ವಿಶ್ವಕಪ್‌: 15ನೇ ಆಟಗಾರನ ಆಯ್ಕೆಯೇ ಜಟಿಲ

ಇಂದು ಭಾರತ ತಂಡ ಪ್ರಕಟ

Team Udayavani, Apr 15, 2019, 9:19 AM IST

team

ಹೊಸದಿಲ್ಲಿ: ಪ್ರತಿಷ್ಠಿತ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಸೋಮವಾರ ಭಾರತ ತಂಡ ಪ್ರಕಟಗೊಳ್ಳಲಿದೆ. ಮುಂಬಯಿಯಲ್ಲಿ ಸಭೆ ಸೇರಲಿರುವ ಎಂ.ಎಸ್‌.ಕೆ. ಪ್ರಸಾದ್‌ ನೇತೃತ್ವದ ಆಯ್ಕೆ ಸಮಿತಿ ಅಳೆದು ತೂಗಿ 15 ಸದಸ್ಯರ ಸಶಕ್ತ ತಂಡವೊಂದನ್ನು ಕಟ್ಟುವ ಯೋಜನೆಯಲ್ಲಿದೆ.

ಈಗಿನ ಸಾಧ್ಯತೆ ಪ್ರಕಾರ 14 ಮಂದಿ ಆಟಗಾರರು ತನ್ನಿಂತಾನಾಗಿ ಈ ಕೂಟಕ್ಕೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚು. ಕಳೆದ ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿ ಮುಗಿದ ಬಳಿಕ ನಾಯಕ ವಿರಾಟ್‌ ಕೊಹ್ಲಿ ಇಂಥದೊಂದು ಸೂಚನೆ ನೀಡಿದ್ದರು. ಕೇವಲ ಒಂದು ಸ್ಥಾನದ ಆಯ್ಕೆಗೆ ತೀವ್ರ ಪೈಪೋಟಿ ಇದೆ ಎಂದೂ ಹೇಳಿದ್ದರು.

15ನೇ ಆಟಗಾರನ ಸ್ಥಾನವನ್ನು ಯಾವ ವಿಭಾಗಗಕ್ಕೆ ಮೀಸಲಿಡಬೇಕೆಂಬುದೇ ಸದ್ಯದ ಕುತೂಹಲ. ದ್ವಿತೀಯ ವಿಕೆಟ್‌ ಕೀಪರ್‌ ಬೇಕೋ, 4ನೇ ಕ್ರಮಾಂಕದ ಸ್ಪೆಷಲಿಸ್ಟ್‌ ಬ್ಯಾಟ್ಸ್‌ ಮನ್‌ ಬೇಕೋ ಅಥವಾ 4ನೇ ಪೇಸ್‌ ಬೌಲರ್‌ ಅಗತ್ಯವಿದೆಯೇ ಎಂಬುದು ಆಯ್ಕೆಗಾರರನ್ನು ಕಾಡುವ ಪ್ರಶ್ನೆಗಳಾಗಿವೆ.

ಪಂತ್‌, ಕಾರ್ತಿಕ್‌ ಪೈಪೋಟಿ
ದ್ವಿತೀಯ ಕೀಪರ್‌ ಸ್ಥಾನಕ್ಕೆ ಇಬ್ಬರ ಸ್ಪರ್ಧೆ ಇದೆ-ರಿಷಬ್‌ ಪಂತ್‌ ಮತ್ತು ದಿನೇಶ್‌ ಕಾರ್ತಿಕ್‌. ಆದರೆ ಇವರಲ್ಲಿ ಕಾರ್ತಿಕ್‌ ಅವರನ್ನು ಕಳೆದ ಆಸ್ಟ್ರೇಲಿಯ ವಿರುದ್ಧದ ಸರಣಿಯಿಂದ ಕೈಬಿಡಲಾಗಿತ್ತು. ಹೀಗಾಗಿ ಪಂತ್‌ಗೆ ಅವಕಾಶ ಹೆಚ್ಚು ಎನ್ನಲಡ್ಡಿಯಿಲ್ಲ. ಒಂದರಿಂದ 7ನೇ ಕ್ರಮಾಂಕದ ತನಕ ಎಲ್ಲಿಯೂ ಬ್ಯಾಟ್‌ ಬೀಸಲಬಲ್ಲ ಪಂತ್‌, ಪ್ರಸಕ್ತ ಐಪಿಎಲ್‌ನಲ್ಲಿ 222 ರನ್‌ ಹೊಡೆದಿದ್ದಾರೆ.

ಕಾರ್ತಿಕ್‌ ಗಳಿಕೆ 111 ರನ್‌ ಮಾತ್ರ. ಆದರೆ ಸ್ಪಿನ್ನರ್‌ಗಳ ವಿರುದ್ಧ ಪಂತ್‌ ಕೀಪಿಂಗ್‌ ತೀರಾ ಕಳಪೆ ಎಂಬ ಅಪವಾದವಿದೆ. ಆಲ್‌ರೌಂಡರ್‌ ವಿಜಯ್‌ ಶಂಕರ್‌ ಆಯ್ಕೆ ಬಹುತೇಕ ಖಚಿತ ಎಂಬಂತಿದೆ. ಇಂಗ್ಲೆಂಡಿನ ವಾತಾವರಣಕ್ಕೆ ಇವರ ಬೌಲಿಂಗ್‌ ಪ್ರಶಸ್ತವಾದೀತು ಎಂಬುದೊಂದು ಲೆಕ್ಕಾಚಾರ.

