ಸಂತನ ನೆಲದಲ್ಲಿ ಮತ ರಂಗು


Team Udayavani, Apr 17, 2019, 11:00 AM IST

Udayavani Kannada Newspaper
ಶಿಗ್ಗಾವಿ: ಸಂತ ಶಿಶುನಾಳ ಶರೀಫರ ನೆಲವಾದ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಧಾರವಾಡ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಪ್ರಚಾರ ಭರಾಟೆ ಭರಪೂರಾಗಿ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರಲಿದೆ. ಬಿಜೆಪಿಯಿಂದ ಪ್ರಹ್ಲಾದ ಜೋಶಿ, ಕಾಂಗ್ರೆಸ್‌ನಿಂದ ವಿನಯ ಕುಲಕರ್ಣಿ ಕಣದಲ್ಲಿದ್ದು, ಇಬ್ಬರ ನಡುವೆ ನೇರ ಹಣಾಹಣಿ ನಡೆಯಲಿದೆ.
ಹೀಗಾಗಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬೇಸಿಗೆಯ ಬಿರು ಬಿಸಿಲಲ್ಲೂ ಭರದ ಪ್ರಚಾರ ನಡೆಸಿದ್ದಾರೆ.
ಸ್ಥಳೀಯವಾಗಿ ಶಾಸಕ ಬಸವರಾಜ ಬೊಮ್ಮಾಯಿ ಇದ್ದಾರೆ. ಬಿಜೆಪಿಯಲ್ಲಿ ಹಿರಿಯ ಮುಖಂಡರೆನಿಸಿರುವ ಬೊಮ್ಮಾಯಿ ತಮ್ಮ ಕ್ಷೇತ್ರದಲ್ಲಿ ಹೆಚ್ಚು ಮತಗಳನ್ನು ಸೆಳೆದು ಪ್ರಹ್ಲಾದ ಜೋಶಿಯವರ ಪೆಟ್ಟಿಗೆಗೆ ಹಾಕಿಸಲು ಕ್ಷೇತ್ರ ಸಂಚಾರ ನಡೆಸಿದ್ದಾರೆ.
ಬಿಜೆಪಿಯಿಂದ ಸ್ಟಾರ್‌ ಪ್ರಚಾರಕಾಗಿ ನಟಿ ಶೃತಿ ಬಂದಿದ್ದು ಬಿಟ್ಟರೆ ಬೇರೆ ಯಾರೂ ಬಂದಿಲ್ಲ. ಕಾಂಗ್ರೆಸ್‌ನಲ್ಲಿ ಟಿಕೆಟ್‌ ಹಂಚಿಕೆ ಗೊಂದಲ ಏರ್ಪಟ್ಟು ತಡವಾಗಿ ವಿನಯ ಕುಲಕರ್ಣಿಯವರಿಗೆ ಟಿಕೆಟ್‌ ಘೋಷಣೆ ಯಾಗಿದ್ದರಿಂದ ಪ್ರಚಾರದಲ್ಲಿ ಕಾಂಗ್ರೆಸ್‌ ತುಸು ಹಿಂದೆ ಬೀಳುವಂತಾಯಿತು.
ಬಿಜೆಪಿಯವರು ಪ್ರಧಾನಿ ಮೋದಿಯವರ ಸಾಧನೆ, ಕೇಂದ್ರ ಸರ್ಕಾರದ ಯೋಜನೆ, ಪಕ್ಷದ ಪ್ರಣಾಳಿಕೆ, ಕ್ಷೇತ್ರದಲ್ಲಿ ಶಾಸಕ
ಬಸವರಾಜ ಬೊಮ್ಮಾಯಿ ಅವರಿಂದಾದ ಪ್ರಗತಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಆಗಿರುವ ಅಭಿವೃದ್ಧಿಯನ್ನು ಪ್ರಸ್ತಾಪಿಸಿ ಮತಬೇಟೆಯಲ್ಲಿ ತೊಡಗಿದ್ದಾರೆ.
ಪ್ರಹ್ಲಾದ ಜೋಶಿಯವರು ಚುನಾವಣೆ ಬಂದಾಗ ಮಾತ್ರ ಕ್ಷೇತ್ರದ ಜನರಿಗೆ ಮುಖ ತೋರಿಸುತ್ತಾರೆ ಎಂಬ ಆರೋಪ
ಚುನಾವಣೆ ಆರಂಭದ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಕೇಳಿಬಂದಿತ್ತು. ಈ ಆರೋಪದ ಆಕ್ರೋಶವನ್ನು ಬೊಮ್ಮಾಯಿಯವರು ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದು, ಎಲ್ಲರೂ “ಈ ಬಾರಿ ಮತ್ತೂಮ್ಮೆ ಮೋದಿ’ ಎಂದು ಮತ ಪ್ರಚಾರದಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಧಾರವಾಡ ಗ್ರಾಮೀಣ ಶಾಸಕರಾಗಿ ಹಿಂದಿನ ಅವಧಿಯಲ್ಲಿ ರಾಜ್ಯ ಸರ್ಕಾರದ ಮಂತ್ರಿಮಂಡಲದಲ್ಲಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆ ಮತ್ತು ಅಭಿವೃದ್ಧಿಯನ್ನು ಪ್ರಚುರ ಪಡಿಸಿ ಅವುಗಳನ್ನು ಮತಗಳನ್ನಾಗಿ ಪರಿವರ್ತಸುವ ಪ್ರಯತ್ನ ನಡೆಸಿದ್ದಾರೆ.
