“ಪ್ರಕಾಶ’ಮಾನವಾಗಲು ಅಣ್ಣಾ ತೊಡರುಗಾಲು

ರಣಾಂಗಣ: ಚಿಕ್ಕೋಡಿ

Team Udayavani, Apr 17, 2019, 3:00 AM IST

prakasha

ಬೆಳಗಾವಿ: ಅಸಮಾಧಾನದ ಹೊಗೆಯ ಮಧ್ಯೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡದ ಚಿತ್ರಣ ಸ್ಪಷ್ಟವಾಗಿದ್ದು ಇಬ್ಬರು ಪ್ರಭಾವಿ ನಾಯಕರ ಮಧ್ಯೆ ನೇರ ಕುಸ್ತಿಗೆ ಮತದಾರರು ಸಾಕ್ಷಿಯಾಗಲಿದ್ದಾರೆ. ಕಾಂಗ್ರೆಸ್‌ನಿಂದ ಪ್ರಕಾಶ ಹುಕ್ಕೇರಿ ಮರು ಆಯ್ಕೆ ಬಯಸಿದ್ದರೆ, ಬಿಜೆಪಿಯಿಂದ ಅಣ್ಣಾಸಾಹೇಬ ಜೊಲ್ಲೆ ಪ್ರಬಲ ಪೈಪೋಟಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಕಣದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಬಹುಜನ ಸಮಾಜ ಪಕ್ಷದ ಮಚ್ಚೇಂದ್ರ ಕಾಡಾಪುರೆ ಸೇರಿ 9 ಜನ ಉಳಿದುಕೊಂಡಿದ್ದಾರೆ. ಆದರೆ ಪ್ರಕಾಶ ಹುಕ್ಕೇರಿ ಹಾಗೂ ಅಣ್ಣಾಸಾಹೇಬ ಜೊಲ್ಲೆ ಮಧ್ಯೆ ನೇರ ಕದನ ಇರುವುದರಿಂದ ಉಳಿದ ಅಭ್ಯರ್ಥಿಗಳ ಬಗ್ಗೆ ಅಂತಹ ಆಸಕ್ತಿ ಮತದಾರರಲ್ಲಿ ಕಾಣುತ್ತಿಲ್ಲ.

ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರ ನಂತರ ಯಾರಿಗೂ ಭದ್ರವಾಗಿ ನೆಲೆ ಕೊಟ್ಟಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಈ ಕೋಟೆಯ ವಶಕ್ಕೆ ಆಗಾಗ ಪೈಪೋಟಿ ನಡೆದೇ ಇದೆ. ಸಕ್ಕರೆ ಕಾರ್ಖಾನೆಗಳು ಹಾಗೂ ಡಿಸಿಸಿ ಬ್ಯಾಂಕ್‌ ರಾಜಕಾರಣ ಇಲ್ಲಿ ಚುನಾವಣೆಯ ಮುಖ್ಯ ವಿಷಯ. ನಂತರ ಜಾತಿ ಸಮೀಕರಣ. ಇದಾದ ಮೇಲೆ ಆಯಾ ಪಕ್ಷಗಳ ಸಾಧನೆ. ಬಲಾಡ್ಯ ವ್ಯಕ್ತಿಗಳು ಇಲ್ಲಿರುವುದರಿಂದ ಪಕ್ಷಗಳ ಹೆಸರು ನಗಣ್ಯ.

ಅಣ್ಣಾಸಾಹೇಬ ಜೊಲ್ಲೆಗೆ ಇದು ಮೊದಲ ಲೋಕಸಭೆ ಚುನಾವಣೆ. ವಿಧಾನಸಭೆ ಚುನಾವಣೆಯಲ್ಲಿ ಪ್ರಕಾಶ ಹುಕ್ಕೇರಿ ಹಾಗೂ ಅವರ ಪುತ್ರ ಗಣೇಶ ವಿರುದ್ಧ ಸೋಲು ಅನುಭವಿಸಿರುವ ಜೊಲ್ಲೆಗೆ ಈ ಎರಡೂ ಸೋಲಿನ ಸೇಡು ತೀರಿಸಿಕೊಳ್ಳುವ ಅವಕಾಶ ಈಗ ಒದಗಿ ಬಂದಿದೆ.

