ಧರ್ಮದ ಹೆಸರಲ್ಲಿ ರಾಜಕೀಯ ವ್ಯಭಿಚಾರ: ದಿನೇಶ್‌


Team Udayavani, Apr 17, 2019, 3:00 AM IST

dharma

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿಯವರು ಧರ್ಮದ ಹೆಸರಿನಲ್ಲಿ ರಾಜಕೀಯ ವ್ಯಭಿಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಸಂಬಧಿಸಿ ರಾಜ್ಯದಲ್ಲಿ ಸೋಲಿನ ಭೀತಿಯಿಂದ ಈಗ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯ ಪ್ರಸ್ತಾಪಿಸಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ.

ಗೃಹ ಸಚಿವ ಎಂ.ಬಿ. ಪಾಟೀಲ್‌ ಅವರು 2017 ರಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಮಾಡುವ ಕುರಿತು ಎಐಸಿಸಿ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು ಎಂದು ಸುಳ್ಳು ದಾಖಲೆ ಸೃಷ್ಟಿಸಿ ಅದನ್ನು ಪತ್ರಿಕೆಯಲ್ಲಿ ಬರುವಂತೆ ಮಾಡಿದ್ದಾರೆ ಎಂದು ದೂರಿದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಮಾನ, ಮರ್ಯಾದೆ, ಗೌರವ, ಸಂಸ್ಕೃತಿ, ಧರ್ಮ, ನೈತಿಕತೆ ಒಂದು ಪರ್ಸೆಂಟಾದರೂ ಉಳಿದುಕೊಂಡಿದ್ದರೆ, ಕೂಡಲೇ ಅವರು ರಾಜ್ಯದ ಜನತೆ ಹಾಗೂ ವೀರಶೈವ ಲಿಂಗಾಯತ ಸಮಾಜಕ್ಕೆ ಕಳಂಕ ತರುವ ಕೆಲಸ ಮಾಡಿರುವುದಕ್ಕೆ ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದರು.

ಚುನಾವಣೆಯಲ್ಲಿ ಪ್ರತ್ಯೇಕ ಧರ್ಮದ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆ ಮಾಡುವ ಪ್ರಯತ್ನ ಇದರ ಹಿಂದಿದೆ. ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಹೆಸರು ಹಾಗೂ ಸೋನಿಯಾ ಗಾಂಧಿ ಹೆಸರು ಪ್ರಸ್ತಾಪ ಮಾಡಿರುವುದರಿಂದ ಬಿಜೆಪಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ನಕಲಿ ಚುನಾವಣಾ ಗುರುತಿನ ಚೀಟಿ ತಯಾರಿಸಲಾಗುತ್ತಿದೆ ಎಂದು ಬಿಜೆಪಿಯವರು ಆರೋಪ ಮಾಡಿದ್ದಾರೆ. ಆದರೆ, ಚುನಾವಣಾ ಆಯೋಗ ಪರಿಶೀಲನೆ ನಡೆಸಿದಾಗ ಯಾವುದೇ ದಾಖಲೆ ದೊರೆತಿಲ್ಲ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಅವರ ಹೆಸರು ಕೆಡಿಸಲು ಈ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಅವರು ಮೋದಿ ವಿರೋಧಿಸುವವರನ್ನು ಕೆಟ್ಟ ಉಪಮೆ ಬಳಸಿ ಶಬ್ದಬಳಕೆ ಮಾಡಿದ್ದಾರೆ. ಧರ್ಮ, ಸಂಸ್ಕೃತಿಯ ಬಗ್ಗೆ ಇವರಿಗೆ ಯಾವುದೇ ನೈತಿಕತೆಯಿಲ್ಲ.

