ಉತ್ತಮ ಪ್ರಯತ್ನ; ಮಾಲಿಂಗ ಸಮಾಧಾನ


Team Udayavani, Apr 17, 2019, 6:30 AM IST

malinga

ಮುಂಬಯಿ: ಆರ್‌ಸಿಬಿ ಎದುರಿನ ಗೆಲುವಿನ ರೂವಾರಿಯಾಗಿ ಮೂಡಿಬಂದ ಲಸಿತ ಮಾಲಿಂಗ, ಇದು ತನ್ನ ನೂರು ಪ್ರತಿಶತ ಪ್ರಯತ್ನಕ್ಕೆ ಸಂದ ಯಶಸ್ಸು ಎಂಬುದಾಗಿ ಹೇಳಿದ್ದಾರೆ. ಈ ಪಂದ್ಯದಲ್ಲಿ 31 ರನ್ನಿಗೆ 4 ವಿಕೆಟ್‌ ಉರುಳಿಸಿದ ಮಾಲಿಂಗ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

“ಕಳೆದ ಎರಡು ವಾರಗಳು ನನ್ನ ಪಾಲಿಗೆ ಅತ್ಯಂತ ಕಠಿನವಾಗಿದ್ದವು. ಇಲ್ಲಿಗೆ ಬಂದ ಬಳಿಕ ಪುನಃ ಶ್ರೀಲಂಕಾದ ದೇಶಿ ಕ್ರಿಕೆಟ್‌ನಲ್ಲಿ ಆಡಿದೆ. ಮತ್ತೆ ಇಲ್ಲಿಗೆ ಬಂದೆ. ಇಂಥ ಪಂದ್ಯಾವಳಿಗಾಗಿ ನಾನು ಮಾನಸಿಕವಾಗಿ ಗಟ್ಟಿಗೊಂಡಿರುತ್ತೇನೆ.

ಯಾವ ಪಂದ್ಯದಲ್ಲಿ ಆಡಿದರೂ 100 ಪ್ರತಿಶತ ಸಾಧನೆ ದಾಖಲಿಸಲೇ ಬೇಕೆಂಬುದು ನನ್ನ ನಿರ್ಧಾರವಾಗಿರುತ್ತದೆ. ಈ ಪಂದ್ಯದಲ್ಲಿ ನನ್ನ ಪ್ರಯತ್ನಕ್ಕೆ ತಕ್ಕ ಫ‌ಲ ಸಿಕ್ಕಿತು. ಇದರಿಂದ ಸಮಾಧಾನವಾಗಿದೆ’ ಎಂಬುದಾಗಿ ಮಾಲಿಂಗ ಹೇಳಿದರು.

ಲಸಿತ ಮಾಲಿಂಗ ಓವರೊಂದ ರಲ್ಲಿ 2 ಸಲ 2 ವಿಕೆಟ್‌ ಹಾರಿಸುವ ಮೂಲಕ ಆರ್‌ಸಿಬಿಗೆ ಬ್ರೇಕ್‌ ಹಾಕಿ ದರು. ಒಂದು ಓವರ್‌ನಲ್ಲಿ ಮೊಯಿನ್‌ ಅಲಿ ಮತ್ತು ಮಾರ್ಕಸ್‌ ಸ್ಟೋಯಿನಿಸ್‌ ವಿಕೆಟ್‌ ಹಾರಿಸಿದರೆ, ಇನ್ನಿಂಗ್ಸಿನ ಅಂತಿಮ ಓವರ್‌ನಲ್ಲಿ ಅಕ್ಷದೀಪ್‌ನಾಥ್‌ ಮತ್ತು ಪವನ್‌ ನೇಗಿ ವಿಕೆಟ್‌ ಕಿತ್ತರು.

“ಅಪಾಯಕಾರಿ ಡಿವಿಲಿಯರ್ ಸಿಡಿಯದಂತೆ ನೋಡಿಕೊಳ್ಳಬೇಕು, ಅವರಿಗೆ ಸಾಧ್ಯವಾದಷ್ಟು ಕಡಿಮೆ ಬೌಂಡರಿ ನೀಡಬೇಕು ಎಂಬುದು ನಮ್ಮ ಯೋಜನೆಯಾಗಿತ್ತು’ ಎಂದೂ ಮಾಲಿಂಗ ಹೇಳಿದರು.

