ಕೂಲಿ ಮಾಡುವ ಹುಡುಗ ಪಿಯು ಟಾಪರ್‌!


Team Udayavani, Apr 16, 2019, 3:34 PM IST

dvg-2
ಹರಪನಹಳ್ಳಿ: ಕಷ್ಟಪಟ್ಟರೆ ಯಶಸ್ಸು ಖಂಡಿತ ಎಂಬ ಮಾತಿಗೆ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಗಳಿಸಿರುವ ಬಾರಿಕರ ಶಿವಕುಮಾರ ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಕೂಲಿ ಕೆಲಸ ಮಾಡುತ್ತಾ ಓದಿ ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ.
ಪಟ್ಟಣದ ಉಜ್ಜಯಿನಿ ಪೀಠದ ಎಸ್‌ ಯುಜೆಎಂ ಪಿಯು ಕಾಲೇಜಿನ ವಿದ್ಯಾರ್ಥಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದ ಬಾರಿಕರ ಶಿವಕುಮಾರ ಓದಿನೊಂದಿಗೆ ಬಿಡುವಿನ ಸಮಯದಲ್ಲಿ ಬೇರೆಯವರ ಹೊಲದಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಾ ಪಿಯುಸಿ ಕಲಾ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾನೆ.
ಹರಪನಹಳ್ಳಿ ದಾವಣಗೆರೆ ಜಿಲ್ಲೆಯಿಂದ ಬೇರ್ಪಟ್ಟು ಬಳ್ಳಾರಿ ಜಿಲ್ಲೆಗೆ ಸೇರಿದ್ದರೂ ಶೈಕ್ಷಣಿಕವಾಗಿ ದಾವಣಗೆರೆ ವ್ಯಾಪ್ತಿಗೆ ಒಳಪಡುತ್ತಿರುವುದರಿಂದ ಬಾರಿಕರ ಶಿವಕುಮಾರ ದಾವಣಗೆರೆ ಜಿಲ್ಲೆಗೂ ಪ್ರಥಮ ಸ್ಥಾನ ಗಳಿಸಿದಂತಾಗಿದೆ. ಬಾರಿಕರ ಶಿವಕುಮಾರ ಕಲಾ ವಿಭಾಗದಲ್ಲಿ 589(98.01) ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದು, ಸಂಸ್ಕೃತ ಹಾಗೂ ಶಿಕ್ಷಣ(ಎಜ್ಯುಕೇಷನ್‌) ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾನೆ. ಕನ್ನಡ 96, ಐಚ್ಛಿಕ ಕನ್ನಡ 97, ರಾಜ್ಯಶಾಸ್ತ್ರ 99, ಇತಿಹಾಸ 97 ಅಂಕ ಪಡೆದು ಸಾಧನೆ ಮಾಡಿದ್ದಾನೆ. ದ್ವಿತೀಯ ಪಿಯುಸಿ ಓದಿದ್ದರೂ ಕೂಲಿ ಕೆಲಸ ಮಾಡಿಕೊಂಡು ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿರುವ ತಂದೆ ಬಾರಿಕರ ಗೋಣ್ಯೆಪ್ಪ ಹಾಗೂ ಕೋಟ್ರಮ್ಮ ಅವರಿಗೆ ತೀವ್ರ ಬಡತನ ಕಾಡುತ್ತಿದೆ. ತಂದೆ, ತಾಯಿ ದಿನಗೂಲಿ ಕೆಲಸಕ್ಕೆ ಹೋಗುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.
ಕೂಲಿ ಕೆಲಸದ ಮೂಲಕವೇ ತಮ್ಮಬ್ಬರು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿರುವ ಗೋಣ್ಯೆಪ್ಪನ ಹಿರಿಯ ಮಗ ಶಿವಕುಮಾರ ಪಿಯುಸಿಯಲ್ಲಿ ಟಾಪರ್‌ ಆಗುವ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾನೆ. ಗೋಣ್ಯೆಪ್ಪ ಅವರ ಎರಡನೇ ಪುತ್ರಿ 8ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದಾಳೆ.
 ರಜೆ ದಿನಗಳಲ್ಲಿ ಕೂಲಿ ಕೆಲಸ ಮಾಡಿಕೊಂಡ ಕಲಾ ವಿಭಾಗದಲ್ಲಿ ಟಾಪರ್‌ ಆಗಿರುವ ಶಿವಕುಮಾರ, ಎಸ್‌ಎಸ್‌ಎಲ್‌ಸಿಯಲ್ಲಿ ಶೇ.88 ಅಂಕ ಗಳಿಸಿದ್ದು, ಪಿಯುಸಿಯಲ್ಲಿ ಟಾಪರ್‌ ಆಗಬೇಕೆಂದು ಕನಸು ಕಂಡಿದ್ದ. ಸೋಮವಾರ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಾಗ ಶಿವಕುಮಾರ ಬೇರೆಯವರ ಹೊಲದಲ್ಲಿ ಗೊಬ್ಬರ ಹಾಕುವ ಕೆಲಸ ಮಾಡುತ್ತಿದ್ದ. ಸ್ನೇಹಿತರು ಫೋನ್‌ ಮಾಡಿ ಕೇಳಿದಾಗ ಕಾಲೇಜಿಗೆ ಬಂದು ಫಲಿತಾಂಶ ಖಚಿತಪಡಿಸಿಕೊಂಡಿದ್ದಾನೆ. ಅಂದಿನ ಪಾಠ ಅಂದೇ ಅಭ್ಯಾಸ ಮಾಡುತ್ತಾ ರಾತ್ರಿ 12 ಗಂಟೆವರೆಗೂ ಓದುತ್ತಿದ್ದೆ. ತಾಯಿಯ ಅಣ್ಣ (ಮಾವ) ಪರುಶುರಾಮ ಅವರ ಸಹಕಾರದಿಂದ
ಸಾಧನೆ ಮಾಡಲು ಸಾಧ್ಯವಾಗಿದೆ ಎನ್ನುತ್ತಾನೆ ಬಾರಿಕರ ಶಿವಕುಮಾರ.
ಸೈನ್ಯಕ್ಕೆ ಸೇರುವ ಆಸೆ ಸೈನ್ಯಕ್ಕೆ ಸೇರಿ ದೇಶ ಸೇವೆ ಮಾಡಬೇಕೆಂಬ ಹಂಬಲವಿದೆ. ತಾಯಿ ನಾಡು ಕಾಯುವ
ಮೂಲಕ ಜನರನ್ನು ರಕ್ಷಿಸುವ ತುಡಿತ ನನ್ನಲ್ಲಿದೆ. ಮುಂದೆ ಏನು ಆಗುತ್ತದೆಯೋ ಗೊತಿಲ್ಲ. ಐಎಎಸ್‌, ಕೆಎಎಸ್‌ ಮಾಡಲು ನಮ್ಮ ಬಳಿ ಹಣವಿಲ್ಲ. ಕೊನೆಗೆ ಕಂದಾಯ ಇಲಾಖೆಯಲ್ಲಿ ಕಂದಾಯ ನಿರೀಕ್ಷಕನಾಗಿ ಬಡಜನರಿಗೆ ಭೂಮಿ ದೊರಕಿಸುವ ಕೆಲಸ ಮಾಡುತ್ತೇನೆ.
 ಬಾರಿಕರ ಶಿವಕುಮಾರ, ಟಾಪರ್‌ ವಿದ್ಯಾರ್ಥಿ.
„ಎಸ್‌.ಎನ್‌.ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.