ಕಠಿಣ ಸವಾಲಿನ ಚುನಾವಣೆ – ಕ್ಷೇತ್ರದಲ್ಲಿನ ವಾತಾವರಣ ಗಮನಿಸಿದರೆ ಇಬ್ಬರೂ ಅಭ್ಯರ್ಥಿಗಳಿಗೂ ಚುನಾವಣೆ ಸರಳವಾಗಿಲ್ಲ. ಎರಡೂ ಪಕ್ಷಗಳಲ್ಲಿ ಆಂತರಿಕ ಅಸಮಾಧಾನ ಇರುವುದೇ ಇದಕ್ಕೆ ಮುಖ್ಯ ಕಾರಣ. ಕ್ಷೇತ್ರದ ಜನರಲ್ಲಿ ಇಬ್ಬರ ಬಗ್ಗೆಯೂ ಒಳ್ಳೆಯ ಅಭಿಪ್ರಾಯ ಇದ್ದರೂ ಮುಖಂಡರ ಮನಸ್ತಾಪ ಅಭ್ಯರ್ಥಿಗಳ ಮುನ್ನಡೆಗೆ ಅಡ್ಡಿಯಾಗಿದೆ.

ಟಿಕೆಟ್‌ ಹ‌ಂಚಿಕೆ ವಿಷಯದಲ್ಲಿ ಎರಡೂ ಪಕ್ಷಗಳಲ್ಲಿ ಸಾಕಷ್ಟು ಅಪಸ್ವರಗಳು ಕೇಳಿ ಬಂದಿದ್ದವು. ಅದರಲ್ಲೂ ಬಿಜೆಪಿ ಟಿಕೆಟ್‌ ವಿಷಯ ರಾಜ್ಯಮಟ್ಟದಲ್ಲಿ ಬಹಳ ದೊಡ್ಡ ಸುದ್ದಿ ಮಾಡಿತ್ತು. ಕಡೆಯ ಕ್ಷಣದವರೆಗೆ ಹೆಸರು ಘೋಷಣೆ ಮಾಡದೇ ಇದ್ದದ್ದು ಗೊಂದಲಕ್ಕೆ ಕಾರಣವಾಗಿತ್ತು. ಟಿಕೆಟ್‌ ಮೇಲೆ ಆಸೆ ಇಟ್ಟುಕೊಂಡಿದ್ದ ಮಾಜಿ ಸಂಸದ ರಮೇಶ ಕತ್ತಿ ಬಂಡಾಯದ ಸೂಚನೆ ಸಹ ನೀಡಿದ್ದರು.

ಕಾಂಗ್ರೆಸ್‌ಗೆ ಸೇರುವ ಬೆದರಿಕೆ ಹಾಕಿದ್ದರು. ಕೊನೆಗೆ ಇವರ ಬಂಡಾಯವನ್ನು ಶಮನ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬೆಳಗಾವಿಗೆ ಬರಬೇಕಾಯಿತು. ಕತ್ತಿ ಅವರ ಈ ಅಸಮಾಧಾನ ಚುನಾವಣೆಯಲ್ಲಿ ಬಿಜೆಪಿಗೆ ಸಮಸ್ಯೆ ಉಂಟು ಮಾಡಿದರೂ ಅಚ್ಚರಿ ಇಲ್ಲ.

ಕಾಂಗ್ರೆಸ್‌ನಲ್ಲಿ ಸಹ ಪ್ರಕಾಶ ಹುಕ್ಕೇರಿಗೆ ಟಿಕೆಟ್‌ ನೀಡಬಾರದೆಂದು ಚಿಕ್ಕೋಡಿ ಭಾಗದ ಮಾಜಿ ಶಾಸಕರು ವರಿಷ್ಠರ ಮೇಲೆ ಒತ್ತಡ ಹಾಕಿದ್ದರು. ಆದರೆ ಜೊಲ್ಲೆ ವಿರುದ್ಧ ಸಮಬಲದ ಹೋರಾಟ ಮಾಡುವ ಅಭ್ಯರ್ಥಿ ಸಿಗದೇ ಇರುವ ಕಾರಣ ಮಾಜಿ ಶಾಸಕರ ಒತ್ತಡ ಕೆಲಸ ಮಾಡಲಿಲ್ಲ. ಇದರ ಜತೆಗೆ ಪ್ರಕಾಶ ಹುಕ್ಕೇರಿ ಸಹ ಚಿಕ್ಕೋಡಿ ಬದಲು ಬೆಳಗಾವಿಯಿಂದ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು. ಆದರೆ ಇದಕ್ಕೆ ಸತೀಶ ಜಾರಕಿಹೊಳಿ ಅಡ್ಡಿಯಾದರು.

