ತನ್ನ ಜತೆ ಕೆಟ್ಟದಾಗಿ ವರ್ತಿಸಿದ ಕಾರ್ಯಕರ್ತರ ಪುನರ್ ಸ್ಥಾಪನೆ: ಕೈ ವಕ್ತಾರೆ ಆಕ್ರೋಶ
Team Udayavani, Apr 17, 2019, 4:31 PM IST
ಹೊಸದಿಲ್ಲಿ : ತನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡ ಕಾರಣಕ್ಕೆ ಅಮಾನತುಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಅಮಾನತನ್ನು ತೆರವುಗೊಳಿಸಿರುವ ಪಕ್ಷದ ನಿರ್ಧಾರಕ್ಕೆ ದಿಲ್ಲಿ ಕಾಂಗ್ರೆಸ್ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ತೀವ್ರ ಅತೃಪ್ತಿ, ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರ ಮೇಲೆ ಪಕ್ಷದೊಳಗಿನ ಗೂಂಡಾಗಳಿಗೆ ಸವಾರಿ ಮಾಡುವುದಕ್ಕೆ ಅವಕಾಶ ನೀಡುವ ಪಕ್ಷದ ಆದ್ಯತೆಯನ್ನು ಪ್ರಿಯಾಂಕಾ ಚತುರ್ವೇದಿ ತೀವ್ರವಾಗಿ ಖಂಡಿಸಿದ್ದಾರೆ.
‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದೊಳಗೆ ಗೂಂಡಾಗಳಿಗೆ ಆದ್ಯತೆ ಸಿಗುತ್ತಿರುವುದನ್ನು ಕಂಡು ದುಃಖವಾಗಿದೆ. ಪಕ್ಷದ ಏಳಿಗೆಗಾಗಿ ಬೆವರು ಮತ್ತು ರಕ್ತ ಹರಿಸಿದವರ ಮೇಲೆ ಈ ಗೂಂಡಾಗಳು ಸವಾರಿ ಮಾಡುತ್ತಿದ್ದಾರೆ. ನನ್ನೊಂದಿಗೆ ಕೆಟ್ಟದಾಗಿ ವರ್ತಿಸಿ ನನಗೇ ಬೆದರಿಕೆ ಹಾಕಿದ್ದ ಈ ಗೂಂಡಾಗಳು ಹಿಂದೊಮ್ಮೆ ಅಮಾನುತಗೊಂಡಿದ್ದರು. ಅವರ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಳ್ಳದೆ ಇದೀಗ ಅವರ ಅಮಾನತನ್ನು ಪಕ್ಷ ನಾಯಕತ್ವ ತೆರವುಗೊಳಿಸಿ ಅವರನ್ನು ಪುನರ್ ಸ್ಥಾಪಿಸಿರುವುದು ಅತ್ಯಂತ ದುರದೃಷ್ಟಕರ’ ಎಂದು ಪ್ರಿಯಾಂಕಾ ಚತುರ್ವೇದಿ ತಮ್ಮ tweet ನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