ಬಿಜೆಪಿಯ ಸಿ.ಟಿ. ರವಿ, ಪ್ರತಾಪ್‌ ಸಿಂಹ, ನಳಿನ್‌ ಕುಮಾರ್‌ ಕಟೀಲ್‌, ತೇಜಸ್ವಿ ಸೂರ್ಯ ಅವರು ಕೀಳು ಮಟ್ಟದ ಮಾತುಗಳನ್ನಾಡುತ್ತಾರೆ. ಚುನಾವಣಾ ಆಯೋಗ ಈ ಬಗ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಸಿ.ಟಿ. ರವಿಯಂತ ನಾಯಕರಿಗೆ ಚುನಾವಣಾ ಪ್ರಚಾರಕ್ಕೆ ನಿಬಂಧ ಹೇರಬೇಕು ಎಂದು ಮನವಿ ಮಾಡಿದರು.

ಯಡಿಯೂರಪ್ಪ ಅಸಲಿ ಡೈರಿ ತನಿಖೆಯಾಗಲಿ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಬರೆದಿದ್ದರು ಎನ್ನಲಾದ ಡೈರಿಯನ್ನು ಈಶ್ವರಪ್ಪ ಮಾಜಿ ಆಪ್ತ ಸಹಾಯಕ ವಿನಯ್‌ ಅವರು ಪೊಲೀಸರಿಗೆ ನೀಡಿದ್ದಾರೆ. ಈ ಡೈರಿಯಲ್ಲಿ ಗಂಭೀರ ಪರಿಣಾಮ ಬೀರುವ ಮಾಹಿತಿ ಇದೆ. ಯಡಿಯೂರಪ್ಪ ಪಕ್ಷದ ನಾಯಕರು, ಆರ್‌ಎಸ್‌ಎಸ್‌ ನಾಯಕರಿಗೆ ಎಷ್ಟು ಹಣ ನೀಡಿದ್ದಾರೆ ಎನ್ನುವ ಮಾಹಿತಿ ಇದೆ.

ಈ ಡೈರಿಯ ಬಗ್ಗೆ ಪೊಲೀಸರು ಸೂಕ್ತ ತನಿಖೆ ಮಾಡಬೇಕು ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು. ಇತ್ತೀಚೆಗೆ ಎಐಸಿಸಿ ವಕ್ತಾರ ರಣದೀಪ್‌ ಸುರ್ಜೆವಾಲಾ ಪತ್ರಿಕಾಗೋಷ್ಠಿ ನಡೆಸಿ ಬಿಡುಗಡೆ ಮಾಡಿದ ದಾಖಲೆಗೂ, ವಿನಯ್‌ ಪೊಲೀಸರಿಗೆ ನೀಡಿರುವ ಡೈರಿಗೂ ಸಂಬಂಧ ಇದೆಯೋ ಗೊತ್ತಿಲ್ಲ. ಈ ಡೈರಿಯ ಬಗ್ಗೆ ಸಂಪೂರ್ಣ ತನಿಖೆ ನಡೆಸಬೆಕು ಎಂದು ಆಗ್ರಹಿಸಿದರು.

ಐಟಿ ಇಲಾಖೆ ಬಿಜೆಪಿ ಅಂಗ ಸಂಸ್ಥೆ: ಆದಾಯ ತೆರಿಗೆ ಇಲಾಖೆ ಬಿಜೆಪಿ ಅಧಿಕೃತ ಅಂಗ ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಹಾಗೂ ಅವರ ಆಪ್ತರ ಮನೆಗಳ ಮೇಲೆ ದಾಳಿ ನಡೆಸಿ, ಅವರನ್ನು ನೈತಿಕವಾಗಿ ಕುಗ್ಗುವಂತೆ ಮಾಡುತ್ತಿದ್ದಾರೆ. ಐಟಿ ಅಧಿಕಾರಿಯನ್ನು ವರ್ಗಾಯಿಸುವಂತೆ ದೂರು ನೀಡಿದರೂ, ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ.

ಮೋದಿಯವರು ಚೌಕಿದಾರ ಎಂದು ದೇಶಾದ್ಯಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ರಾಜ್ಯದ ಬಿಜೆಪಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದರೂ, ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದ್ದರೂ. ಮೋದಿ ಯಾವುದೇ ಕ್ರಮ ಕೈಗೊಳ್ಳದಿರುವುದು. ಇದು ದೇಶಕ್ಕೆ ಗಂಡಾಂತರದ ವಿಷಯ ಎಂದು ಹೇಳಿದರು.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.