ಬಿಜೆಪಿ ಎಂದಿನಂತೆ ಪ್ರಧಾನಿ ಮೋದಿ ಅವರ ಗಾಳಿಯನ್ನೇ ನೆಚ್ಚಿಕೊಂಡಿದೆ. ಪಕ್ಷದ ಅಭ್ಯರ್ಥಿ ಜೊಲ್ಲೆಗೆ ತಮ್ಮ ಸಾಧನೆ ಹೇಳಿಕೊಳ್ಳುವ ಅವಕಾಶ ಇಲ್ಲ. ಆದರೆ ಸಾಮಾಜಿಕವಾಗಿ ಜನರ ಜತೆ ಹತ್ತಿರದ ಸಂಪರ್ಕ ಹೊಂದಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು, ಕಾರ್ಯಕರ್ತರು ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ಜೊಲ್ಲೆ ಅವರನ್ನು ಬೆಂಬಲಿಸಬೇಕೆಂದು ಪ್ರಚಾರ ಮಾಡುತ್ತಿದ್ದಾರೆ. ಇದರ ಜತೆಗೆ ಜೊಲ್ಲೆ ಅವರ ಪತ್ನಿ ಶಶಿಕಲಾ ಅವರು ಶಾಸಕಿಯಾಗಿರುವುದೂ ಅನುಕೂಲವಾಗಿದೆ.

ಹುಕ್ಕೇರಿಗೆ ಕೆಲಸದ ವಿಶ್ವಾಸ – ಆರು ಬಾರಿ ಶಾಸಕರಾಗಿ ನಂತರ ಮೊದಲ ಪ್ರಯತ್ನದಲ್ಲೇ ಸಂಸದರಾದ ಅನುಭವಿ ರಾಜಕಾರಣಿ ಪ್ರಕಾಶ ಹುಕ್ಕೇರಿ ಅವರಿಗೆ ತಾವು ಮಾಡಿದ ಅಭಿವೃದ್ಧಿ ಕೆಲಸಗಳ ಮೇಲೆ ಹೆಚ್ಚಿನ ವಿಶ್ವಾಸ. ಐದು ವರ್ಷಗಳ ಈ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದಿದ್ದೇನೆಂದು ಹೇಳುವ ಅವರು ಇದೇ ಅಭಿವೃದ್ಧಿ ಕೆಲಸಗಳು ತಮ್ಮ ಕೈಹಿಡಿಯಲಿವೆ ಎಂಬ ವಿಶ್ವಾಸ ಹೊಂದಿದ್ದಾರೆ.

ಕ್ಷೇತ್ರ ವ್ಯಾಪ್ತಿ?: ಅಥಣಿ, ಕಾಗವಾಡ, ರಾಯಬಾಗ, ಕುಡಚಿ, ಚಿಕ್ಕೋಡಿ, ಹುಕ್ಕೇರಿ, ನಿಪ್ಪಾಣಿ, ಯಮಕನಮರಡಿ ವಿಧಾನಸಭೆ ಕ್ಷೇತ್ರ.

ನಿರ್ಣಾಯಕ ಅಂಶ:  ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ಅಧಿಕವಾಗಿದ್ದಾರೆ. ಹೀಗಾಗಿ ಎರಡೂ ಪ್ರಮುಖ ಪಕ್ಷಗಳು ಇದೇ ಸಮಾಜದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇವರ ಜತೆಗೆ ಕುರುಬರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಚುನಾವಣೆಯ ಫಲಿತಾಂಶ ಅದಲು ಬದಲು ಮಾಡುವ ಶಕ್ತಿ ಹೊಂದಿದ್ದಾರೆ. ಇಲ್ಲಿ ಜೆಡಿಎಸ್‌ ಹೆಸರಿಗೆ ಮಾತ್ರ. ಹೀಗಾಗಿ ಮೈತ್ರಿ ಧರ್ಮ ಕಾಣಿಸುವುದೇ ಇಲ್ಲ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಇರುವುದರಿಂದ ಫಲಿತಾಂಶ ಬಹಳ ಕುತೂಹಲ ಮೂಡಿಸಿದೆ.

ಒಟ್ಟು ಮತದಾರರು – 15,79,309
ಪುರುಷರು – 8,06,052
ಮಹಿಳೆಯರು – 7,73,202
ಇತರೆ – 55

ಜಾತಿವಾರು ಲೆಕ್ಕಾಚಾರ
ಲಿಂಗಾಯತರು – 3.90 ಲಕ್ಷ
ಕುರುಬರು – 1.84 ಲಕ್ಷ
ಎಸ್‌ಸಿ – 2 ಲಕ್ಷ
ಎಸ್‌ಟಿ – 1 ಲಕ್ಷ
ಮುಸ್ಲಿಂ – 1.98 ಲಕ್ಷ
ಮರಾಠ – 1.47 ಲಕ್ಷ
ಜೈನ್‌ – 1.03 ಲಕ್ಷ
ಹಣಬರ – 1.04 ಲಕ್ಷ.

* ಕೇಶವ ಆದಿ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.