ನಗರದಲ್ಲಿ ಮಳೆಗಾಲ ಸಿದ್ಧತೆ ಕಾಮಗಾರಿ ಆರಂಭ

ಮನಾಪದಿಂದ ಚರಂಡಿ ಹೂಳೆತ್ತುವ ಕಾಮಗಾರಿ

Team Udayavani, Apr 15, 2019, 6:00 AM IST

1404mlr10

ಮನಾಪದಿಂದ ಜಪ್ಪಿನಮೊಗರು ವ್ಯಾಪ್ತಿಯಲ್ಲಿ ಹೂಳೆತ್ತುವ ಕಾಮಗಾರಿ ನಡೆಯುತ್ತಿದೆ.

ಮಹಾನಗರ: ಕಳೆದ ಮೇ 29ರಂದು ಸುರಿದ ಬಾರಿ ಮಳೆಯಿಂದ ನಗರಾದ್ಯಂತ ಕೃತಕ ನೆರೆಯಿಂದ ಉಂಟಾದ ಅವಾಂತರ ಈ ಬಾರಿ ಮರಕಳಿಸದಂತೆ ತಡೆಯುವ ಉದ್ದೇಶದಿಂದ ಪಾಲಿಕೆ ಕಾಮಗಾರಿಗಳನ್ನು ಆರಂಭಿಸಿದೆ.

ಇದಕ್ಕಾಗಿ ಈಗಾಗಲೇ ಟೆಂಡರ್‌ ವಹಿಸಲಾಗಿದ್ದು, ಕಾಮಗಾರಿ ಆರಂಭ ಗೊಂಡಿದೆ. ಕಳೆದ ಬಾರಿ ಮಳೆಯಿಂದ ಹಾನಿಯುಂಟಾದ ಕಡೆಗಳಿಗೆ ಹೆಚ್ಚಿನ ಪ್ರಾಮುಖ್ಯ ನೀಡಲಾಗಿದ್ದು, ಆ ಭಾಗಗಳಲ್ಲಿ ಮೊದಲಾಗಿ ಚರಂಡಿಯ ಹೂಳೆತ್ತುವ ಕಾಮಗಾರಿ ಸೇರಿದಂತೆ ಇತರ ಕಾಮಗಾರಿಗಳನ್ನು ಮಾಡಲಾಗುತ್ತಿದೆ.

ಮಹಾನಗರ ಪಾಲಿಕೆ ಆಡಳಿತಾವಧಿ ಮುಗಿದಿದ್ದ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ಅಧಿಕಾರಿಗಳೇ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ಅದರಲ್ಲಿ ಬಹುತೇಕ ಅಧಿಕಾರಿಗಳು ಲೋಕಸಭಾ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕಾಗಿದೆ. ಆ ಕಾರಣದಿಂದ ಕಳೆದ ಬಾರಿಯ ಮಳೆಗೆ ನಗರದಲ್ಲಿ ಉಂಟಾದ ಅವಾಂತರಗಳು ಮರುಕಳಿಸುವ ಆತಂಕದಲ್ಲಿ ಜನರಿದ್ದರು. ಸದ್ಯ ಆ ಚಿಂತೆ ದೂರವಾಗಿದ್ದು, ಕಾಮಗಾರಿಗಳು ಆರಂಭವಾಗಿವೆ.

ಪಟ್ಟಿ ಮಾಡಿ ಕಾಮಗಾರಿ
ಕೆಲವು ದಿನಗಳಿಂದ ಮಳೆಗಾಲದ ಮುಂಜಾಗೃತ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಮಗಾರಿಗಳು ನಡೆಯಬೇಕಾದ ಸ್ಥಳವನ್ನು ಮುಂಚಿತ ವಾಗಿ ಗುರುತಿಸ ಲಾಗಿತ್ತು. ಅದರಂತೆ ಅದನ್ನು ಪಟ್ಟಿ ಮಾಡಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.

