ಮಹದಾಯಿ ಲೋಕ ಸಮರ


Team Udayavani, Apr 17, 2019, 11:06 AM IST

Udayavani Kannada Newspaper
ನವಲಗುಂದ: ಲೋಕಸಭೆ ಚುನಾವಣೆ ಪ್ರಚಾರದ ಕಾವು ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುವುದರೊಂದಿಗೆ ಕಾರ್ಯಕರ್ತರಲ್ಲಿನ ಉತ್ಸಾಹ ಇಮ್ಮಡಿಗೊಳಿಸುತ್ತಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಪರ ಪಕ್ಷದ ಕಾರ್ಯಕರ್ತರ ಪಡೆ ಪ್ರತಿದಿನ ಮತದಾರರ ಮನೆ ಮನೆ ತಲುಪಿ ಮತಯಾಚನೆ ಮಾಡುತ್ತಿದೆ.
ಅಲ್ಲದೇ ಕ್ಷೇತ್ರದಲ್ಲಿ ಚಿತ್ರನಟಿ ಶ್ರುತಿ ಬಿಜೆಪಿ ಮಹಿಳಾ ಸಮಾವೇಶ ನಡೆಸಿ ಮಹಿಳಾ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದ್ದಾರೆ. ಇನ್ನೊಂದೆಡೆ ಎಸ್ಸಿ-ಎಸ್ಟಿ ವಿಭಾಗದ ಪ್ರಮುಖರ ಸಭೆಯೂ ಮುಕ್ತಾಯಗೊಂಡು ಜೋಶಿ ಅವರು ಒಂದು ಸುತ್ತಿನ ಪ್ರಚಾರವನ್ನೂ ಮುಗಿಸಿದ್ದಾರೆ. ಕ್ಷೇತ್ರಾದ್ಯಂತ ಶಾಸಕ ಶಂಕರ ಪಾಟೀಲ್‌ ಮುನೇನಕೊಪ್ಪ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಮತ ಯಾಚನೆಯಲ್ಲಿ ತೊಡಗಿದ್ದಾರೆ.
ನಿಧಾನವಾಗಿ ಕೈ ಚುರುಕು: ಪಕ್ಷವು ಟಿಕೆಟ್‌ ಘೋಷಣೆಯಲ್ಲಿ ಮಾಡಿದ ವಿಳಂಬದಿಂದಾಗಿ ಗರಬಡಿದಂತಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಈಗಷ್ಟೇ ಮೇಲೇಳುವ ಪ್ರಯತ್ನ ಮಾಡುತ್ತಿದ್ದಾರೆ. ಯುಗಾದಿ ಪಾಡ್ಯದಂದು ತವರೂರು ನಾಯಕನೂರಿನಿಂದ ಪ್ರಚಾರ ಆರಂಭಿಸಿದ ವಿನಯ ಕುಲಕರ್ಣಿ 4 ಹಳ್ಳಿಗಳಲ್ಲಿ ಪ್ರಚಾರ ಕಾರ್ಯ ಮುಗಿಸಿದ್ದಾರೆ.
ವಿನಯ ಸಹೋದರ ವಿಜಯ ಕುಲಕರ್ಣಿ, ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ, ವಿನೋದ್‌ ಅಸೂಟಿ ಪಟ್ಟಣ ಹಾಗೂ
ಗ್ರಾಮಾಂತರ ಪ್ರದೇಶದಲ್ಲಿ ಪ್ರಚಾರ ಚುರುಕುಗೊಳಿಸಿದ್ದಾರೆ. ತಾಲೂಕಿನ ಮಗ ಎಂಬ ಕಾರಣಕ್ಕಾಗಿ ವಿಧಾನಸಭಾ ಕ್ಷೇತ್ರದಾದ್ಯಂತ 2014ರ ಲೋಕಸಭಾ ಚುನಾವಣೆಯಲ್ಲಿ 5 ಸಾವಿರಕ್ಕೂ ಹೆಚ್ಚು ಮತ ಅಂತರವನ್ನು ವಿನಯ ಸಾಧಿಸಿದ್ದರು.
ಕಳೆದ ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಶಕ್ತಿ ನೀಡುವ ಕೆಲಸವಾಗಬೇಕಿದೆ. ಈಗಿನ ಸ್ಥಿತಿ ನೋಡಿದರೆ ಇಂತಹ ಯಾವ ಕೆಲಸಗಳೂ ನಡೆದಿಲ್ಲ. ತಟಸ್ಥ ನಿಲುವು ತಾಳಿದ್ದ ಮಾಜಿ ಸಚಿವ ಕೆ.ಎನ್‌. ಗಡ್ಡಿ ಈಗಷ್ಟೇ ಪ್ರಚಾರಕ್ಕಾಗಿ ರಂಗಪ್ರವೇಶ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದ ಆಂತರಿಕ ಕಚ್ಚಾಟ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ತಣ್ಣಗಾದ ಲಕ್ಷಣ ಕಂಡು ಬಂದರೂ ಬೂದಿ ಮುಚ್ಚಿದ ಕೆಂಡದಂತಿದೆ.
ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಹಿಂದಿನ ಯುಪಿಎ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಸಾಧನೆಗಳನ್ನು
ಮುಂದಿಟ್ಟು ಮತಯಾಚನೆ ಮಾಡಲಾಗುತ್ತಿದೆ. ಬಿಜೆಪಿ ಪಡೆ ನರೇಂದ್ರ ಮೋದಿ ಸರಕಾರದ ಸಾಧನೆ ಹಾಗೂ ಸಂಸದ
ಪ್ರಹ್ಲಾದ ಜೋಶಿ ಮಾಡಿದ ಕೆಲಸಗಳ ಆಧಾರದ ಮೇಲೆ ಮತಯಾಚನೆಗೆ ಇಳಿದಿದೆ.
ಸಮಸ್ಯೆಗಳಿಗೆ ದೊರೆಯದ ಉತ್ತರ
 ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನ ವಿಳಂಬ ನೀತಿಯಿಂದ ಮುಂದುವರಿದ ದೀರ್ಘಾವಧಿ ಧರಣಿ
 ಕಳೆದ ನಾಲ್ಕು ವರ್ಷಗಳಿಂದ ಬರ ಆವರಿಸಿದ್ದರಿಂದ ನಿರುದ್ಯೋಗ ಸಮಸ್ಯೆ. ಉದ್ಯೋಗ ಅರಸಿ ಬೇರೆ ಊರಿಗೆ ತೆರಳುತ್ತಿರುವ ಜನ
 ಅಣ್ಣಿಗೇರಿ ತಾಲೂಕಿನ ಮಜ್ಜಿಗೆಗುಡ್ಡ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ದೊರೆಯದ ಶಾಶ್ವತ ಪರಿಹಾರ
 ನವಲಗುಂದ ಪಟ್ಟಣದಲ್ಲಿ ಪಶು ಆಸ್ಪತ್ರೆ ವೈದ್ಯರ ಕೊರತೆಗೆ ದೊರೆಯದ ಸ್ಪಂದನೆ
 ಅಗ್ನಿಶಾಮಕ ದಳ ಕೇಂದ್ರ ಸ್ಥಾಪನೆಗೆ ಒತ್ತಾಯ
 ಕಳೆದ ಎರಡು ದಶಕದಿಂದ ಕೈಗಾರಿಕೆ- ಉದ್ಯೋಗವಿಲ್ಲದೆ ಕೃಷಿಯೊಂದೇ ಅವಲಂಬನೆ
 ಪಿಯು ಸರಕಾರಿ ಕಾಲೇಜು, ವೃತ್ತಿಪರ ಶಿಕ್ಷಣ ಕಾಲೇಜು ಕೊರತೆ, ವಿದ್ಯಾರ್ಥಿಗಳ ವಲಸೆ
ಕಳೆದ 15 ವರ್ಷಗಳಿಂದ ಗ್ರಾಮೀಣ ಪ್ರದೇಶದಲ್ಲಿ ಜೋಶಿಯವರು ಯಾವುದೇ ಅಭಿವೃದ್ಧಿ ಮಾಡಿಲ್ಲ. ನಮ್ಮ
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಹೀಗಾಗಿ ನಮ್ಮ ಗ್ರಾಮದಲ್ಲಿ ಮತದಾರರು ಯಾವ ಅಭ್ಯರ್ಥಿಗೂ ಮತ ನೀಡದೆ ನೋಟಾ ಚಲಾವಣೆ ಮಾಡಲು ಇಚ್ಛಿಸಿದ್ದೇವೆ.
 ವಿರೂಪಾಕ್ಷಿ ಕುಲಕರ್ಣಿ, ಗೊಬ್ಬರಗುಂಪಿ
ನಮ್ಮ ದೇಶ ಸುಭದ್ರವಾಗಿರಬೇಕಾದರೆ ಮತ್ತೂಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು. ದೇಶದ
ಸೈನಿಕರಿಗೆ ಸಂರ್ಪೂಣ ಸ್ವಾತಂತ್ರ್ಯಾ ನೀಡಿ ವಿರೋಧಿ ದೇಶಗಳಿಗೆ ತಕ್ಕ ಪಾಠ ಕಲಿಸುವ ಶಕ್ತಿ ಅವರಿಗೆ ಮಾತ್ರ ಇದೆ. ಸ್ಥಳೀಯ ಅಭ್ಯರ್ಥಿಗಳಿಗೆ ನಮ್ಮ ಮತವಲ್ಲ, ಕೇವಲ ಮೋದಿಗಾಗಿ ನನ್ನ ಮತ.
 ಆನಂದ ಮರಿಗೌಡರ ಪಾಟೀಲ, ನವಲಗುಂದ
ಡಾ| ಅಂಬೇಡ್ಕರ ಅವರು ಬರೆದ ಸಂವಿಧಾನವನ್ನು ಉಳಿಸಲು ಕೇವಲ ಕಾಂಗ್ರೆಸ್‌ ಪಕ್ಷದಿಂದ ಸಾಧ್ಯ. ನನ್ನ ಮತ ಕೇವಲ ಕಾಂಗ್ರೆಸ್‌ ಪಕ್ಷಕ್ಕೆ.
  ಮಹೆಬೂಬಅಲಿ ಕೊಪ್ಪಳ, ನವಲಗುಂದ 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.