ದೇವೇಗೌಡರ ಕುಟುಂಬಕ್ಕೆ ಮಾತ್ರ ಕಣ್ಣೀರ ಪೇಟೆಂಟ್: ಶೆಟ್ಟರ್
Team Udayavani, Apr 18, 2019, 3:00 AM IST
ಹೂವಿನಹಡಗಲಿ: “ರಾಜ್ಯದಲ್ಲಿ ಕಣ್ಣೀರಿನ ಪೇಟೆಂಟ್ ಯಾರಿಗಾದರೂ ಕೊಡಬೇಕಾಗಿದ್ದರೆ ಅದು, ದೇವೇಗೌಡ ಮತ್ತು ಅವರ ಕುಟುಂಬಕ್ಕೆ ಮಾತ್ರ ಕೊಡಬೇಕು. ಅವರ ಕುಟುಂಬದವರೆಲ್ಲರೂ ಸಮಯ, ಸಂದರ್ಭ ನೋಡಿಕೊಂಡು ಮಾತು, ಮಾತಿಗೂ ಬಹಳ ಚೆನ್ನಾಗಿ ಕಣ್ಣೀರು ಹಾಕುತ್ತಾರೆ’ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅವರ ಮಗನ ಸೋಲಿನ ಭೀತಿಯಿಂದಾಗಿ ಕಳೆದ 3 ದಿನಗಳಿಂದ ಮಂಡ್ಯದಲ್ಲಿಯೇ ಠಿಕಾಣಿ ಹೂಡಿದ್ದರು. ಮಗನನ್ನು ಗೆಲ್ಲಿಸಲು ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರಲ್ಲದೆ ಏನೆಲ್ಲ ತಂತ್ರಗಾರಿಕೆ ನಡೆಸುತ್ತಾ ತೊಳಲಾಡುತ್ತಿದ್ದಾರೆ ಎಂದರು.
ದೇವೇಗೌಡರ ಕುಟುಂಬ ರಾಜಕಾರಣದಲ್ಲಿ ಸುಖೀ ಕುಟುಂಬವಾಗಬೇಕಾದರೆ ಚೆನ್ನಮ್ಮ ಅವರನ್ನು ರಾಜ್ಯಸಭೆಗೆ ಕಳುಹಿಸಬೇಕು. ಇದಕ್ಕೆ ಒಮ್ಮೆ ಅವಕಾಶ ಮಾಡಿಕೊಟ್ಟರೆ, ದೇವೇಗೌಡರದು ರಾಜಕಾರಣದ ಸಂಪೂರ್ಣ ಸುಖೀ ಕುಟುಂಬವಾಗುತ್ತದೆ ಎಂದು ಶೆಟ್ಟರ್ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್
Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ
Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ
MUST WATCH
ಹೊಸ ಸೇರ್ಪಡೆ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Covishield Vaccine; ಹಾಕಿಸಿಕೊಂಡವರು ಐಸ್ಕ್ರೀಮ್ ತಿನ್ನಬಾರದಾ?