ಇಂದು ವಿಷುಕಣಿ ವಿಶೇಷದೊಂದಿಗೆ ಪುತ್ತೂರು ಜಾತ್ರೆ ಉತ್ಸವದ ಸಂಭ್ರಮ


Team Udayavani, Apr 15, 2019, 6:00 AM IST

PTR_JATRE_0033

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ರಥೋತ್ಸವ ಎ. 17ರಂದು ನಡೆಯಲಿದ್ದು, ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ.

ಪುತ್ತೂರು: ಸೌರಮಾನ ಯುಗಾದಿ ತುಳುನಾಡಿನಲ್ಲಿ ಹೊಸ ವರ್ಷವನ್ನು ಆಚರಿಸುವ ದಿನ. ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಜಾತ್ರಾ ಉತ್ಸವದೊಂದಿಗೆ ವಿಷು ಕಣಿ ಸಂಭ್ರಮವೂ ಸೇರಿಕೊಂಡು ಎ. 15ರಂದು ವಿಶೇಷ ಶಿಷ್ಟ ಸಂಪ್ರದಾಯದ ಧಾರ್ಮಿಕ ಆಚರಣೆಗಳು ನಡೆಯಲಿವೆ.

ರವಿವಾರ ವಿಷು ಸಂಕ್ರಮಣದ ದಿನ ರಾತ್ರಿ ದೇವರ ದೈನಂದಿನ ಪೇಟೆ ಸವಾರಿ ಮುಗಿದು, ದೇವಾಲಯದ ಆಡಳಿತದವರು, ಭಕ್ತರು ಸೇರಿ ಕಾಲ ಕಾಲಕ್ಕೆ ಮಳೆ-ಬೆಳೆ ಸಮೃದ್ಧಿಯಾಗಿ ಸುಭಿಕ್ಷೆ ಉಂಟಾಗಲಿ ಎಂದು ದೇಗುಲದ ತಂತ್ರಿಗಳ ಮೂಲಕ ದೇವರ ಸತ್ಯ ಧರ್ಮ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಬಳಿಕ ಫಲಪುಷ್ಪಾದಿ ಸುವಸ್ತುಗಳನ್ನು ದರ್ಪಣ ಸಹಿತ ಗರ್ಭಗುಡಿಯಲ್ಲಿ ಇರಿಸಿ ಬಾಗಿಲು ಮುಚ್ಚಲಾಗುತ್ತದೆ.

ವಿಷು (ಬಿಸು)ವಿನ ದಿನ (ತುಳು ಪಂಚಾಂಗದಲ್ಲಿ ತಿಂಗಳಡಿ ದಿನ) ಪ್ರಾತಃಕಾಲ ಶ್ರೀ ದೇವರ ಗರ್ಭಗುಡಿಯ ಬಾಗಿಲು ತೆರೆದು ದರ್ಪಣ ಬಿಂಬ ದರ್ಶನವಾಗುತ್ತದೆ. ಒಳಾಂಗಣದ ಸಾಂಪ್ರದಾಯಿಕ ಚಪ್ಪರದ ಕಂಬಗಳನ್ನು ತಳಿರು ತೋರಣ ಕಟ್ಟಿ ಸಿಂಗರಿಸಲಾಗುತ್ತದೆ ಮತ್ತು ದೇವರು ಬಂದು ನಿಲ್ಲುವ ಕೊಡಿಮರದ ಬಲ ಭಾಗದಲ್ಲಿ ಚಪ್ಪರಕ್ಕೆ ಮೇಲ್ಕಾಪು ಹಾಸಲಾಗುತ್ತದೆ.

ವಿಶೇಷ ಉತ್ಸವ
ಸೌರ ಯುಗಾದಿ ವಿಷುಕಣಿ ಅಂಗವಾಗಿ ದೇವಾಲಯದ ಒಳಾಂಗಣದಲ್ಲಿ ಬೆಳಗ್ಗೆ ವಿಶೇಷ ಉತ್ಸವ ಬಲಿ, ವಸಂತ ಕಟ್ಟೆಪೂಜೆ ನಡೆಯುತ್ತದೆ. ಸಂಜೆ ತುಳು ಪಂಚಾಂಗ ಸಂಪ್ರದಾಯದಂತೆ ದೇಗುಲದ ಹೊರಾಂಗಣದಲ್ಲಿ “ಬಯ್ಯದ ಬಲಿ’ (ಸಂಜೆಯ ಉತ್ಸವ) ನಡೆದು ಬಳಿಕ ಶ್ರೀ ದೇವರ ಸಾಂಪ್ರದಾಯಿಕ ಚಂದ್ರ ಮಂಡಲ ಉತ್ಸವ (ಬಂಡಿ ಉತ್ಸವ) ನಡೆಯುತ್ತದೆ.

ದೇಗುಲದಲ್ಲಿ ಶತ ಮಾನಗಳ ಹಿಂದೆ ಬಂಡಿಯ ಪೀಠದಲ್ಲಿ ದೇವರ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ಹೊರಾಂಗಣದಲ್ಲಿ ಎಳೆಯಲಾಗುತ್ತಿತ್ತು. ಚಂದ್ರ ಮಂಡಲ ರಥವನ್ನು ನಿರ್ಮಿಸಿದ ಬಳಿಕ ಚಂದ್ರಮಂಡಲ ರಥ ಉತ್ಸವ ನಡೆಯುತ್ತದೆ. ಪುತ್ತೂರು ಸೀಮೆಯ ಜನರು ಇದನ್ನು ಬಂಡಿ ಉತ್ಸವ ಎಂದೂ ಕರೆಯುತ್ತಾರೆ.

ವಿಶೇಷ ಊಟ
ವಿಷುಕಣಿಯ ಅಂಗವಾಗಿ ಮಧ್ಯಾಹ್ನ ದೇವಾಲಯದಲ್ಲಿ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆಯಲ್ಲಿ ವಿಷು ಹಬ್ಬದ ಪ್ರಯುಕ್ತ ವಿಶೇಷ ಊಟ ಇರುತ್ತದೆ. ಮನೆಗಳಲ್ಲಿ ಸೌರಯುಗಾದಿ ಆಚರಣೆ ಇದ್ದರೂ, ಒಬ್ಬ ಸದಸ್ಯನಾದರೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ನಡೆಯುವ ವಿಷು ಊಟದಲ್ಲಿ ಅನ್ನಪ್ರಸಾದವನ್ನು ಸ್ವೀಕರಿಸುವುದು ಅಂದಿನ ವಿಶೇಷ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.