ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲಾಗದು
Team Udayavani, Apr 17, 2019, 12:56 PM IST
ಬ್ಯಾಡಗಿ: ಆಣೂರ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿರುವ ಗ್ರಾಮಸ್ಥರ ಮನವೊಲಿಸಲಾಗಿದೆ ಎಂದು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ರೈತ ಮುಖಂಡ ಗಂಗಣ್ಣ ಎಲಿ ಹೇಳಿದರು.
ಮಂಗಳವಾರ ವಿಎಸ್ಎಸ್ ಬ್ಯಾಂಕ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಕ್ಕೆ ಎರಡೂ ಪಕ್ಷದ ನಾಯಕರು ಬಂದು ಚುನಾವಣೆ ಪ್ರಚಾರ ನಡೆಸಿದ್ದಾರೆ. ಯಾರಿಗೂ ತೊಂದರೆ ಮಾಡಬಾರದು ಎಂಬ ಉದ್ದೇಶದಿಂದ ಅವರಿಗೆ ಪ್ರಚಾರಕ್ಕೆ ಅವಕಾಶ ನೀಡಿದ್ದೇವೆ. ಆದರೆ, ಇದನ್ನೆ ಜಿಲ್ಲಾಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡಂತಿದೆ. ಸ್ವತಃ ಅವರೇ ಭೇಟಿ ನೀಡಿದ್ದಾಗ ಗ್ರಾಮಸ್ಥರೆಲ್ಲರೂ ಒಕ್ಕೋರಲಿನಿಂದ ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇವು. ಆದರೆ, ಇದೀಗ ಈ ರೀತಿಯ ಅರ್ಥವಿಲ್ಲದ ಹೇಳಿಕೆಯನ್ನು ಯಾರ ಮನವೋಲಿಸಿ ನೀಡಿದ್ದಾರೆ ಎಂಬುದನ್ನು ತಿಳಿಸಲಿ ಎಂದರು.
ಪ್ರವೀಣ ಹೊಸಗೌಡ್ರ ಮಾತನಾಡಿ, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಆಗಮಿಸಿದ್ದ ಕೇಂದ್ರ ಚುನಾವಣಾ ವೀಕ್ಷಕರು ಮತದಾನ ಮಾಡುವಂತೆ ಜನತೆಗೆ ಮನವಿ ಮಾಡಿದ್ದರು. ಆ ಸಂದರ್ಭದಲ್ಲಿ ಜನರು ಕೆರೆಗೆ ನೀರು ಬರುವವರೆಗೆ ಮತದಾನದಿಂದ ದೂರ ಉಳಿಯುವುದಾಗಿ ತಿಳಿಸಿದ್ದರು. ಇದಕ್ಕೆ ಅಧಿಕಾರಿಗಳು ಮತದಾನ ಮಾಡದಿದ್ದಲ್ಲಿ ಗ್ರಾಮಕ್ಕೆ ದೊರೆಯಲಿರುವ ಸರಕಾರಿ ಸೌಲಭ್ಯ ಕಡಿತಗೊಳಿಸುವುದಾಗಿ ಜನರಲ್ಲಿ ಭಯ ಮೂಡಿಸಿದ್ದಾರೆ. ನಿಮ್ಮ ಈ ಹೆದರಿಕೆ ಮಾತುಗಳಿಗೆ ನಾವು ಜಗ್ಗಲ್ಲ ಮತ್ತು ನಿರ್ಧಾರಿಂದ ಹಿಂದೇ ಸರಿಯಲ್ಲ ಎಂದರು.
ಪಿ.ಬಿ.ಬಣಕಾರ ಮಾತನಾಡಿ, ಸಮನ್ವಯ ಸಮಿತಿಯಲ್ಲಿ ಈಗಾಗಲೇ ಗ್ರಾಮಸ್ಥರು ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲು ಮಾಡಿದ ಮನವಿಗೆ ಸ್ಪಂದಿಸಿದ್ದಾರೆ ಎಂದು ಹೇಳಿರುವ ಜಿಲ್ಲಾಧಿಕಾರಿಗಳು, ಯಾವಾಗ ಗ್ರಾಮಕ್ಕೆ ಭೇಟಿ ನೀಡಿ ಯಾರ ಮನವೋಲಿಸಿದರು ಗೊತ್ತಾಗುತ್ತಿಲ್ಲ, 20 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ನಮ್ಮ ಸಮಸ್ಯೆಗೆ ಸ್ಪಂದಿಸದ ಸರಕಾರ ಹಾಗೂ ಅಧಿಕಾರಿಗಳು ಮೊದಲು ನಮ್ಮ ಸಮಸ್ಯೆಗೆ ಸ್ಪಂದಿಸಲಿ. ಆನಂತರ ಅವರ ಮಾತಿಗೆ ನಾವು ಸ್ಪಂದಿಸುತ್ತೇವೆ ಎಂದರು.
ಸುರೇಶ ಚಲವಾದಿ, ಜಿ.ಆರ್.ಬಡ್ಡಿಯವರ, ಸಿ.ಕೆ.ಬಡ್ಡಿವರ, ಮುರಿಗೆಪ್ಪಗಾಣಿಗೇರ, ಎಸ್. ಎಸ್.ಹಲಗೇ ರಿ, ಎನ್.ಎನ್.ಬಡ್ಡಿಯವರ ಸೇರಿದಂತೆ ಇನ್ನಿತರರಿದ್ದರು.
ಮತದಾನ ಮಾಡದಿದ್ದಲ್ಲಿ ಗ್ರಾಮಕ್ಕೆ ದೊರೆಯಲಿರುವ ಸರಕಾರಿ ಸೌಲಭ್ಯ ಕಡಿತಗೊಳಿಸುವುದಾಗಿ ಜನರಲ್ಲಿ ಭಯ ಮೂಡಿಸಿದ್ದಾರೆ. ನಿಮ್ಮ ಈ ಹೆದರಿಕೆ ಮಾತುಗಳಿಗೆ ನಾವು ಜಗ್ಗಲ್ಲ, ನಿರ್ಧಾರಿಂದ ಹಿಂದೇ ಸರಿಯಲ್ಲ.
ಗಂಗಣ್ಣ ಎಲಿ, ರೈತ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