ಈ ಮರು ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ 7 ವಿಕೆಟಿಗೆ 171 ರನ್‌ ಪೇರಿಸಿದರೆ, ಮುಂಬೈ 19 ಓವರ್‌ಗಳಲ್ಲಿ 5 ವಿಕೆಟಿಗೆ 172 ರನ್‌ ಮಾಡಿ ಜಯ ಸಾಧಿಸಿತು. ಇದರೊಂದಿಗೆ ಆರ್‌ಸಿಬಿ ಎದುರಿನ ಪ್ರಸಕ್ತ ಐಪಿಎಲ್‌ನ ಎರಡೂ ಪಂದ್ಯಗಳಲ್ಲಿ ಮುಂಬೈ ಗೆದ್ದಂತಾಯಿತು.

7ನೇ ಸೋಲಿನೊಂದಿಗೆ ಆರ್‌ಸಿಬಿ ಕೂಟದಿಂದ ಬಹುತೇಕ ಹೊರಬಿದ್ದಿದೆ.

ಸಂಕ್ಷಿಪ್ತ ಸ್ಕೋರ್‌: ಆರ್‌ಸಿಬಿ-7 ವಿಕೆಟಿಗೆ 171. ಮುಂಬೈ-19 ಓವರ್‌ಗಳಲ್ಲಿ 5 ವಿಕೆಟಿಗೆ 172 (ಡಿ ಕಾಕ್‌ 40, ಹಾರ್ದಿಕ್‌ ಔಟಾಗದೆ 37, ಸೂರ್ಯಕುಮಾರ್‌ 29, ರೋಹಿತ್‌ 28, ಇಶಾನ್‌ 21, ಅಲಿ 18ಕ್ಕೆ 2, ಚಾಹಲ್‌ 27ಕ್ಕೆ 2).

ಪಾಂಡ್ಯ ಗೇಮ್‌ ಚೇಂಜರ್‌
ಮುಂಬೈ ಕಪ್ತಾನ ರೋಹಿತ್‌ ಶರ್ಮ ಅವರ ಸಂತಸಕ್ಕೆ ಕಾರಣವಾದದ್ದು ಹಾರ್ದಿಕ್‌ ಪಾಂಡ್ಯ ಅವರ ಬಿಗ್‌ ಹಿಟ್ಟಿಂಗ್‌ ಸ್ಟೈಲ್‌. “ಇದರಿಂದ ತಂಡಕ್ಕೂ ಅವರಿಗೂ ಭಾರೀ ಲಾಭ. ಹಾರ್ದಿಕ್‌ ಇದೇ ಆಟವನ್ನು ಮುಂದುವರಿಸಬೇಕು. ಅವರೋರ್ವ ಗೇಮ್‌ ಚೇಂಜರ್‌’ ಎಂದರು.

6ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದ ಪಾಂಡ್ಯ 16 ಎಸೆತಗಳಿಂದ ಅಜೇಯ 37 ರನ್‌ ಬಾರಿಸಿ (5 ಬೌಂಡರಿ, 2 ಸಿಕ್ಸರ್‌) ಮುಂಬೈ ಗೆಲುವನ್ನು ಸಾರಿದರು.

ಬೌಲಿಂಗ್‌ ಪ್ರಯತ್ನ ಸಾಲದು: ಕೊಹ್ಲಿ
“ನಮ್ಮ ಬೌಲಿಂಗ್‌ ಪ್ರಯತ್ನ ಏನೂ ಸಾಲದು. ಪವರ್‌ ಪ್ಲೇಯಲ್ಲಿ ನಿಯಂತ್ರಣ ಸಾಧಿಸಲಾಗಲಿಲ್ಲ. ಕೊನೆಯಲ್ಲಿ ಉತ್ತಮ ಹೋರಾಟ ನಡೆಸಿದರೂ ಇಬ್ಬರು ಬಲಗೈ ಬ್ಯಾಟ್ಸ್‌ಮನ್‌ಗಳು ಕ್ರೀಸ್‌ನಲ್ಲಿದ್ದುದರಿಂದ ಎಡಗೈ ಸ್ಪಿನ್ನರ್‌ನನ್ನು ದಾಳಿಗೆ ಇಳಿಸುವ ರಿಸ್ಕ್ ತೆಗೆದುಕೊಳ್ಳಬೇಕಾಯಿತು’ ಎಂದು ಆರ್‌ಸಿಬಿ ನಾಯಕ ವಿರಾಟ್‌ ಕೊಹ್ಲಿ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.