ಶಂಕರ್‌ ಮತ್ತು ಪಾಂಡ್ಯ 4ನೇ ಸೀಮ್‌ ಬೌಲಿಂಗ್‌ ಜವಾಬ್ದಾರಿ ಹೊರಬಲ್ಲರು ಎಂಬ ನಂಬಿಕೆ ಇದೆ. ಅಕಸ್ಮಾತ್‌ ಇಲ್ಲಿ ಸ್ಪೆಷಲಿಸ್ಟ್‌ ಬೌಲರೇ ಬೇಕು ಎಂದಾದರೆ ಆಗ ಪೈಪೋಟಿ ತೀವ್ರಗೊಳ್ಳಲಿದೆ. ಯಾದವ್‌, ಇಶಾಂತ್‌, ಖಲೀಲ್‌ ಹೊರತು ಪಡಿಸಿ ಪ್ರತಿಭಾನ್ವಿತ ಯುವ ಬೌಲರ್‌ಗಳಾದ ನವದೀಪ್‌ ಸೈನಿ ಮತ್ತು ದೀಪಕ್‌ ಚಹರ್‌ ಪರಿಗಣನೆಗೆ ಬರಲೂಬಹುದು.

ಕೆ.ಎಲ್‌. ರಾಹುಲ್‌ಗೆ ಹೆಚ್ಚುವರಿ ಜವಾಬ್ದಾರಿ?
ಐಪಿಎಲ್‌ನಲ್ಲಿ 335 ರನ್‌ ಬಾರಿಸಿ ಉತ್ತಮ ಫಾರ್ಮ್ ಪ್ರದರ್ಶಿಸಿರುವ ಕೆ.ಎಲ್‌.
ರಾಹುಲ್‌ಗೆ ವಿಶ್ವಕಪ್‌ ಬಾಗಿಲು ತೆರೆಯುವ ಅವಕಾಶ ಹೆಚ್ಚಿದೆ. ರಾಹುಲ್‌ ಕೀಪಿಂಗ್‌ ಕೂಡ ಮಾಡಬಲ್ಲರು. ಹೀಗಾಗಿ ಅವರನ್ನು ತೃತೀಯ ಓಪನರ್‌ ಹಾಗೂ ದ್ವಿತೀಯ ಕೀಪರ್‌ ಆಗಿ ಆರಿಸುವ ಸಾಧ್ಯತೆಯೂ ಇದೆ. “ಧೋನಿ ಗಾಯಾಳಾದರಷ್ಟೇ ದ್ವಿತೀಯ ಕೀಪರ್‌ ಅಗತ್ಯವಿರುತ್ತದೆ. ಪಂತ್‌ ಪ್ರತಿಭಾನ್ವಿತ ಆಟಗಾರ ನಿಜ. ಆದರೆ ಸ್ಥಿರವಾದ ಬ್ಯಾಟಿಂಗ್‌ ಪ್ರದರ್ಶಿಸಿಲ್ಲ…’ ಎಂಬ ರೀತಿಯಲ್ಲಿ ಭಾರತದ ಮಾಜಿ ಆಟಗಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಸಂಭಾವ್ಯ 14ರ ಬಳಗ
ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮ (ಉಪನಾಯಕ), ಶಿಖರ್‌ ಧವನ್‌, ಕೆ.ಎಲ್‌. ರಾಹುಲ್‌, ಮಹೇಂದ್ರ ಸಿಂಗ್‌ ಧೋನಿ, ಕೇದಾರ್‌ ಜಾಧವ್‌, ಹಾರ್ದಿಕ್‌ ಪಾಂಡ್ಯ, ವಿಜಯ್‌ ಶಂಕರ್‌, ಕುಲದೀಪ್‌ ಯಾದವ್‌, ಯಜುವೇಂದ್ರ ಚಾಹಲ್‌, ಜಸ್‌ಪ್ರೀತ್‌ ಬುಮ್ರಾ, ಭುವನೇಶ್ವರ್‌ ಕುಮಾರ್‌, ಮೊಹಮ್ಮದ್‌ ಶಮಿ, ರವೀಂದ್ರ ಜಡೇಜ.

15ನೇ ಆಟಗಾರನ ಸ್ಥಾನಕ್ಕೆ 3 ಸಾಧ್ಯತೆ
2ನೇ ಕೀಪರ್‌: ದಿನೇಶ್‌ ಕಾರ್ತಿಕ್‌/ರಿಷಬ್‌ ಪಂತ್‌.
4ನೇ ಕ್ರಮಾಂಕದ ಸ್ಪೆಷಲಿಸ್ಟ್‌: ಅಂಬಾಟಿ ರಾಯುಡು/ಶ್ರೇಯಸ್‌ ಅಯ್ಯರ್‌.
4ನೇ ಪೇಸ್‌ ಬೌಲರ್‌: ಉಮೇಶ್‌ ಯಾದವ್‌/ಖಲೀಲ್‌ ಅಹ್ಮದ್‌/ಇಶಾಂತ್‌ ಶರ್ಮ/ನವದೀಪ್‌ ಸೈನಿ/ದೀಪಕ್‌ ಚಹರ್‌.

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.