ಜಾಗತಿಕವಾಗಿ ಹಿಂದುಳಿದಿವೆ ನಮ್ಮ ವಿವಿಗಳು

ದಾವಿವಿ ವಿಶ್ರಾಂತ ಕುಲಪತಿ ಡಾ| ಎಸ್‌. ಇಂದುಮತಿ ಕಳವಳಪದವಿ ದಿನ ಕಾರ್ಯಕ್ರಮ

Team Udayavani, Apr 14, 2019, 12:17 PM IST

14-April-10

ದಾವಣಗೆರೆ: ಬಾಪೂಜಿ ಬಿ ಸ್ಕೂಲ್‌ನ ಆವರಣದಲ್ಲಿ ಶನಿವಾರ ಪದವಿ ದಿನದ ಸಮಾರಂಭದಲ್ಲಿ ಅತಿಥಿಗಳೊಂದಿಗೆ ಪದವೀಧರರು.

ದಾವಣಗೆರೆ: ನಮ್ಮ ವಿಶ್ವವಿದ್ಯಾನಿಲಯಗಳು ಜಾಗತಿಕ ವಿಶ್ವವಿದ್ಯಾನಿಲಯದ ಮಟ್ಟಕ್ಕೆ ಬರಲು ಸಾಧ್ಯವಾಗದೇ, ಕಾರ್ಯ ನಿರ್ವಹಣೆಯಲ್ಲಿ 70
ವರ್ಷಗಳಷ್ಟು ಹಿಂದುಳಿದಿವೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ| ಎಸ್‌. ಇಂದುಮತಿ ಕಳವಳ ವ್ಯಕ್ತಪಡಿಸಿದರು.

ನಗರದ ಎಸ್‌.ಎಸ್‌.ಬಡಾವಣೆಯ ಬಾಪೂಜಿ ಬಿ ಸ್ಕೂಲ್‌ನ ಸಭಾಂಗಣದಲ್ಲಿ ಶನಿವಾರ ಬಾಪೂಜಿ ಇನ್ಸ್ಟಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಆ್ಯಂಡ್‌
ಟೆಕ್ನಾಲಜಿ ಮತ್ತು ಬಾಪೂಜಿ ಅಕಾಡೆಮಿ ಆಫ್‌ ಮ್ಯಾನೇಜ್‌ಮೆಂಟ್‌ ಆ್ಯಂಡ್‌ ರಿಸರ್ಚ್‌ ವಿಭಾಗ ಹಮ್ಮಿಕೊಂಡಿದ್ದ ಪದವಿ ದಿನ ಕಾರ್ಯಕ್ರಮ ಉದ್ಘಾಟಿಸಿ
ಮಾತನಾಡಿದರು. ನಾವು ವಿಶ್ವವಿದ್ಯಾನಿಲಯದ ಕಾರ್ಯನಿರ್ವಹಣೆಯಲ್ಲಿ 70 ವರ್ಷಗಳಷ್ಟು ಹಿಂದೆ ಇದ್ದೇವೆ. ಪಠ್ಯ ಸಿದ್ಧತೆ, ಸೌಲಭ್ಯಗಳ ವಿಷಯಗಳಲ್ಲಿ
ಹಿಂದೆ ಇದ್ದೇವೆ. ಬೋಧಕರಿಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಅವರಿಂದ ಉತ್ತಮ ಸಾಮರ್ಥ್ಯ ಹೊರ ತರುವಲ್ಲಿ ನಾವು ಹಿಂದೆ
ಬಿದ್ದಿದ್ದೇವೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಬದಲಾವಣೆ ಅತ್ಯಂತ ತೀವ್ರವಾಗಿದೆ. ಈ ಹಿಂದೆ 25 ವರ್ಷಗಳಿಗೆ ಒಂದು ಪೀಳಿಗೆ ಬದಲಾಯಿತು ಎನ್ನಲಾಗುತ್ತಿತ್ತು. ಈಗ
ಪ್ರತಿ ವರ್ಷ ಹೊಸ ಪೀಳಿಗೆಯಷ್ಟು ಬದಲಾವಣೆ ಆಗುತ್ತಿದೆ. ಹಾಗಾಗಿ ನಮ್ಮ ಗುರಿಯ ಜೊತೆಗೆ ದಾರಿಯೂ ಉತ್ತಮವಾಗಿರಬೇಕು. ಜೀವನ ಶೈಲಿ
ಸುಯೋಜನೆಯಿಂದ ಕೂಡಿದ್ದರೆ ನಮ್ಮ ಗುರಿ ತಲುಪುವುದು ಸುಲಭವಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಯೋರ್ವ ಪ್ರತಿಭಾವಂತನಾಗಿದ್ದರಷ್ಟೇ ಸಾಲದು, ಒಳ್ಳೆಯವನಾಗಿಯೂ ಇರಬೇಕು. ವಿದ್ಯಾರ್ಥಿ ಒಳ್ಳೆಯವನಾಗಿದ್ದರೆ ಉಳಿದ ಎಲ್ಲ ಗುಣಗಳನ್ನು ಪಡೆಯಬಹುದು. ಪ್ರತಿಯೊಬ್ಬರು ಉನ್ನತ ಹುದ್ದೆ ತಲುಪಲು ಸಾಧ್ಯವಾಗದೇ ಇರಬಹುದು. ಆದರೆ, ಸಮಾಜಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬಹುದು ಎಂದರು.

