ಮಸೀದಿಯಲ್ಲಿ ಪ್ರಾರ್ಥನೆ: ಕೇಂದ್ರಕ್ಕೆ ನೋಟಿಸ್
Team Udayavani, Apr 17, 2019, 6:00 AM IST
ಹೊಸದಿಲ್ಲಿ: ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರಾರ್ಥನೆ ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ. ನ್ಯಾಯ ಮೂರ್ತಿ ಎಸ್.ಎ. ಬೋಬ್ದೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರಕಾರಕ್ಕೆ ಈ ಸಂಬಂಧ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. ಶಬರಿಮಲೆ ಪ್ರಕರಣದಲ್ಲೂ ಮಹಿಳೆಯರಿಗೆ ದೇಗುಲ ಪ್ರವೇಶಿಸಲು ಅವಕಾಶ ಮಾಡಿ ಕೊಟ್ಟಿರುವ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸ ಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನಿರಾಕರಿಸಿರುವ ಪದ್ಧತಿಯನ್ನು ಅಕ್ರಮ ಮತ್ತು ಅಸಾಂವಿಧಾನಿಕ ಎಂದು ಘೋಷಿ ಸಬೇಕು ಎಂಬುದಾಗಿ ಪುಣೆಯ ಜುಬೇರ್ ಮತ್ತು ಯಾಸ್ಮಿನ್ ಪೀರ್ಜಾದೆ ದಂಪತಿ ಆಗ್ರಹಿಸಿದ್ದಾರೆ. ಈ ವೇಳೆ ವಿದೇಶಗಳಲ್ಲಿ ಮಹಿಳೆಯರಿಗೆ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅವಕಾಶ ವಿದೆಯೇ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದಾಗ, ಪವಿತ್ರ ಮೆಕ್ಕಾದಲ್ಲಿ ಮಹಿಳೆಯರಿಗೆ ಮಸೀದಿಗೆ ತೆರಳಲು ಅವಕಾಶವಿದೆ ಎಂದು ದಂಪತಿ ಪರ ವಕೀಲರು ಸ್ಪಷ್ಟನೆ ನೀಡಿದ್ದಾರೆ. ಶಬರಿಮಲೆ ವಿಚಾರವನ್ನು ಕೋರ್ಟ್ ಕೈಗೆತ್ತಿ ಕೊಂಡಿರುವುದರಿಂದ ಈ ಮನವಿ ಸ್ವೀಕರಿಸುತ್ತಿರುವುದಾಗಿ ಕೋರ್ಟ್ ಹೇಳಿದೆ.
ಆರಂಭಿಕ ಯತ್ನ ಯಶಸ್ವಿ: ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿರುವುದು ದಂಪತಿಗೆ ಸಂತಸ ತಂದಿದೆ. ನಾಲ್ಕು ವರ್ಷದ ಹಿಂದೆ ಮಸೀದಿಗೆ ಮಹಿಳೆಯರು ತೆರಳಲು ಅವಕಾಶ ನೀಡುವಂತೆ ಸ್ಥಳೀಯ ಮಸೀದಿಗೆ ವಿನಂತಿಸಿದ್ದೆವು. ಆದರೆ ಅವರು ಸಮ್ಮತಿಸಲಿಲ್ಲ. ಆಗ ಧರ್ಮ ಏನು ಹೇಳುತ್ತದೆ ಎಂಬುದನ್ನು ವಿಶ್ಲೇಷಿಸಿದ್ದೆವು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