ಭೋಪಾಲ್ ಅಖಾಡ; ದಿಗ್ವಿಜಯ್ ವಿರುದ್ಧ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್?
Team Udayavani, Apr 16, 2019, 3:26 PM IST
ನವದೆಹಲಿ: ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ.
ಮಧ್ಯಪ್ರದೇಶದ ಸಾಗರ್, ವಿದಿಶಾ ಹಾಗೂ ಗುನಾ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಜೆಪಿ ಅಂತಿಮಗೊಳಿಸಲಿದೆ ಎಂದು ಮೂಲಗಳು ಹೇಳಿವೆ. ವಿದಿಶಾದಿಂದ ರಮಾಕಾಂತ್ ಭಾರ್ಗವ್ ಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಸಾಗರ್ ಲೋಕಸಭಾ ಕ್ಷೇತ್ರದಿಂದ ರಾಜ್ ಬಹದೂರ್ ಸಿಂಗ್, ಗುನಾ ಕ್ಷೇತ್ರದಿಂದ ಕೆಪಿ ಯಾದವ್ ಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿರುವುದಾಗಿ ವರದಿ ವಿವರಿಸಿದೆ.
ಒಂದು ವೇಳೆ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಬೇಕೆಂದು ಬಿಜೆಪಿ ನಿರ್ಧರಿಸಿದರೆ ನಾನು ಸ್ಪರ್ಧಿಸಲು ಸಿದ್ಧ ಎಂದು ಸಾಧ್ವಿ ಪ್ರಗ್ಯಾ ಸಿಂಗ್ ತಿಳಿಸಿದ್ದಾರೆ. ಸಿಂಗ್ ವಿರುದ್ಧ ಸ್ಪರ್ಧಿಸುವುದು ದೊಡ್ಡ ವಿಷಯವಲ್ಲ, ಯಾಕೆಂದರೆ ನಾನು ರಾಷ್ಟ್ರೀಯವಾದಿ. ಆದರೆ ದಿಗ್ವಿಜಯ್ ಸಿಂಗ್ ದೇಶದ ವಿರುದ್ಧವೇ ಮಾತನಾಡುತ್ತಾರೆ ಎಂದು ಸಾಧ್ವಿ ಆರೋಪಿಸಿದ್ದಾರೆ.
ದಿಗ್ವಿಜಯ್ ಒಬ್ಬ ಮೋಸಗಾರ, ಅವರ ನಿಜವಾದ ಮುಖವಾಡ ಜನತೆಗೆ ತಿಳಿದಿದೆ ಎಂದು ಸಿಂಗ್ ಅವರ ಟೆಂಪಲ್ ರನ್ ಬಗ್ಗೆ ಸಾಧ್ವಿ ಈ ರೀತಿಯಾಗಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