ಪಿಯು: ರಾಜ್ಯದಲ್ಲೇ ಜಿಲ್ಲೆಗೆ 15ನೇ ಸ್ಥಾನ


Team Udayavani, Apr 16, 2019, 3:00 AM IST

pu-rajya

ಮೈಸೂರು: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.68.55 ಫ‌ಲಿತಾಂಶದೊಂದಿಗೆ ಮೈಸೂರು ಜಿಲ್ಲೆ ರಾಜ್ಯದಲ್ಲಿ 15ನೇ ಸ್ಥಾನ ಸಂಪಾದಿಸಿದೆ. ಕಳೆದ ಮಾರ್ಚ್‌ನಲ್ಲಿ ನಡೆದ 2018-19 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು 28,595 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 19, 601 ಮಂದಿ ಉತ್ತೀರ್ಣರಾಗಿದ್ದಾರೆ.

ಶೇ.2ರಷ್ಟು ಏರಿಕೆ: ಮೈಸೂರು ಜಿಲ್ಲೆ 2017-18ನೇ ಸಾಲಿನಲ್ಲಿ ಶೇ.66.77 ಫ‌ಲಿತಾಂಶ ಪಡೆದು ಜಿಲ್ಲಾವಾರು ಸ್ಥಾನದಲ್ಲಿ 17ನೇ ಸ್ಥಾನ ಪಡೆದಿತ್ತು. ಆದರೆ 2018-19ನೇ ಸಾಲಿನಲ್ಲಿ ಶೇ.68.55 ಫ‌ಲಿತಾಂಶ ಪಡೆಯುವ ಮೂಲಕ ಜಿಲ್ಲಾವಾರು 15ನೇ ಸ್ಥಾನ ಪಡೆದು ಶೇ.2ರಷ್ಟು ಏರಿಕೆ ಕಂಡಿದೆ.

28595 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆದಿದ್ದು ಅವರಲ್ಲಿ 19601 ಮಂದಿ ತೇರ್ಗಡೆಯಾಗಿದ್ದಾರೆ. ಖಾಸಗಿಯಾಗಿ 1413 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 372 ಮಂದಿ ಉತ್ತೀರ್ಣರಾಗಿದ್ದಾರೆ.

ಜೊತೆಗೆ 4497 ಪುನಾರಾವರ್ತಿತ ಪರೀಕ್ಷಾರ್ಥಿಗಳಲ್ಲಿ 1287 ಮಂದಿ ಉತ್ತೀರ್ಣರಾಗುವ ಮೂಲಕ ಒಟ್ಟು 34505 ಮಂದಿಯಲ್ಲಿ 21260 ಮಂದಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಒಟ್ಟು 9563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 1972 ಬಾಲಕರು ಹಾಗೂ 2776 ಬಾಲಕಿಯರು ಸೇರಿ 4748 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 12881 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 3529 ಬಾಲಕರು ಹಾಗೂ 5167 ಬಾಲಕಿಯರು ಸೇರಿದಂತೆ 8696 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 12061 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 3417 ಬಾಲಕರು, 4399 ಬಾಲಕಿಯರು ಸೇರಿ 7816 ಮಂದಿ ತೇರ್ಗಡೆಯಾಗಿದ್ದಾರೆ.

18508 ನಗರ, 5053 ಗ್ರಾಮೀಣರು ತೇರ್ಗಡೆ: ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ನಗರ ಪ್ರದೇಶದ ಒಟ್ಟು 29452 ಪರೀಕ್ಷಾರ್ಥಿಗಳ ಪೈಕಿ 18508 ಮಂದಿ ತೇರ್ಗಡೆಯಾಗಿದ್ದು, ಗ್ರಾಮಾಂತರ ಪ್ರದೇಶದ 5053 ಪರೀಕ್ಷಾರ್ಥಿಗಳ ಪೈಕಿ 2752 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ದಯಾನಂದ್‌ ತಿಳಿಸಿದ್ದಾರೆ.

2016ರಲ್ಲಿ ಜಿಲ್ಲಾವಾರು ಸ್ಥಾನದಲ್ಲಿ 11ನೇ ಸ್ಥಾನ ಪಡೆದಿದ್ದ ಮೈಸೂರು ಜಿಲ್ಲೆ 2017ರಲ್ಲಿ 14ನೇ ಸ್ಥಾನಕ್ಕೆ ಕುಸಿದಿತ್ತು. ಆನಂತರ 2018ನೇ ಸಾಲಿನಲ್ಲಿ 17ನೇ ಸ್ಥಾನಕ್ಕೆ ಕುಸಿದಿತ್ತು. 2018-19ನೇ ಸಾಲಿನಲ್ಲಿ 15ನೇ ಸ್ಥಾನ ಪಡೆದಿದೆ.

