಲಕ್ಸಿನ್‌ ಶಿಲೀಂಧ್ರ ನಾಶಕದ ಶೇ. 0.3 ದ್ರಾವಣದಿಂದ ತೋಯಿಸಬೇಕು.
·  ಮಳೆಗಾಲ ಆರಂಭವಾಗುವ ಮುನ್ನ ಶೇ. ಒಂದರ ಬೋಡೋì ಮಿಶ್ರಣವನ್ನು ಬಳ್ಳಿಗೆ ಮೊದಲು ಸಿಂಪಡಿಸಬೇಕು.

ಔಷಧದಿಂದ ರಕ್ಷಣೆ
ಅಡಿಕೆ ಬೆಳೆಗಾರರು ಕೊಳೆರೋಗಕ್ಕೆ ಔಷಧ ಸಿಂಪಡಣೆ ಮಾಡುವ ಸಮಯದಲ್ಲಿ ಮಳೆಗಾಲದ ಆರಂಭದಲ್ಲಿ ಬೋಡೋì ದ್ರಾವಣವನ್ನು ಸಿಂಪಡಿಸಬೇಕು. ಟ್ರೈಕೋಡರ್ಮ್ ಔಷಧವನ್ನು ಕರಿಮೆಣಸು ಬಳ್ಳಿಯ ಪ್ರತಿ ಬುಡಕ್ಕೆ 50 ಗ್ರಾಂ ಸ್ವಲ್ಪ ಹಳೆಯದಾದ ಪುಡಿ ಪುಡಿ ಹಟ್ಟಿಗೊಬ್ಬರ ಅಥವಾ ಬೇವಿನ ಹಿಂಡಿ ಜತೆ ಬೆರೆಸಿ ಹಾಕಬೇಕು. ಇವನ್ನು ಮಿಶ್ರಣ ಮಾಡಿ 5 ದಿನಗಳ ಕಾಲ ಇಟ್ಟು ಮತ್ತೆ ಹಾಕಿದರೆ ಉತ್ತಮ ಎನ್ನುವುದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿರ್ದೇಶನ.

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.