ಸುಗಮ ಚುನಾವಣೆಗೆ ಸನ್ನದ್ಧ; ಅಚ್ಚುಕಟ್ಟಿಗೆ ಆದ್ಯತೆ


Team Udayavani, Apr 18, 2019, 6:30 AM IST

sugama-chunavane

ಉಡುಪಿ: ಗುರುವಾರ ನಡೆಯುವ ಮತದಾನ ಪ್ರಕ್ರಿಯೆ ನಡೆಸಿಕೊಡಲು ಅಧಿಕಾರಿ, ಸಿಬಂದಿ ಬುಧವಾರದಂದು ಉಡುಪಿ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್‌ ಕೇಂದ್ರವಾದ ಅಜ್ಜರಕಾಡು ಸೈಂಟ್‌ ಸಿಸಿಲೀಸ್‌ ಶಾಲೆಯಿಂದ ವಿವಿಪ್ಯಾಟ್‌ ಸಹಿತವಾದ ಮತಯಂತ್ರ ಹಾಗೂ ಇತರ ಪರಿಕರಗಳೊಂದಿಗೆ ನಿಯೋಜಿತ ಮತಗಟ್ಟೆಗಳಿಗೆ ತೆರಳಿದರು.

ಉಡುಪಿ ಜಿಲ್ಲಾಧಿಕಾರಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಎಸ್‌ಪಿ ನಿಶಾ ಜೇಮ್ಸ್‌, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ಉಡುಪಿ ವಿ.ಭಾ ಕ್ಷೇತ್ರದ ಚುನಾವಣಾಧಿಕಾರಿ ಕೆಂಪೇಗೌಡ ಅವರ ಮೇಲುಸ್ತುವಾರಿಯಲ್ಲಿ ಮಸ್ಟರಿಂಗ್‌ ಪ್ರಕ್ರಿಯೆ ಬೆಳಗ್ಗೆ ಆರಂಭಗೊಂಡಿತು. ಮಧ್ಯಾಹ್ನ 2.30ರ ವೇಳೆಗೆ ಸುಮಾರು 2,000 ಮಂದಿ ಅಧಿಕಾರಿ,ಸಿಬಂದಿ ಮತದಾನ ಕೇಂದ್ರಗಳಿಗೆ ಬಸ್‌, ಮ್ಯಾಕ್ಸಿಕ್ಯಾಬ್‌ಗಳಲ್ಲಿ ತೆರಳಿದರು.

ಅಚ್ಚುಕಟ್ಟು ವ್ಯವಸ್ಥೆ
ತಮಗೆ ನಿಯೋಜಿತವಾದ ಮತಗಟ್ಟೆಯ ಮಾಹಿತಿ ಪಡೆಯಲು ಈ ಹಿಂದೆ ಕೆಲವೊಮ್ಮೆ ಅಧಿಕಾರಿಗಳು,ಸಿಬಂದಿ ಪರದಾಡುವ ಸ್ಥಿತಿ ಇತ್ತು. ಮತಗಟ್ಟೆಗಳಿಗೆ ತೆರಳುವ ವಾಹನಗಳ ಬಗ್ಗೆಯೂ ಗೊಂದಲ ಉಂಟಾಗುತ್ತಿತ್ತು. ಆದರೆ ಈ ಬಾರಿ ಇಂತಹ ಗೊಂದಲಗಳಿಗೆ ಅವಕಾಶವಿರಲಿಲ್ಲ. ಬಸ್‌ಗಳ ರೂಟ್‌, ಮತಗಟ್ಟೆಯ ವಿವರವನ್ನೊಳಗೊಂಡ ಮಾಹಿತಿ ಫ‌ಲಕವನ್ನು ಕೂಡ ಅಳವಡಿಸಲಾಗಿತ್ತು.

