ಏರ್‌ ಸ್ಟ್ರೈಕ್‌ ನಲ್ಲಿ ಉಗ್ರರ ಸಾವಾಗಿಲ್ಲ ಎಂಬುದನ್ನು ಪಾಕ್‌ ಸಾಬೀತುಪಡಿಸಲಿ

ಪಾಕಿಸ್ಥಾನಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಸವಾಲು

Team Udayavani, Apr 17, 2019, 10:06 AM IST

Nirmla-Sitaraman-726

ನವದೆಹಲಿ: ಪುಲ್ವಾಮ ಆತ್ಮಾಹುತಿ ಉಗ್ರದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆಗಳು ನಡೆಸಿದ ಬಾಲಾಕೋಟ್‌ ಏರ್‌ ಸ್ಟ್ರೈಕ್‌ ನಲ್ಲಿ ಯಾವುದೇ ಸಾವುನೋವುಗಳಾಗಿಲ್ಲ ಎಂದೇ ಹೇಳಿಕೊಂಡು ಬರುತ್ತಿರುವ ಪಾಕಿಸ್ಥಾನಕ್ಕೆ ಭಾರತದ ರಕ್ಷಣಾ ಸಚಿವೆ ಸವಾಲೆಸೆದಿದ್ದಾರೆ.

ಈ ಏರ್‌ ಸ್ಟ್ರೈಕ್‌ ಸಂದರ್ಭದಲ್ಲಿ ಉಗ್ರ ತರಬೇತು ಶಿಬಿರಗಳು ನಾಶವಾಗಿದೆಯೇ ಇಲ್ಲವೇ ಎಂಬುದನ್ನು ಬಹಿರಂಗಪಡಿಸಬೇಕಾಗಿರುವುದು ಪಾಕಿಸ್ಥಾನದ ಜವಾಬ್ದಾರಿ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಎ.ಎನ್‌.ಐ. ಸುದ್ದಿಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ನಿರ್ಮಲಾ ಅವರು ಈ ಮಾತುಗಳನ್ನಾಡಿದ್ದಾರೆ. ಆಯ್ದ ಪತ್ರಕರ್ತರನ್ನು ಬಾಲಾಕೋಟ್‌ ನಲ್ಲಿರುವ ಮಸೀದಿಗೆ ಕರೆದೊಯ್ದು ಏರ್‌ ಸ್ಟ್ರೈಕ್‌ ನಿಂದ ಯಾವುದೇ ಹಾನಿಯಾಗಿಲ್ಲ ಎಂದು ಬಿಂಬಿಸುವ ಕೆಲಸವನ್ನು ಪಾಕಿಸ್ಥಾನ ಮಾಡುತ್ತಿದೆ. ಆದರೆ ವಾಯು ದಾಳಿಯ ಸಂದರ್ಭದಲ್ಲಿ ನಮ್ಮ ಪಡೆಗಳು ಯಾವುದೇ ಮದರಸಾ ಮೇಲೆ ದಾಳಿಯನ್ನೇ ಮಾಡಿಲ್ಲ ಬದಲಾಗಿ ಆ ಪ್ರದೇಶದಲ್ಲಿದ್ದ ಉಗ್ರ ತರಬೇತಿ ಶಿಬಿರಗಳ ಮೇಲೆ ದಾಳಿ ಮಾಡಿದ್ದವು ಎಂಬುದನ್ನು ರಕ್ಷಣಾ ಸಚಿವೆ ಸ್ಪಷ್ಟಪಡಿಸಿದ್ದಾರೆ.

ವಾಯು ದಾಳಿಯಲ್ಲಿ ಅಷ್ಟುಪ್ರಮಾಣದ ಉಗ್ರರು ಸಾವೀಗೀಡಾಗಿಲ್ಲ ಎಂದು ತೋರಿಸುವ ಅಗತ್ಯ ಪಾಕಿಸ್ಥಾನಕ್ಕಿತ್ತು. ಆದರೆ ಇದಕ್ಕಾಗಿ ಅವರು 40 ದಿನಗಳ ಬಳಿಕ ಪತ್ರಕರ್ತರ ಸಣ್ಣ ಗುಂಪೊಂದನ್ನು ಹಾಗೂ ಭದ್ರತಾ ಅಧಿಕಾರಿಗಳ ನಿಯೋಗವನ್ನು ಮದರಸಾಕ್ಕೆ ಕರೆದೊಯ್ದಿತ್ತು. ಆದರೆ ಈ ಮದರಸ ಬೆಟ್ಟದ ಇಳಿಜಾರು ಭಾಗದಲ್ಲಿದೆ ಮತ್ತು ಈ ಮದರಸಾದ ಹಿಂದೆ ದಟ್ಟವಾದ ಅರಣ್ಯಪ್ರದೆಶದಲ್ಲಿ ಉಗ್ರ ತರಬೇತು ಶಿಬಿರ ಇತ್ತು ಅದನ್ನು ಗುರಿಯಾಗಿಸಿ ನಮ್ಮ ವಾಯು ಪಡೆಗಳು ದಾಳಿ ನಡೆಸಿದ್ದವು ಎಂದು ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದರು.

ಬಾಲಾಕೋಟ್‌ ವಾಯುದಾಳಿಯ ಫ‌ಲಿತಾಂಶದ ಕುರಿತು ಭಾರತ ಸರಕಾರ ಯಕೆ ಮೌನವಹಿಸುತ್ತಿದೆ ಎಂಬ ಪ್ರಶ್ನೆಗೆ ಸಚಿವೆ ಉತ್ತರಿಸಿದ್ದು ಹೀಗೆ, ‘ಬಾಲಾಕೋಟ್‌ ವಾಯುದಾಳಿ ನಡೆಯುವುದಕ್ಕೂ ಮುಂಚೆ ಹಲವಾರು ಪಾಕಿಸ್ಥಾನಿ ವೆಬ್‌ ಸೈಟ್‌ ಗಳು ಈ ಉಗ್ರಶಿಬಿರಗಳಲ್ಲಿ ಯುವಕರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂದು ವರದಿ ಮಾಡಿದ್ದವು. ಮಾತ್ರವಲ್ಲದೇ 2008ರ ಮುಂಬಯಿ ದಾಳಿ ರೂವಾರಿ ಜಾಗತಿಕ ಉಗ್ರ ಸಹ ಯುವಕರಿಗೆ ತನ್ನ ಸಂಘಟನೆ ಸೇರುವಂತೆ ಬಹಿರಂಗ ಕರೆ ನೀಡುತ್ತಿದ್ದ. ಇಷ್ಟು ಮಾತ್ರವಲ್ಲದೇ ಈ ಉಗ್ರಗಾಮಿ ತರಬೇತಿ ಕೇಂದ್ರಗಳು ಯುವಕರನ್ನು ತರಬೇತುಗೊಳಿಸಲು ನಿವೃತ್ತ ತರಬೇತುದಾರರನ್ನೂ ಸಹ ನೇಮಿಸಿಕೊಳ್ಳಲಾಗುತ್ತಿತ್ತು. ನೀವು ಆ ವೆಬ್‌ ಸೈಟ್‌ ಗಳನ್ನೊಮ್ಮೆ ನೋಡಿದರೆ ಆ ಉಗ್ರ ಶಿಬಿರಗಳಲ್ಲಿ ಎಷ್ಟು ಜನರಿಗೆ ಉಗ್ರ ತರಬೇತು ನೀಡಲಾಗುತ್ತಿತ್ತು ಎಂಬುದು ನಿಮಗೇ ತಿಳಿಯುತ್ತದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.