ಹೈದರಾಬಾದ್‌-ಚೆನ್ನೈ ಮೊದಲ ಫೈಟ್‌


Team Udayavani, Apr 17, 2019, 6:30 AM IST

hydarabad

ಹೈದರಾಬಾದ್‌: ಎಲ್ಲರೂ ಬಹಳ ದಿನಗಳಿಂದ ಕಾತರದಿಂದ ಕಾಯುತ್ತಿದ್ದ ಐಪಿಎಲ್‌ ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ಕೂಟದ 2ನೇ ಸುತ್ತು ಮೊದಲ್ಗೊಂಡಿದ್ದರೂ ಹೈದರಾಬಾದ್‌ ಮತ್ತು ಚೆನ್ನೈ ಈವರೆಗೆ ಪರಸ್ಪರ ಎದುರಾಗಿರಲಿಲ್ಲ. ಬುಧವಾರ ರಾತ್ರಿ ಈ ತಂಡಗಳು ಹೈದರಾಬಾದ್‌ನಲ್ಲಿ ಮುಖಾಮುಖೀಯಾಗಲಿವೆ.

ಹಾಲಿ ಚಾಂಪಿಯನ್‌ ಚೆನ್ನೈ ಎಂಟರಲ್ಲಿ 7 ಪಂದ್ಯ ಗಳನ್ನು ಗೆದ್ದು ಅಗ್ರಸ್ಥಾನ ಅಲಂಕರಿಸಿದರೆ, ಹೈದರಾಬಾದ್‌ ಸತತ 3 ಸೋಲಿನೊಂದಿಗೆ 6ನೇ ಸ್ಥಾನಕ್ಕೆ ಕುಸಿದಿದೆ. ಈ ಹ್ಯಾಟ್ರಿಕ್‌ ಸೋಲು ಮುಂಬೈ, ಪಂಜಾಬ್‌ ಮತ್ತು ಡೆಲ್ಲಿ ವಿರುದ್ಧ ಎದು ರಾಗಿತ್ತು. ಇದರಲ್ಲಿ 2 ಸೋಲು ತವರಿ ನಂಗಳದಲ್ಲೇ ಎದುರಾದದ್ದು ಸನ್‌ರೈಸರ್ ಸ್ಥಿತಿ ಬಿಗಡಾಯಿಸಿದ್ದನ್ನು ಸೂಚಿಸುತ್ತದೆ. ಹೀಗಾಗಿ, ಹೈದರಾಬಾದ್‌ಗೆ ಇದು ತವರಿನ ಪಂದ್ಯವಾದರೂ ಬಲಿಷ್ಠ ಚೆನ್ನೈಯನ್ನು ಮಣಿಸುವುದು ಸುಲಭವಲ್ಲ.

“ಹೈ’ ಬ್ಯಾಟಿಂಗ್‌ ಸಂಕಟ
ಹೈದರಾಬಾದ್‌ ವಾರ್ನರ್‌-ಬೇರ್‌ಸ್ಟೊ ಜೋಡಿಯ ಸ್ಫೋಟಕ ಆಟವನ್ನು ಹೆಚ್ಚು ಅವ ಲಂಬಿಸಿದೆ. ಆದರೆ ಈ ಆರಂಭಿಕರ ನಿರ್ಗಮನದ ಬಳಿಕ ತಂಡದ ಬ್ಯಾಟಿಂಗ್‌ ಅವಸ್ಥೆ ಏನು ಎಂಬುದಕ್ಕೆ ಡೆಲ್ಲಿ ವಿರುದ್ಧದ ಕಳೆದ ಪಂದ್ಯವೇ ಸಾಕ್ಷಿ. 16ನೇ ಓವರಿನಲ್ಲಿ 2 ವಿಕೆಟಿಗೆ 101 ರನ್‌ ಬಾರಿಸಿ ಗೆಲುವಿನತ್ತ ಮುಖ ಮಾಡಿದ್ದ ಹೈದರಾಬಾದ್‌ 116ಕ್ಕೆ ತಲಪುವಷ್ಟರಲ್ಲಿ ಆಲೌಟ್‌ ಆಗಿತ್ತು!

ಗಾಯದ ಸಮಸ್ಯೆಯಲ್ಲೇ ಮುಳುಗಿರುವ, ಆಗಾಗ ಆಡುವ ಬಳಗಕ್ಕೆ ಬಂದು ಹೋಗುತ್ತಿರುವ ಕೇನ್‌ ವಿಲಿಯಮ್ಸನ್‌ ಬ್ಯಾಟಿಂಗ್‌ ಕೈಕೊಟ್ಟಿರುವುದು ತಂಡದ ಪಾಲಿಗೆ ದೊಡ್ಡ ಸಮಸ್ಯೆಯಾಗಿದೆ. ಮಧ್ಯಮ ಕ್ರಮಾಂಕದ ಆಟಗಾರರಿಂದಲೂ ರನ್‌ ಬರುತ್ತಿಲ್ಲ. ಮನೀಷ್‌ ಪಾಂಡೆ (6 ಪಂದ್ಯ, 54 ರನ್‌), ದೀಪಕ್‌ ಹೂಡಾ (6 ಪಂದ್ಯ, 47 ರನ್‌), ಯೂಸುಫ್ ಪಠಾಣ್‌(6 ಪಂದ್ಯ, 32 ರನ್‌), ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆದ ವಿಜಯ್‌ ಶಂಕರ್‌ ಇನ್ನೂ ಜೋಶ್‌ ತೋರಿಲ್ಲ.

ಆದರೆ ಹೈದರಾಬಾದ್‌ ಬೌಲಿಂಗ್‌ ಸಾಮರ್ಥ್ಯದ ಬಗ್ಗೆ ಎರಡು ಮಾತಿಲ್ಲ. ಅದು ನಿಜಕ್ಕೂ ಘಾತಕ. ರಶೀದ್‌ ಖಾನ್‌, ಮೊಹಮ್ಮದ್‌ನಬಿ, ಭುವನೇಶ್ವರ್‌, ಸಂದೀಪ್‌ ಶರ್ಮ ಸಂಘಟಿತ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ.

ಚೆನ್ನೈ ಸಶಕ್ತ ತಂಡ
ಹಿರಿಯರನ್ನೇ ಹೆಚ್ಚಾಗಿ ಹೊಂದಿರುವ ಚೆನ್ನೈ ತಂಡ ಅನುಭವಕ್ಕೆ ತಕ್ಕ ಪ್ರದರ್ಶನ ನೀಡುತ್ತಿದೆ. ಕಡಿಮೆ ರನ್‌ ಗಳಿಸಿದರೂ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಬೌಲರ್‌ಗಳು ಯಶಸ್ವಿಯಾಗುತ್ತಿದ್ದಾರೆ. ಇಮ್ರಾನ್‌ ತಾಹಿರ್‌, ಹರ್ಭಜನ್‌ ಸಿಂಗ್‌, ರವೀಂದ್ರ ಜಡೇಜ ಅವರ ಸ್ಪಿನ್ನಿಗೆ ಎದುರಾಳಿ ಬ್ಯಾಟ್ಸ್‌ಮನ್‌ಗಳು ರನ್‌ ಗಳಿಸಲು ಪರದಾಡುವುದಂತೂ ಖಚಿತ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.