ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ; ಜೂ. 1ರಿಂದ ದೇಶದಲ್ಲಿ ಅಚ್ಛೇದಿನ್‌


Team Udayavani, Apr 17, 2019, 6:30 AM IST

cm-ibrahim

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ಬಳಿಕ ನರೇಂದ್ರ ಮೋದಿ ಅವರು ಪ್ರಧಾನಿ ಆಗುವುದಿಲ್ಲ. ಬದಲಿಗೆ ಜೂ. 1ರಿಂದ ಅಚ್ಛೇದಿನ್‌ ಆರಂಭವಾಗಿ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಪತ್ರಿಕಾ
ಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಎಲ್ಲ ಸಂಸದರು ಮೋದಿ ಅವರ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಯುವಕರ ಮೇಲೆ ಮೋದಿ ಹೆಸರನ್ನು ಹೇರಿಕೆ ಮಾಡಲಾಗುತ್ತಿದೆ. ನರೇಂದ್ರ ಮೋದಿ ಅವರು ಮಾತೆತ್ತಿದರೆ ಭಾರತ ಬಲಿಷ್ಠ ದೇಶವಾಗಬೇಕು ಎಂದು ಹೇಳುತ್ತಿದ್ದಾರೆ. ಆದರೆ ಭಾರತ ಯಾವಾಗ ದುರ್ಬಲ ದೇಶವಾಗಿತ್ತು ಎಂದು ಅವರು ಪ್ರಶ್ನಿಸಿದರು.

ಅಂದು ನಡೆದಿತ್ತು 12 ಬಾರಿ ಸರ್ಜಿಕಲ್‌ ಸ್ಟ್ರೆ çಕ್‌
ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ವೇಳೆಯಲ್ಲಿಯೂ ಭಾರತ-ಪಾಕಿಸ್ಥಾನ ನಡುವೆ ಯುದ್ಧವಾಗಿ ಭಾರತ ಗೆಲುವು ಸಾಧಿಸಿತ್ತು. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗಲೂ 12 ಬಾರಿ ಸರ್ಜಿಕಲ್‌ ಸ್ಟ್ರೆ çಕ್‌ ನಡೆದಿತ್ತು. ಆದರೆ ನರೇಂದ್ರ ಮೋದಿ ಅವರ ರೀತಿಯಲ್ಲಿ ಅದನ್ನು ಚುನಾವಣೆಯ ಅಸ್ತ್ರವನ್ನಾಗಿ ಬಳಸಲಿಲ್ಲ. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಭಾವನಾತ್ಮಕ ವಿಚಾರವನ್ನು ಚುನಾವಣೆಯ ಅಸ್ತ್ರವನ್ನಾಗಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಜಗತ್ತಿನಲ್ಲಿ ಹೆಸರು ವಾಸಿಯಾಗಿದೆ. ಹಿಂದೂ ಮತ್ತು ಮುಸ್ಲಿಮರನ್ನು ಈ ಜಿಲ್ಲೆಯಲ್ಲಿ ಸೌಹಾರ್ದದಿಂದ ಬದುಕಲು ಬಿಡಿ ಎಂದು ಹೇಳಿದರು.

ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಸಂವಿಧಾನದ 375 ಮತ್ತು 35ನೇ ವಿಧಿ, ರಾಮ ಮಂದಿರದ ವಿಚಾರ ಮಾತ್ರ ಪ್ರಸ್ತಾವವಾಗಿದೆ. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ಒಂದು ಡಾಲರ್‌ಗೆ 55 ರೂ. ಇತ್ತು. ಇದೀಗ 70 ರೂ. ಆಗಿದೆ. ಅಡುಗೆ ಅನಿಲ ಸಿಲಿಂಡರ್‌ಗೆ 450 ರೂ. ಇತ್ತು, ಇದೀಗ 700 ರೂ. ತಲುಪಿದೆ. ಲಾಭದಲ್ಲಿದ್ದ ಕರಾವಳಿಯ ಹೆಮ್ಮೆಯ ವಿಜಯ ಬ್ಯಾಂಕನ್ನು ನಷ್ಟದಲ್ಲಿದ್ದ ಬ್ಯಾಂಕ್‌ ಆಫ್‌ ಬರೋಡ ಜೊತೆ ವಿಲೀನಗೊಳಿಸಿದ್ದು ನಳಿನ್‌ ಕುಮಾರ್‌ ಕಟೀಲು ಅವರ ಸಾಧನೆ. ಬ್ಯಾಂಕ್‌ ವಿಲೀನ ವಿಷಯದಲ್ಲಿ ನಳಿನ್‌ ಅವರು ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಬೇಕಿತ್ತು ಎಂದು ತಿಳಿಸಿದರು.

ಬಿಜೆಪಿಯನ್ನು ಕಟ್ಟಿ ಬೆಳೆಸಿದವರನ್ನು ಪಕ್ಷವು ಮೂಲೆಗುಂಪು ಮಾಡಲಾಗಿದೆ. ಸಜ್ಜನರನ್ನು ಪಕ್ಷದಿಂದ ಹೊರಗಿಡಲಾಗಿದೆ. ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಮತ್ತೂಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು ಎನ್ನುತ್ತಾರೆ. ಒಂದುವೇಳೆ ರಾಹುಲ್‌ ಗಾಂಧಿ ಪ್ರಧಾನಿ ಆಗಬೇಕು ಅಂದಿದ್ದರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬೊಬ್ಬೆ ಹಾಕು ತ್ತಿದ್ದರು ಎಂದು ನುಡಿದರು.

