ಅಹಿಂಸೆಯೇ ನಾಗರಿಕ ಸಮಾಜದ ಸ್ವತ್ತು


Team Udayavani, Apr 18, 2019, 3:00 AM IST

ahimseye

ಮೈಸೂರು: ಹಿಂಸೆ ಮತ್ತು ಯುದ್ಧವೇ ಎಲ್ಲದಕ್ಕೂ ಕೊನೆಯಲ್ಲ, ಅಹಿಂಸೆಯೇ ನಾಗರಿಕ ಸಮಾಜದ ಸ್ವತ್ತು ಎಂಬುದು ಭಗವಾನ್‌ ಮಹಾವೀರರ ತತ್ವ ಎಂದು ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

ಮಹಾವೀರ ಜಯಂತಿ ಅಂಗವಾಗಿ ಮೈಸೂರಿನ ಮಹಾವೀರ ಸೇವಾ ಸಂಸ್ಥಾನ್‌ ವತಿಯಿಂದ ಎಂ.ಎಲ್‌.ವರ್ಧಮಾನಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ಮಹಾವೀರ ಅಹಿಂಸಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಹಾವೀರರು ಶಾಂತಿಯ ಸಂಕೇತ ಮತ್ತು ರೂವಾರಿ. ಜಗತ್ತಿನಲ್ಲಿ ಎಲ್ಲಾ ಪ್ರವಾದಿಗಳು ಹುಟ್ಟಿದ್ದಾರೆ. ಆದರೆ, ಅಹಿಂಸೆಗಾಗಿ ಹುಟ್ಟಿದ ಪ್ರವಾದಿ ಎಂದರೆ ಅದು ಮಹಾವೀರ ಮಾತ್ರ. ಶಾಂತಿ ಮತ್ತು ಅಹಿಂಸೆ ಸಾರಿದವರು ಮಹಾವೀರ ಮತ್ತು ಬುದ್ಧ.

ಈ ಜಗತ್ತಿನಲ್ಲಿ ವಿಷಮ ಸ್ಥಿತಿ ಎದುರಾಗಿದೆ, ಎಲ್ಲಾ ರಾಷ್ಟ್ರಗಳಲ್ಲಿಯೂ ಭೂಮಿಯನ್ನು ಕ್ಷಣಾರ್ಧದಲ್ಲಿ ನಾಶ ಪಡಿಸುವ ಅಣ್ವಸ್ತ್ರಗಳಿವೆ. ಇದಕ್ಕೆಲ್ಲ ಒಂದೇ ಪರಿಹಾರ ಮಾರ್ಗ ಅದು ಮಹಾವೀರರ ಅಹಿಂಸಾ ತತ್ವ ಎಂದು ತಿಳಿಸಿದರು.

ಉರಿಯುವ ಬೆಂಕಿ ಮುಟ್ಟಿದರೆ ಅದು ಹಿಂಸೆ. ಅದೇ ಬೆಂಕಿಯ ಬೆಳಕಲ್ಲಿ ಪುಸ್ತಕ ಓದಿ ಜ್ಞಾನ ಸಂಪಾದಿಸಿದರೆ ಅಹಿಂಸೆಯಾಗುತ್ತದೆ ಎಂದ ಅವರು, ಮಹಾವೀರ, ಬುದ್ಧ, ಬಸವಣ್ಣ ಸಾರಿದ ಅಹಿಂಸಾ ತತ್ವವನ್ನು ಗಾಂಧಿ ಮತ್ತು ಅಂಬೇಡ್ಕರ್‌ ಅನುಸರಿಸಿದರು.

ಮುಂದೆ ನಾವುಗಳು ಮಹಾವೀರರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕು ಎಂದು ಅವರು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಪ್ರೊ. ನಂಜಪ್ಪ ವೆಂಕೋಬರಾವ್‌ ಅವರಿಗೆ ಮಹಾವೀರ ಅಹಿಂಸಾ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ದಿಗಂಬರ ಜೈನ ಸಮಾಜದ ಅಧ್ಯಕ್ಷ ಎಂ.ಆರ್‌.ಸುನೀಲ್‌ ಕುಮಾರ್‌, ಜೈನ ಮಹಿಳಾ ಸಮಾಜದ ಅಧ್ಯಕ್ಷೆ ಶೀಲಾ ಅನಂತರಾಜ್‌, ಮಹಾವೀರ ಭವನ ನಿರ್ಮಾಣ ಅಧ್ಯಕ್ಷ ಸುಧೀರ್‌ ಕುಮಾರ್‌, ಎಂ.ಎಲ್‌.ಜೈನ್‌ ಬೋರ್ಡಿಂಗ್‌ ಹೋಮ್‌ನ ಕಾರ್ಯದರ್ಶಿ ಶ್ಯಾಮಲಾ ಮದನ್‌ಕುಮಾರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.