ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ: ಮಿಥುನ್‌ ರೈ


Team Udayavani, Apr 15, 2019, 6:33 AM IST

RAI-LOK

ಕಡಬ: ಕಾಂಗ್ರೆಸ್‌ನ ಅಭಿವೃದ್ಧಿಪರ ಹಾಗೂ ಜಾತ್ಯತೀತ ನೆಲೆಗಟ್ಟಿನ ಸಂಸ್ಕಾರ ನಮಗೆ ಬಲುದೊಡ್ಡ ಶಕ್ತಿಯಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಿಥುನ್‌ ರೈ ನುಡಿದರು.

ಅವರು ಕಡಬ ಪೇಟೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನಾನು ಅಪ್ಪಟ ಹಿಂದೂ ಸಂಸ್ಕೃತಿಯಲ್ಲಿ ಬೆಳೆದವನು. ಆದರೆ ಅದು ಬಿಜೆಪಿಯವರ ಕೋಮುವಾದಿ ಹಿಂದುತ್ವವಲ್ಲ. ಜಿಲ್ಲೆಯ ಶಾಂತಿಯನ್ನು ಕಾಪಾಡುವುದರೊಂದಿಗೆ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ. ಬಿಜೆಪಿಯವರು ಹಿಂದುತ್ವವನ್ನು ಮುಂದಿಟ್ಟು ಕೊಂಡು ಜನರ ಮಧ್ಯೆ ಬಿರುಕು ಹುಟ್ಟಿಸಿ ಜಾತಿ ರಾಜಕೀಯ ಮಾಡಿ ಓಟನ್ನು ವಿಭಜಿಸಿ ಗೆಲ್ಲುವ ತಂತ್ರ ಹೆಣೆದಿದ್ದಾರೆ. ಆದರೆ ಅದು ಈ ಬಾರಿ ಫಲ ನೀಡುವುದಿಲ್ಲ ಎಂದರು.

ಬಿಜೆಪಿ ಸೊತ್ತಲ್ಲ
ಕೇಸರಿ ಶಾಲು ಬಿಜೆಪಿಯವರ ಸೊತ್ತಲ್ಲ. ನಾವು ಕೇಸರಿ ಧರಿಸಿದರೆ ಮುಸ್ಲಿಮರಿಗೆ, ಕ್ರೈಸ್ತರಿಗೆ ಹಾಗೂ ಹಿಂದೂ ಸಮುದಾಯಕ್ಕೆ ಸಮಸ್ಯೆ ಇಲ್ಲ. ಆದರೆ ನಮ್ಮ ಹೆಗಲ ಮೇಲೆ ಕೇಸರಿ ಕಂಡರೆ ಬಿಜೆಪಿ ಅಭ್ಯರ್ಥಿ ನಳಿನ್‌ಕುಮಾರ್‌ ಕಟೀಲು ಅವರಿಗೇಕೆ ಉರಿ ಎಂದು ಮಿಥುನ್‌ ರೈ ಪ್ರಶ್ನಿಸಿದರು. ನಾನು ಗೆದ್ದರೆ ಕೋಡಿಂಬಾಳ ರೈಲ್ವೇ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಲಾಗುವುದು. ಕಡಬ ತಾಲೂಕಿನ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ತೀವ್ರವಾಗಿ ಕಾಡುತ್ತಿರುವ ವಿದ್ಯುತ್‌ ಸಮಸ್ಯೆಯನ್ನು ನೀಗಿಸುವುದರೊಂದಿಗೆ ಯುವ ಸಮುದಾಯಕ್ಕೆ ಹೆಚ್ಚಿನ ಉದ್ಯೋಗಾವಕಾಶ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಎಂಎಲ್‌ಸಿ ಹರೀಶ್‌ ಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ಪರಿಷತ್‌ ಸದಸ್ಯ ಎಲ್‌.ಎಸ್‌. ಭೋಜೇ ಗೌಡ, ಕಣ್ಣೂರು ಮಾಜಿ ಸಂಸದ ಅಬ್ದುಲ್ಲಾ ಕುಟ್ಟಿ ಮಾತನಾಡಿ ಮಿಥುನ್‌ ರೈ ಪರ ಮತ ಯಾಚಿಸಿದರು. ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ಮಾಧವ ಗೌಡ ಜಾಕೆ, ಕೆಪಿಸಿಸಿ ಸದಸ್ಯ ಡಾ| ರಘು, ತಾ.ಪಂ. ಸದಸ್ಯ ಫಝಲ್‌ ಕೋಡಿಂಬಾಳ, ಜಿ.ಪಂ. ಮಾಜಿ ಸದಸ್ಯ ಭರತ್‌ ಮುಂಡೋಡಿ, ಕೆ.ಎಸ್‌. ಸಾಹುಲ್‌ ಹಮೀದ್‌ ತಂಙಳ್‌ ಮರ್ದಾಳ, ಡಿಸಿಸಿ ಕಾರ್ಯದರ್ಶಿ ಎಚ್‌.ಕೆ. ಇಲ್ಯಾಸ್‌, ಕಡಬ ಬ್ಲಾಕ್‌ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಅಂಚನ್‌, ತಾ.ಪಂ. ಸದಸ್ಯೆ ಆಶಾ ಲಕ್ಷ್ಮಣ್‌ ಗುಂಡ್ಯ, ಜೆಡಿಎಸ್‌ ಯುವ ಮುಂದಾಳು ಅಕ್ಷಿತ್‌ ಸುವರ್ಣ, ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸುಧೀರ್‌ ದೇವಾಡಿಗ, ಕಾಂಗ್ರೆಸ್‌ ಪ್ರಮುಖರಾದ ರೋಯಿ ಅಬ್ರಹಾಂ, ವಿಜಯಕುಮಾರ್‌ ಸೊರಕೆ, ಸತೀಶ್‌ ಕೆಡೆಂಜಿ, ವಿಜಯಕುಮಾರ್‌ ರೈ ಕರ್ಮಾಯಿ, ಸೈಮನ್‌ ಸಿ.ಜೆ. ಉಪಸ್ಥಿತರಿದ್ದರು. ಕಾಂಗ್ರೆಸ್‌ ಅಲ್ಪಸಂಖ್ಯಾಕ ವಿಭಾಗದ ರಾಜ್ಯ ಸಂಯೋಜಕ ಎ.ಸಿ. ಜಯರಾಜ್‌ ಸ್ವಾಗತಿಸಿ, ಕಡಬ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌ ಪ್ರಸ್ತಾವನೆಗೈದರು. ಕಡಬ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗಣೇಶ್‌ ಗೌಡ ಕೈಕುರೆ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.