ಕುಕ್ಕೆ: ಸರಣಿ ರಜೆಗಳ ಆರಂಭದಲ್ಲೆ ಭಕ್ತ ಜನಸಂದಣಿ, ಟ್ರಾಫಿಕ್‌ ಜಾಮ್‌


Team Udayavani, Apr 15, 2019, 6:48 AM IST

1404SUB1B

ಸುಬ್ರಹ್ಮಣ್ಯ: ಸರಣಿ ರಜೆ ಆರಂಭದ ಹಂತದಲ್ಲೆ ಪುಣ್ಯ ಕ್ಷೇತ್ರಗಳಿಗೆ ಭಕ್ತರು ಭೇಟಿ ನೀಡಲಾರಂಭಿಸಿದ್ದು, ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸಂದರ್ಶನಕ್ಕೆ ಅಪಾರ ಪ್ರಮಾಣದ ಭಕ್ತರು ರವಿವಾರ ಆಗಮಿಸಿದ್ದರು.

ಬ್ಯಾಂಕು ಸಹಿತ ಇತರ ಸಂಸ್ಥೆಗಳಿಗೆ ಶನಿವಾರ ರಜಾ ದಿನವಾಗಿತ್ತು. ರವಿವಾರ ಕೂಡ ವಾರದ ರಜೆ ದಿನವಾಗಿತ್ತು. ಹೀಗಾಗಿ ಭಕ್ತರು ಕ್ಷೇತ್ರದ ಕಡೆಗೆ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಿದ್ದರು. ಶಾಲೆಗಳಿಗೆ ಬೇಸಗೆ ರಜೆ ಆರಂಭಗೊಂಡಿದ್ದು, ನಾಡಿನ ವಿವಿಧೆಡೆಯ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಕುಕ್ಕೆ ಕ್ಷೇತ್ರಕ್ಕೆ ರವಿವಾರ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ತುಲಾಭಾರ, ಆಶ್ಲೇಷಾ ಬಲಿ, ನಾಗಪ್ರತಿಷ್ಠೆ, ಶೇಷ ಸೇವೆ ಸಹಿತ ಪ್ರಮುಖ ಸೇವೆಗಳನ್ನು ಪೂರೈಸಿಕೊಂಡರು.

ಮಹಾಪೂಜೆ, ಕಾರ್ತಿಕ ಪೂಜೆ, ಮಹಾಭಿಷೇಕ ಸೇವೆಗಳು ಅಧಿಕವಾಗಿ ನೆರವೇರಿದೆ. ದರ್ಶನ, ಭೋಜನಕ್ಕೆ ಸರದಿ ಸಾಲಿನಲ್ಲಿ ನಿಂತು ಸಾಗಿದರು. ದೇವಸ್ಥಾನದ ಒಳಾಂಗಣ, ಹೊರಾಂಗಣ, ರಥ ಬೀದಿಗಳಲ್ಲಿ ಭಕ್ತರೇ ಸೇರಿದ್ದರು.

ಶನಿವಾರ ರಾತ್ರಿಯಿಂದಲೆ ಭಕ್ತರು ಕ್ಷೇತ್ರದ ಕಡೆಗೆ ಬರಲಾರಂಭಿಸಿದ್ದರು. ವಾಸ್ತವ್ಯಕ್ಕೆ ಕೊಠಡಿಗಳ ಕೊರತೆ ಕಂಡುಬಂತು. ದೇಗುಲದ ವಸತಿಗೃಹಗಳು ತುಂಬಿದ್ದವು. ಖಾಸಗಿ ವಸತಿ ಗೃಹಗಳೂ ಭರ್ತಿಯಾಗಿದ್ದವು. ಕೆಲವು ಖಾಸಗಿ ವಸತಿ ಗೃಹಗಳು ಅಧಿಕ ಬಾಡಿಗೆ ವಿಧಿಸಿ ಕೊಠಡಿಗಳನ್ನು ನೀಡಿರುವ ಕುರಿತು ದೂರುಗಳು ಕೇಳಿಬಂದವು.

ಭಕ್ತರ ಜತೆ ಅವರನ್ನು ಕರೆದುಕೊಂಡು ಬಂದ ವಾಹನಗಳ ಸಂಖ್ಯೆಯೂ ಅಪರಿಮಿತವಾಗಿತ್ತು. ಅಕ್ಷರಾ ವಸತಿಗೃಹದ ಹಿಂಭಾಗದ ಪಾರ್ಕಿಂಗ್‌ ಸ್ಥಳ ಮತ್ತು ಬಿಲದ್ವಾರದ ಬಳಿ, ಸವಾರಿ ಮಂಟಪದ ಬಳಿಯಲ್ಲಿ ಪಾರ್ಕಿಂಗ್‌ ಸ್ಥಳಗಳು ಸಂಪೂರ್ಣ ವಾಗಿ ವಾಹನಗಳಿಂದ ತುಂಬಿ ಹೋಗಿತ್ತು. ವಾಹನದ ಸಂಖ್ಯೆಯೂ ಅಧಿಕವಾಗಿದ್ದರಿಂದ ಟ್ರಾಫಿಕ್‌ ಸಮಸ್ಯೆ ಕಂಡುಬಂತು.

ನಿಭಾಯಿಸಲು ಸಿದ್ಧತೆ ಮಾಡಿಕೊಳ್ಳಬೇಕಿದೆ
ಸೋಮವಾರದಿಂದ ಮತ್ತೆ ಮುಂದಿನ ವಾರದ ದಿನಗಳಲ್ಲಿ ಚುನಾವಣೆ, ಇತರ ರಜೆಗಳ ದಿನಗಳು ಹೆಚ್ಚಿರುವುದರಿಂದ ಭಕ್ತರು ಈ ವಾರದಲ್ಲಿ ಇನ್ನಷ್ಟು ಸಂಖ್ಯೆಯಲ್ಲಿ ಬರುವ ಸಾಧ್ಯತೆಗಳಿವೆ. ನಿರಂತರ ರಜೆ ಇರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಯಾತ್ರಾರ್ಥಿಗಳು ಆಗಮಿಸುವ ಕಾರಣ ಅವರಿಗೆ ತಂಗಲು ಕೊಠಡಿ, ವಾಹನ ದಟ್ಟಣೆ ಇತ್ಯಾದಿ ಸಮಸ್ಯೆಗಳಾಗುತ್ತಿದ್ದು, ದೇವಸ್ಥಾನದ ಆಡಳಿತ ಮಂಡಳಿ ತಾತ್ಕಾಲಿಕ ವ್ಯವಸ್ಥೆಗಳಿಗೆ ಸಿದ್ಧತೆ ನಡೆಸಿಕೊಳ್ಳುವುದು ಮುಖ್ಯ.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.