ಬಸ್‌ಗಳು ಮಸ್ಟರಿಂಗ್‌ ಕೇಂದ್ರದ ಎದುರಿನ ಮೈದಾನದಲ್ಲಿ ಒಂದೇ ಕಡೆ ನಿಲುಗಡೆಯಾಗಲು ಅವಕಾಶ ಮಾಡಿಕೊಡಲಾಗಿತ್ತು. ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಿಸಲಾಗಿತ್ತು. ತಹಶೀಲ್ದಾರ್‌ ಅವರು ಸ್ಥಳದಲ್ಲಿದ್ದು ನಿಗಾ ವಹಿಸಿದ್ದರು.

ಒಟ್ಟು 2,250 ಮಂದಿಗೆ ಉಪಾಹಾರ ಹಾಗೂ ಪಾಯಸ ಸಹಿತವಾದ ಊಟ ಒದಗಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿಯವರ ನೇತೃತ್ವದಲ್ಲಿ ಮೂವರು ವೈದ್ಯರು ಮತ್ತು ದಾದಿಯರನ್ನೊಳಗೊಂಡ ವೈದ್ಯಕೀಯ ತಂಡ ಅಗತ್ಯವಿದ್ದ ಸಿಬಂದಿಗೆ ಚಿಕಿತ್ಸೆ ನೀಡಿತು.

ಪ್ರತಿ ಮತಗಟ್ಟೆಗೆ 1,800 ರೂ.
ಪ್ರತಿ ಮತಗಟ್ಟೆಗೂ ಸಿಬಂದಿಗೆ ಉಪಾಹಾರ ಮತ್ತು ಊಟಕ್ಕಾಗಿ ಈಗಾಗಲೇ 1,800 ರೂ.ಗಳನ್ನು ಮತಗಟ್ಟೆ (ಶಾಲೆ) ಮುಖ್ಯೋಪಾಧ್ಯಾಯರಿಗೆ ನೀಡಲಾಗಿದೆ. ಅಲ್ಲದೆ ಪ್ರತಿ ಮತಗಟ್ಟೆಗೆ 20 ಲೀಟರ್‌ನ 2 ಕ್ಯಾನ್‌ ಕುಡಿಯುವ ನೀರು ಒದಗಿಸಲಾಗುತ್ತದೆ. ಅಗತ್ಯಬಿದ್ದರೆ ಹೆಚ್ಚುವರಿ ನೀರು ಒದಗಿಸಲಾಗುತ್ತದೆ. ಸಿಬಂದಿಗೆ ಮೆಡಿಕೆಲ್‌ ಕಿಟ್‌ನ್ನು ನೀಡಲಾಗುತ್ತದೆ ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಬ್ಯಾಂಡೇಜ್‌ ಹಾಕಿದರೂ ಕುಗ್ಗದ ಉತ್ಸಾಹ
ಚುನಾವಣಾ ಕರ್ತವ್ಯ ದೃಢಪತ್ರ(ಇಡಿಸಿ) ಪಡೆಯಲು ಮಸ್ಟರಿಂಗ್‌ ಕೇಂದ್ರಕ್ಕೆ ಆಗಮಿಸಿದ್ದ ಶೀರೂರಿನ ಶಾಲೆಯೊಂದರ ಶಿಕ್ಷಕ ಗಿರೀಶ್‌ ಅವರು ಇತ್ತೀಚೆಗೆ ಮನೆ ಸಮೀಪ ಬಿದ್ದು ಕೈ ಮುರಿತವಾಗಿತ್ತು. ಕೈಗೆ ಬ್ಯಾಂಡೇಜ್‌ ಹಾಕಿಕೊಂಡೇ ಚುನಾವಣಾ ಕರ್ತವ್ಯಕ್ಕಾಗಿ ಆಗಮಿಸಿದ್ದರು. “ನನಗೆ ವಿನಾಯಿತಿ ಕೇಳಿದರೆ ಕೊಡುತ್ತಾರೆ. ಆದರೆ ನಾನು ಆಸಕ್ತಿಯಿಂದ ಕರ್ತವ್ಯಕ್ಕೆ ಬಂದಿದ್ದೇನೆ. ನನ್ನಿಂದ ಆಗುವ ಕೆಲಸ ಮಾಡುತ್ತೇನೆ. ಈ ಹಿಂದೆ ಹಲವು ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದೆ’ ಎಂದು ಗಿರೀಶ್‌ ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.