ಮೈತ್ರಿ ಸರ್ಕಾರದ ಯೋಜನೆ, ಪಕ್ಷದ ಪ್ರಣಾಳಿಕೆ ಕ್ಷೇತ್ರದಲ್ಲಿ ಜತೆಗೆ ಶೇ. 40ರಷ್ಟಿರುವ ಲಿಂಗಾಯಿತ ಮತಗಳನ್ನು ಸೆಳೆಯಲು ತಂತ್ರಗಾರಿಕೆ ನಡೆಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಆಡಳಿತ ವೈಫಲ್ಯಗಳನ್ನೇ ಪ್ರಚಾರದ ವಸ್ತುವನ್ನಾಗಿ ಬಳಸುತ್ತಿದ್ದಾರೆ. ಕ್ಷೇತ್ರದಲ್ಲಿ ಅಭ್ಯರ್ಥಿಗಿಂತ ಅಭ್ಯರ್ಥಿ ಬೆಂಬಲಿಗರು ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮನೆ ಮನೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.
ಕ್ಷೇತ್ರದಲ್ಲಿ ಕೃಷಿಕರೇ ಹೆಚ್ಚಾಗಿದ್ದು, ಯಾವ ಪಕ್ಷ ಈ ವರೆಗೆ ರೈತರಿಗೆ ಅನುಕೂಲ ಕಲ್ಪಿಸಿದೆ, ಎರಡೂ ಪಕ್ಷಗಳು ರೈತರ ವಿಚಾರಗಳ ಬಗ್ಗೆ ತಮ್ಮ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ್ದು, ಯಾವ ಪಕ್ಷವನ್ನು ಬೆಂಬಲಿಸಿದರೆ  ರೈತರಿಗೆ ಅನುಕೂಲ ಆಗಬಹುದು ಎಂಬ ಚಿಂತನೆಯಲ್ಲಿ ತೊಡಗಿದ್ದಾರೆ. ಯಾವ ರಾಜಕೀಯ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿವೆ ಎಂಬುದರ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕ್ಷೇತ್ರಕ್ಕೆ ಬಹಳಷ್ಟು ಅನುದಾನ ಬಂದಿದೆ. ರಸ್ತೆ, ಮನೆಯಂಥ ಸೌಲಭ್ಯಗಳು ಹೆಚ್ಚಾಗಿವೆ ಎಂದು ಬಿಜೆಪಿಯವರು ವಾದಿಸಿದರೆ, ಕಾಂಗ್ರೆಸ್‌ನವರು ಸಹ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕ್ಷೇತ್ರದ ಹೆಚ್ಚು ಜನರಿಗೆ ಅನುಕೂಲವಾಗುವ ಯೋಜನೆ ಸಿಕ್ಕಿದೆ ಎಂಬ ವಾದ ಮಂಡಿಸುತ್ತಿದ್ದಾರೆ. ಎರಡೂ
ಪಕ್ಷಗಳ ವಾದಗಳನ್ನು ಆಲಿಸುತ್ತಿರುವ ಕ್ಷೇತ್ರದ ಮತದಾರ ಯಾರಿಗೆ ಮಣೆ ಹಾಕುತ್ತಾನೆ ಎಂಬುದು ನಿಗೂಡ
ಜಿಲ್ಲೆ ಹಾವೇರಿಯಾದರೂ ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯದ್ದು. ಹ್ಯಾಟ್ರಿಕ್‌ ಗೆಲುವಿನ ಸರದಾರ ಪ್ರಹ್ಲಾದ ಜೋಶಿ ಅವರ ಮತ್ತೂಂದು ಗೆಲುವಿಗೆ ಬಿಜೆಪಿ ಮುಖಂಡರು ಶ್ರಮಿಸುತ್ತಿದ್ದರೇ. ಶತಾಯಗತಾಯ ಈ ಬಾರಿ ಕ್ಷೇತ್ರವನ್ನು “ಕೈ’ವಶ ಮಾಡಿಕೊಳ್ಳಲೇ ಬೇಕು ಎಂದು ವಿನಯ ಕುಲಕರ್ಣಿ ಪಣ ತೊಟ್ಟಿದ್ದಾರೆ. ಮತದಾರನ ಒಲವು
ಮತ ಬಲ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 544857 ಮತಗಳು, ಕಾಂಗ್ರೆಸ್‌ ಗೆ 431509 ಮತಗಳು
ಬಿದ್ದಿದ್ದವು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 83868 ಮತಗಳು, ಕಾಂಗ್ರೆಸ್‌ಗೆ 74603 ಮತಗಳು ಬಿದ್ದಿದ್ದವು.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.