ಅಮೆರಿಕದಲ್ಲಿ ನಡೆಸಲಾದ ಅಧ್ಯಯನದ ಪ್ರಕಾರ, ಎಲ್ಲಿ ವಿಶ್ವವಿದ್ಯಾನಿಲಯಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಾಗಿರುತ್ತಾರೋ ಆ ಪ್ರಾಂತ್ಯ ಅತಿ ಹೆಚ್ಚಿನ ಮನ್ನಣೆ ಪಡೆಯುತ್ತದೆ ಎಂಬುದಿದೆ. ಈ ಹಿನ್ನೆಲೆಯಲ್ಲಿ ಪಂಡಿತ್‌ ಜವಾಹರಲಾಲ್‌ ನೆಹರು ಅವರು ವಿಶ್ವವಿದ್ಯಾನಿಲಯ
ಹೇಗಿರುತ್ತದೋ ದೇಶ ಹಾಗಿರುತ್ತೆ ಎಂದು ಹೇಳಿರುವ ಮಾತನ್ನು ಪ್ರತಿಯೊಬ್ಬರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.

ದಾನಿಗಳಿಂದ ಪಡೆದ ಜಮೀನಿನಲ್ಲಿ ರೂಪುಗೊಂಡ ಏಕೈಕ ವಿವಿ ದಾವಣಗೆರೆ ವಿಶ್ವವಿದ್ಯಾನಿಲಯ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದಾವಣಗೆರೆ
ಇದ್ದಾಗ, ಬಾಪೂಜಿ ವಿದ್ಯಾಸಂಸ್ಥೆ ಪಿ.ಜಿ. ಕೇಂದ್ರ ಸ್ಥಾಪಿಸಲು ನೆರವಾಗಿದ್ದು, ಇಲ್ಲಿಗೆ ವಿಶ್ವವಿದ್ಯಾನಿಲಯ ಬರಲು ನೆರವಾಯಿತು ಎಂದು ಸ್ಮರಿಸಿಕೊಂಡರು.

ತಿರುಚನಾಪಲ್ಲಿಯ ಐಐಎಂ ನಿರ್ದೇಶಕ ಡಾ| ಭೀಮರಾಯ್‌ ಮೇತ್ರಿ ಮಾತನಾಡಿ, ನೀವು ಅಂತರ್ಜಾಲದ ಯುಗದಲ್ಲಿ ಜನಿಸಿದ್ದೀರಿ. ಭಾರತ
ಈಗ ಜಾಗತಿಕವಾಗಿ ಮುಂಚೂಣಿಯಲ್ಲಿರುವ ದೇಶವಾಗಿದೆ. ಹಾಗಾಗಿ ನಿಮ್ಮಲ್ಲಿರುವ ಅತ್ಯುತ್ತಮ ಪ್ರತಿಭೆ ಹೊರ ತರಬೇಕು ಎಂದು ತಿಳಿಸಿದರು.
ಕಾಲೇಜು ಪ್ರಾಂಶುಪಾಲ ಡಾ| ನವೀನ್‌ ನಾಗರಾಜ್‌, ಕಾಲೇಜಿನ ನಿರ್ದೇಶಕ ಡಾ| ಹೆಚ್‌ .ವಿ. ಸ್ವಾಮಿ ತ್ರಿಭುವಾನಂದ ಉಪಸ್ಥಿತರಿದ್ದರು. ಸುಷ್ಮಾ ಪ್ರಾರ್ಥಿಸಿದರು. ಬಿಐಇಟಿ -ಎಂಬಿಎ ಪ್ರೋಗ್ರಾಮ್‌ ಎಚ್‌.ಒ.ಡಿ. ಡಾ| ಎಸ್‌.ಎಚ್‌. ಸುಜಿತ್‌
ಕುಮಾರ್‌ ಸ್ವಾಗತಿಸಿದರು. ಶ್ರೇಯ ಮತ್ತು ಸಹನಾ ನಿರೂಪಿಸಿದರು.

ಅಮೆರಿಕದಲ್ಲಿ ನಡೆಸಲಾದ ಅಧ್ಯಯನದ ಪ್ರಕಾರ, ಎಲ್ಲಿ ವಿಶ್ವವಿದ್ಯಾನಿಲಯಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಾಗಿರುತ್ತಾರೋ ಆ ಪ್ರಾಂತ್ಯ ಅತಿ ಹೆಚ್ಚಿನ ಮನ್ನಣೆ ಪಡೆಯುತ್ತದೆ ಎಂಬುದಿದೆ. ಈ ಹಿನ್ನೆಲೆಯಲ್ಲಿ ಪಂಡಿತ್‌ ಜವಾಹರಲಾಲ್‌ ನೆಹರು ಅವರು ವಿಶ್ವವಿದ್ಯಾನಿಲಯ
ಹೇಗಿರುತ್ತದೋ ದೇಶ ಹಾಗಿರುತ್ತೆ ಎಂದು ಹೇಳಿರುವ ಮಾತನ್ನು ಪ್ರತಿಯೊಬ್ಬರು ನೆನಪಿನಲ್ಲಿಟ್ಟುಕೊಳ್ಳಬೇಕು.
.ಡಾ| ಎಸ್‌. ಇಂದುಮತಿ
ವಿಶ್ರಾಂತ ಕುಲಪತಿ, ದಾವಿವಿ

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.