ಸತ್ಯ-ಅಸತ್ಯಗಳ ಚುನಾವಣೆ
ಸಚಿವೆ ಜಯಮಾಲಾ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯು ಸತ್ಯ-ಅಸತ್ಯ, ಅಸಲಿ-ನಕಲಿ ನಡುವೆ ನಡೆಯುವ ಚುನಾವಣೆಯಾಗಿದೆ. ಕಳೆದ ಐದು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಕೇವಲ ಆಶ್ವಾಸನೆಗಳನ್ನು ಮಾತ್ರ ನೀಡಿದೆ. ಜಾಹಿರಾತಿಗಾಗಿ ಲಕ್ಷಾಂತರ ರೂ. ವ್ಯಯಿಸುತ್ತಿದೆ ಎಂದರು.

ಕಾಂಗ್ರೆಸ್‌ ಮುಖಂಡರ ಮೇಲೆ ಐಟಿ ಅಸ್ತ್ರ ಪ್ರಯೋಗಿಸುತ್ತಿದೆ. ಆದರೆ
ಇತ್ತೀಚೆಗೆ ನರೇಂದ್ರ ಮೋದಿ ಅವರು ಚಿತ್ರದುರ್ಗಕ್ಕೆ ಬಂದಿದ್ದ ಹೆಲಿಕಾಪ್ಟರ್‌
ನಿಂದ ಬಾಕ್ಸ್‌ ಒಂದನ್ನು ಕಾರಿನಲ್ಲಿ ಸಾಗಿಸಿದ್ದು, ಅದರಲ್ಲಿ ಏನಿತ್ತು ಎಂಬುವುದರ ಬಗ್ಗೆ ತನಿಖೆಯಾಗಬೇಕಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಲೋಕಸಭಾ ಕ್ಷೇತ್ರದ ಸಂಸದರು ಕಿಂಚಿತ್ತೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಎರಡೂ ಕ್ಷೇತ್ರದಲ್ಲಿ ಹತ್ತಾರು ಯೋಜನೆಗಳು ನೆನೆಗುದಿಗೆ ಬಿದ್ದಿವೆ ಎಂದು ಆರೋಪಿಸಿದರು.

ಸಂಸದರಾದವರಿಗೆ ಭಾಷಾ ಜ್ಞಾನ ಅತೀ ಮುಖ್ಯ. ಯಾವುದೇ ಸಮಸ್ಯೆ
ಗಳನ್ನು ಚರ್ಚೆ ಮಾಡುವಾಗ ಇಲ್ಲಿನ ಸಂಸದರಿಗೆ ಭಾಷೆಯ ಸಮಸ್ಯೆ ಎದು
ರಾಗುತ್ತದೆ. ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಯುವ ನಾಯಕ ಮಿಥುನ್‌ ರೈ ಅವರನ್ನು ಜನ ಬೆಂಬಲಿಸಬೇಕು ಎಂದರು.

ಹರೀಶ್‌ ಕುಮಾರ್‌, ಕಾಂಗ್ರೆಸ್‌ ಮುಖಂಡರಾದ ಐವನ್‌ ಡಿ’ಸೋಜಾ, ವಿಶ್ವಾಸ್‌ಕುಮಾರ್‌ ದಾಸ್‌, ಮಮತಾ ಗಟ್ಟಿ, ಶಾಲೆಟ್‌ ಪಿಂಟೋ, ಸಲೀಂ, ಶಕೀಲ್‌ ಉಪಸ್ಥಿತರಿದ್ದರು.

ಸಿ.ಟಿ. ರವಿಗೆ ಪುಸ್ತಕ‌ ಪಾರ್ಸೆಲ್‌
ಜಯಮಾಲಾ ಮಾತನಾಡಿ, ಬಿಜೆಪಿ ನಾಯಕ ಸಿ.ಟಿ. ರವಿ ಅವರು ಇತ್ತೀಚೆಗೆ ಸಭೆಯೊಂದರಲ್ಲಿ ಹೆಣ್ಣಿನ ಬಗ್ಗೆ ಅತ್ಯಂತ ಕೀಳು ಮಟ್ಟದ ಪದ ಬಳಕೆ ಮಾಡಿದ್ದು, ಖಂಡನೀಯ. ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡುತ್ತೇವೆ. ಇದು ಸಿ.ಟಿ. ರವಿ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಹೆಣ್ಣನ್ನು ಲಘುವಾಗಿ ಕಾಣುವ ಅವರನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳಿಗೆ ತಾಯಿ ಹೇಳುವ ನೀತಿ ಕಥೆ ಮತ್ತು ಮಾತೃತ್ವದ ಮಹತ್ವ ತಿಳಿಸುವ ಎರಡು ಪುಸ್ತಕಗಳನ್ನು ಸಿ.ಟಿ. ರವಿ ಅವರಿಗೆ ಪಾರ್ಸೆಲ್‌ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.