ಈಗಾಗಲೇ ಬಂಗ್ರ ಕುಳೂರು, ಜೆಪ್ಪು ಸಹಿತ ಇತರ ಭಾಗಗಳಲ್ಲಿ ಹೂಳೆತ್ತುವ ಕಾಮಗಾರಿ ಪ್ರಗತಿಯಲ್ಲಿವೆ.
ಚರಂಡಿ, ರಾಜಕಾಲುವೆಗಳ ಹೂಳೆತ್ತಲು ಪ್ರಾಮುಖ್ಯನಗರದ ಅತ್ತಾವರ, ಕಂಕನಾಡಿ,ಕುದ್ರೋಳಿ, ಬಲ್ಲಾಳ್‌ಬಾಗ್‌, ಜಪ್ಪಿನಮೊಗರು, ಪಂಪ್‌ವೆಲ್‌, ಕೊಟ್ಟಾರಚೌಕಿ, ಕೋಡಿಕಲ್‌, ಮಾಲೆಮಾರ್‌, ಉಜ್ಯೋಡಿ, ಜೆಪ್ಪು ಮಹಾಕಾಳಿ ಪಡು, ಕೊಂಚಾಡಿ, ಪಾಂಡೇಶ್ವರ ಸಹಿತ ಅನೇಕ ಕಡೆ ರಾಜಕಾಲುವೆಗಳಿವೆ. ಇದರ ಜತೆಗೆ ನಗರದಲ್ಲಿ ಹಲವಾರು ದೊಡ್ಡ, ಸಣ್ಣಗಾತ್ರದ ತೋಡುಗಳಿವೆ. ಇವು ಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡಚಣೆಗಳು, ತೋಡುಗಳ ಒತ್ತುವರಿ, ರಸ್ತೆಗಳಲ್ಲಿ ತೆರವುಗೊಳಿಸದೆ ಇರುವ ಮಣ್ಣಿನ ತ್ಯಾಜ್ಯಗಳ ರಾಶಿಗಳನ್ನು ತೆಗೆಯುವ ಕಾಮಗಾರಿ ನಡೆಯುತ್ತಿವೆ.

ರಸ್ತೆಗಳಲ್ಲಿ ಮಳೆ ನೀರು ಹರಿಯದಿರಲಿ ಪ್ರತಿ ಮಳೆಗಾಲದಲ್ಲೂ ಮುಂಜಾಗೃತ ಕಾಮಗಾರಿ ಗಳನ್ನು ಕೈಗೊಂಡರೂ ಜ್ಯೋತಿವೃತ್ತ,ಬಂಟ್‌ಹಾಸ್ಟೇಲ್‌, ಕದ್ರಿ ಕಂಬಳ, ಬಿಜೈ, ಕೆ.ಎಸ್‌.ಆರ್‌.ರಾವ್‌ ರಸ್ತೆ,ಎಂ.ಜಿ. ರಸ್ತೆ ಮುಂತಾದೆಡೆಗಳಲ್ಲಿ ಮಳೆಗಾಲದಲ್ಲಿ ರಸ್ತೆಯೇ ತೋಡು ಆಗಿ ಪರಿವರ್ತನೆಗೊಳ್ಳುತ್ತಿದೆ. ಸಂಚಾರವೂ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

 ಕಾಮಗಾರಿ ಪ್ರಗತಿಯಲ್ಲಿ
ಕಳೆದ ಮಳೆಗಾಲದಲ್ಲಿ ಉಂಟಾದ ಅವಾಂತರಗಳು ಈ ಬಾರಿ ಮರುಕಳಿಸದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಚುನಾವಣೆ ಬಳಿಕ ಕಾಮಗಾರಿಗಳನ್ನು ಸ್ವತಃ ನಾನೇ ಪರಿಶೀಲಿಸುತ್ತೇನೆ.
– ಶಶಿಕಾಂತ್‌ ಸೆಂಥಿಲ್‌,
ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.