ಕಲಾ ವಿಭಾಗಕ್ಕೆ ಹೆಚ್ಚಿನ ಫ‌ಲಿತಾಂಶ ಬಂದಿಲ್ಲ: ಕಲಾ ವಿಭಾಗದಲ್ಲಿ ಫ‌ಲಿತಾಂಶ ಕಡಿಮೆ ಬಂದಿರುವುದೇ ಜಿಲ್ಲಾವಾರು ಫ‌ಲಿತಾಂಶ ಕುಸಿತಕ್ಕೆ ಕಾರಣ, ಕಲಾ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಲ್ಲಿ ಕೆಲವರಿಗೆ ಓದಲು, ಬರೆಯಲು ಬರುವುದಿಲ್ಲ. ಅಲ್ಲದೇ ರಾಜ್ಯದ ಒಟ್ಟಾರೆ ಫ‌ಲಿತಾಂಶ ಗಮನಿಸಿದರೆ ಕಲಾ ವಿಭಾಗಕ್ಕೆ ಶೇ.50ಕ್ಕಿಂತ ಹೆಚ್ಚಿನ ಫ‌ಲಿತಾಂಶ ಲಭಿಸಿಲ್ಲ ಎಂದು ಡಾ.ದಯಾನಂದ್‌ ವಿವರಿಸಿದರು.

ವಾಣಿಜ್ಯದಲ್ಲಿ ಸ್ನೇಹಾ ರಾಜ್ಯಕ್ಕೆ 4ನೇ ಸ್ಥಾನ – ವಿಜ್ಞಾನದಲ್ಲಿ ಅನನ್ಯ ಜಿಲ್ಲೆಗೆ ಮೊದಲು: ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಮರಿಮಲ್ಲಪ್ಪ ಪಿಯು ಕಾಲೇಜಿನ ಸ್ನೇಹಾ ಕೆ. 593 ಅಂಕ ಪಡೆಯುವ ಮೂಲಕ ಜಿಲ್ಲೆಗೆ ಮೊದಲ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸದ್ವಿದ್ಯಾ ಸೆಮಿ ರೆಸಿಡೆನ್ಷಿಯಲ್‌ ಕಾಲೇಜಿನ ಅನನ್ಯ 590 ಅಂಕ ಪಡೆಯುವ ಮೂಲಕ ಜಿಲ್ಲೆಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ನಿರೀಕ್ಷಿತ ಫ‌ಲಿತಾಂಶ ಬಂದಿಲ್ಲ: ಈ ಬಾರಿ ಮೈಸೂರು ಜಿಲ್ಲೆ ರಾಜ್ಯದ ಜಿಲ್ಲಾವಾರು ಸ್ಥಾನದಲ್ಲಿ 10ರಿಂದ 12ನೇ ಸ್ಥಾನದೊಳಗೆ ಬರುವ ನಿರೀಕ್ಷೆ ಇತ್ತು. ಶೇಕಡವಾರು ಫ‌ಲಿತಾಂಶ ಹೆಚ್ಚಿಸುವ ಸಲುವಾಗಿಯೇ ರಜಾ ದಿನಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗಿತ್ತು. ವಿಶ್ವಾಸ ಕಿರಣ ಯೋಜನೆಯಡಿ ವಿದ್ಯಾರ್ಥಿಗಳಿಗೆ ನ್ಪೋಕನ್‌ ಇಂಗ್ಲಿಷ್‌, ವ್ಯಾಕರಣ ತರಬೇತಿ ನೀಡಲಾಗಿತ್ತು.

ತಾಂತ್ರಿಕ ಸಹಾಯಕರಿಂದ ಕಲಿಕಾ ಕಾರ್ಯಕ್ರಮದ ಮೂಲಕ ನುರಿತ ವಿಜ್ಞಾನ ಉಪನ್ಯಾಸಕರಿಂದ ವಿಜ್ಞಾನ ವಿಷಯವನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ಬೋಧಿಸಲಾಗಿತ್ತು. ಜೊತೆಗೆ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗಿತ್ತು.

ನುರಿತ ಉಪನ್ಯಾಸಕ ವರ್ಗದವರಿಂದ ವಿಶೇಷ ಬೋಧನೆ, ವಾಣಿಜ್ಯಶಾಸ್ತ್ರ ವಿಷಯಕ್ಕೆ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಮೊದಲ ಬಾರಿಗೆ ಅಳವಡಿಸಿದ್ದರಿಂದ ಉಪನ್ಯಾಸಕರಿಗೆ ವಿಶೇಷ ತರಬೇತಿ ನೀಡಲಾಗಿತ್ತು. ಜೊತೆಗೆ ಶೇ.75 ಕಡ್ಡಾಯ ಹಾಜರಾತಿ ನಿಗದಿಪಡಿಸಲಾಗಿತ್ತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ದಯಾನಂದ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.